Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷಕ್ಕೆ ದ್ರೋಹ ಬಗೆದ ಶಾಸಕರಿಗೆ ಅನರ್ಹ...

ಪಕ್ಷಕ್ಕೆ ದ್ರೋಹ ಬಗೆದ ಶಾಸಕರಿಗೆ ಅನರ್ಹ ಶಿಕ್ಷೆ ಐತಿಹಾಸಿಕ ತೀರ್ಪು: ಡಿ.ಬಸವರಾಜ್

ವಾರ್ತಾಭಾರತಿವಾರ್ತಾಭಾರತಿ29 July 2019 11:57 PM IST
share
ಪಕ್ಷಕ್ಕೆ ದ್ರೋಹ ಬಗೆದ ಶಾಸಕರಿಗೆ ಅನರ್ಹ ಶಿಕ್ಷೆ ಐತಿಹಾಸಿಕ ತೀರ್ಪು: ಡಿ.ಬಸವರಾಜ್

ದಾವಣಗೆರೆ, ಜು.29: ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆದ ಶಾಸಕರಿಗೆ ಅನರ್ಹ ಶಿಕ್ಷೆ ನೀಡಿರುವುದು ದೇಶದ ಇತಿಹಾಸದಲ್ಲಿಯೇ ಐತಿಹಾಸಿಕ ತೀರ್ಪು, ಪ್ರಜಾಪ್ರಭುತ್ವದ ಗೆಲವು ಎಂದು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಮಾಜಿ ಅಧ್ಯಕ್ಷ ಡಿ. ಬಸವರಾಜ್ ಹೇಳಿದರು. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಂವಿಧಾನ ಪರಿಚ್ಚೇದ ಹತ್ತರ ಅನ್ವಯ ಅವರು ಸಂವಿಧಾನದಲ್ಲಿ ತಮಗೆ ನೀಡಲಾಗಿರುವ ಪರಮೋಚ್ಚ ಅಧಿಕಾರವನ್ನು ಪ್ರಯೋಗ ಮಾಡಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು ಉಳಿಸಿದ್ದಾರೆ. ಸ್ಪೀಕರ್ ಅಧಿಕಾರದಲ್ಲಿ ಸುಪ್ರೀಂ ಕೋರ್ಟ್ ಸಹ ಹಸ್ತಕ್ಷೇಪ ಮಾಡುವಂತಿಲ್ಲವೆಂದು ಸಂವಿಧಾನ ಪೀಠವೇ ಈ ಹಿಂದೆ ತೀರ್ಪು ನೀಡಿದೆ. ಸ್ಪೀಕರ್ ತೀರ್ಪು ನ್ಯಾಯ ಸಮ್ಮತವಾಗಿದೆ ಎಂದರು. 

ಈಗ ಅನರ್ಹಗೊಂಡಿರುವ ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡಿ, ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರ ಶ್ರಮದ ಫಲವಾಗಿ ಅವರು ಶಾಸಕರಾಗಿ ಆಯ್ಕೆ ಆಗಿದ್ದಾರೆ. ಬಿಜೆಪಿಯ ಆಸೆ ಅಮಿಷಗಳಿಗೆ ಬಲಿಯಾಗಿ ತಮ್ಮ ರಾಜಕೀಯ ಭವಿಷ್ಯವನ್ನೇ ಹಾಳು ಮಾಡಿಕೊಂಡಿದ್ದಾರೆಂದರು. 
ಬಿ.ಎಸ್.ಯಡಿಯೂರಪ್ಪ ಅಧಿಕಾರ ದಾಹಕ್ಕೆ ಮತ್ತು ಅವರ ಕುತಂತ್ರಕ್ಕೆ ಕಾಂಗ್ರೆಸ್, ಜೆಡಿಎಸ್ ಶಾಸಕರು ಬಲಿಯಾಗಿದ್ದಾರೆ. ರಾಜಮಾರ್ಗದಿಂದ ಅಧಿಕಾರಕ್ಕೆ ಬಂದಿಲ್ಲ. ಅವರು ವಾಮ ಮಾರ್ಗದಿಂದಲೇ ಅಧಿಕಾರಕ್ಕೆ ಬರುತ್ತಿದ್ದು, ಅವರಿಗೆ ಭವಿಷ್ಯವಿಲ್ಲವೆಂದು ತಿಳಿಸಿದರು.  

