Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಹಲವಾರು...

ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಹಲವಾರು ಉದ್ಯೋಗಗಳಿಗೆ ವಿದೇಶಿಯರ ನೇಮಕಾತಿ ನಿಷೇಧಿಸಲಿರುವ ಸೌದಿ ಅರೇಬಿಯಾ

ವಾರ್ತಾಭಾರತಿವಾರ್ತಾಭಾರತಿ29 July 2019 11:50 PM IST
share
ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಹಲವಾರು ಉದ್ಯೋಗಗಳಿಗೆ ವಿದೇಶಿಯರ ನೇಮಕಾತಿ ನಿಷೇಧಿಸಲಿರುವ ಸೌದಿ ಅರೇಬಿಯಾ

ರಿಯಾದ್, ಜು.29: ವರ್ಷಾಂತ್ಯದ ವೇಳೆಗೆ ಹೋಟೆಲ್ ಉದ್ಯಮ ಕ್ಷೇತ್ರದಲ್ಲಿಯ ಹಲವಾರು ಉದ್ಯೋಗಗಳಿಗೆ ವಿದೇಶಿಯರ ನೇಮಕಾತಿಯನ್ನು ನಿಷೇಧಿಸಲು ಮತ್ತು ಅವುಗಳನ್ನು ತನ್ನ ಪ್ರಜೆಗಳಿಗೆ ಮೀಸಲಾಗಿಸಲು ಸೌದಿ ಅರೇಬಿಯಾ ಯೋಜಿಸುತ್ತಿದೆ.

 ಶುಕ್ರವಾರ ಕಾರ್ಮಿಕ ಸಚಿವಾಲಯವು ಪ್ರಕಟಿಸಿರುವ ಸರಕಾರದ ನಿರ್ಧಾರವು ರೆಸಾರ್ಟ್‌ಗಳು, ತ್ರಿತಾರಾ ಮತ್ತು ಹೆಚ್ಚಿನ ದರ್ಜೆಯ ಹೋಟೆಲ್‌ಗಳು ಹಾಗೂ ಚತುರ್ತಾರಾ ಮತ್ತು ಹೆಚ್ಚಿನ ದರ್ಜೆಯ ಹೋಟೆಲ್ ಅಪಾರ್ಟ್‌ಮೆಂಟ್‌ಗಳಿಗೆ ಅನ್ವಯಿಸಲಿದೆ.

ಫ್ರಂಟ್ ಡೆಸ್ಕ್ ಉದ್ಯೋಗದಿಂದ ಹಿಡಿದು ಆಡಳಿತದವರೆಗೆ ವಿವಿಧ ಹುದ್ದೆಗಳಿಗೆ ಸೌದಿ ಪ್ರಜೆಗಳ ನೇಮಕವು ಕಡ್ಡಾಯವಾಗಿದ್ದು,ಚಾಲಕರು,ದ್ವಾರಪಾಲಕರು ಮತ್ತು ಪೋರ್ಟರ್‌ಗಳ ಹುದ್ದೆಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ ಎಂದು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ. ರೆಸ್ಟೋರಂಟ್ ಸ್ವಾಗತಕಾರರು ಮತ್ತು ಹೆಲ್ತ್ ಕ್ಲಬ್ ಸುಪರವೈಸರ್ ಹುದ್ದೆಗಳಿಗೂ ಸೌದಿ ಪ್ರಜೆಗಳನ್ನು ನೇಮಿಸಬೇಕಿದೆ.

ಶೈಶವಾವಸ್ಥೆಯಲ್ಲಿರುವ ತನ್ನ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಲು ಪ್ರಯತ್ನಿಸುತ್ತಿರುವ ಸೌದಿ ಅರೇಬಿಯಾ ತನ್ನ ಪ್ರಜೆಗಳ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲೂ ಹೆಣಗಾಡುತ್ತಿದೆ. ನಿರುದ್ಯೋಗದ ಪ್ರಮಾಣ ಕಳೆದ ವರ್ಷ ಶೇ.13ಕ್ಕೇರಿದೆ.

 ಹೋಟೆಲ್ ಉದ್ಯಮವು ಖಾಸಗಿ ಕ್ಷೇತ್ರದಲ್ಲಿ ಉನ್ನತ ಹುದ್ದೆಗಳಲ್ಲಿ ಪ್ರಾಬಲ್ಯ ಹೊಂದಿರುವ ವಿದೇಶಿಯರ ಬದಲಿಗೆ ತನ್ನ ಪ್ರಜೆಗಳನ್ನು ನೇಮಕಗೊಳಿಸುವ ಉದ್ದೇಶದ ‘ಸೌದೀಕರಣ’ದ ಕಟ್ಟುನಿಟ್ಟಿನ ನೀತಿಗಳನ್ನು ಎದುರಿಸುತ್ತಿರುವ ಇತ್ತೀಚಿನ ಕ್ಷೇತ್ರವಾಗಿದೆ.

ಅಗ್ಗದ ವಿದೇಶಿ ಕಾರ್ಮಿಕ ಪಡೆಯನ್ನು ಅತಿಯಾಗಿ ನೆಚ್ಚಿಕೊಂಡಿರುವ ಈ ದೇಶದಲ್ಲಿ ಸೌದಿಗಳಿಗೆ ಉದ್ಯೋಗಗಳ ಸೃಷ್ಟಿಗಾಗಿ ಇಂತಹ ನೀತಿಗಳು ಅಗತ್ಯವಾಗಿವೆ ಎನ್ನುತ್ತಾರೆ ಅಧಿಕಾರಿಗಳು. ಆದರೆ ಸೌದೀಕರಣದಿಂದ ವೇತನ ವೆಚ್ಚಗಳು ಹೆಚ್ಚಾಗುತ್ತವೆ ಮತ್ತು ಉತ್ಪಾದಕತೆ ಕಡಿಮೆಯಾಗುತ್ತದೆ ಎಂದು ಕೆಲವು ಉದ್ಯಮಗಳು ದೂರಿಕೊಂಡಿವೆ.

ಡಿ.29ಕ್ಕೆ ಹೊಂದಿಕೆಯಾಗುವ ಇಸ್ಲಾಮಿಕ್ ಕ್ಯಾಲೆಂಡರ್ ದಿನಾಂಕದಿಂದ ಈ ನಿರ್ಧಾರವು ಜಾರಿಗೊಳ್ಳಲಿದೆ. ಹಲವಾರು ಹೋಟೆಲ್‌ಗಳು ಇತ್ತೀಚಿನ ವರ್ಷಗಳಲ್ಲಿ ಫ್ರಂಟ್ ಆಫೀಸ್ ಹುದ್ದೆಗಳಿಗೆ ಸೌದಿ ಪ್ರಜೆಗಳನ್ನು ನೇಮಕ ಮಾಡಿಕೊಳ್ಳುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X