ಕಾಂಗ್ರೆಸ್ ಶಾಸಕರು ಅನರ್ಹಗೊಂಡಿರುವುದರಿಂದ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ನಷ್ಟವೆಂದು ನಾವು ಆಂತಕ ಪಡಬೇಕು. ಆದರೆ ಇದಕ್ಕೆ ಬದಲಾಗಿ ಬಿಜೆಪಿಯವರಿಗೆ ಆಂತಕ ಜಾಸ್ತಿಯಾಗಿದೆ. ಏಕೆಂದರೆ ಅಪರೇಷನ್ ಕಮಲಕ್ಕೆ ಒಳಗಾಗಿರುವ ಶಾಸಕರ ಪರ ನಾವಿದ್ದೇವೆಂದು ನಾಟಕವನ್ನು ಬಿಜೆಪಿ ಆಡುತ್ತಿದೆ. ಸರ್ಕಾರದಲ್ಲಿರುವ ಎಲ್ಲಾ 34 ಸಚಿವ ಹುದ್ದೆಗಳು ತಮ್ಮ ಪಕ್ಷಕ್ಕೆ ಬರಲಿವೆ ಎಂದು ಸಂತಸದಲ್ಲಿರುವ ಬಿಜೆಪಿಯವರಿಗೆ ಶಾಸಕರು ಅನರ್ಹಗೊಂಡಿರುವುದು ಸಂತೋಷವಾಗಿದೆ. ಪಕ್ಷಾಂತರ ಕಾಯ್ದೆಯನ್ನು ಇನ್ನಷ್ಟು ಬಲಗೊಳಿಸಬೇಕು. ಪಕ್ಷಾಂತರ ಮಾಡಿದ ಶಾಸಕರು ಮತ್ತು ಸಂಸದರಿಗೆ ಹತ್ತು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸದಂತೆ ಕಾಯ್ದೆಗೆ ಶಕ್ತಿ ತುಂಬಬೇಕು. ಸುಪ್ರೀಂಕೋರ್ಟ್ ಇಂತಹ ಪ್ರಕರಣಗಳಿಗೆ ಜೀವ ನೀಡದೆ ನಿರ್ದಾಕ್ಷಣ್ಯವಾಗಿ ಕಠಿಣ ಕ್ರಮ ಕೈಗೊಂಡು ಸ್ಪೀಕರ್ ತೀರ್ಮಾನಕ್ಕೆ ಮಾನ್ಯತೆ ನೀಡಬೇಕು. ಆಯಾ ಪಕ್ಷದ ಶಾಸಕಾಂಗ ಪಕ್ಷದ ನಾಯಕರಿಗೆ ವಿಪ್ ನೀಡುವ ಸಂವಿಧಾನ ಬದ್ಧ ಅಧಿಕಾರವನ್ನು ಮೊಟಕುಗೊಳಿಸಬಾರದು. ಸುಪ್ರೀಂ ಕೋರ್ಟ್ ಇದನ್ನು ಎತ್ತಿಹಿಡಿಯಬೇಕೆಂದು ಅವರು ಆಗ್ರಹಿಸಿದರು.   

ಜಿಲ್ಲಾ ಅಸಂಘಟಿತರ ಕಾರ್ಮಿಕರ ಜಿಲ್ಲಾಧ್ಯಕ್ಷ ಎಸ್. ಮಂಜನಾಯ್ಕ್, ಜಯಪ್ರಕಾಶ್, ಲಿಯಾಖತ್ ಅಲಿ, ಎ.ಅಬ್ದುಲ್ ಜಬ್ಬಾರ್, ಹರೀಶ್, ಸಂದೀಪ್, ಸುರಜ್, ಡಿ. ಶಿವಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X