Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಹಿಂದೂ ಅಸ್ಮಿತೆಯ ರಾಜಕಾರಣದ ಸುತ್ತ

ಹಿಂದೂ ಅಸ್ಮಿತೆಯ ರಾಜಕಾರಣದ ಸುತ್ತ

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ31 July 2019 4:35 PM IST
share

ಸ್ವಾತಂತ್ರೋತ್ತರ ಭಾರತೀಯ ಸಂದರ್ಭ-ವಿಶೇಷವಾಗಿ ಸುಮಾರು 1980ರ ದಶಕದಿಂದ ಇತ್ತೀಚೆಗೆ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಆಯಾಮಗಳಿಗೆ ಸಂಬಂಧಿಸಿದಂತೆ ಹೊಸ ಹೊಸ ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ. ಅದು ಗತ ಮತ್ತು ಚರಿತ್ರೆಯನ್ನು ಆಧರಿಸಿ ವರ್ತಮಾನವನ್ನು ವಿವರಿಸುತ್ತಾ ವರ್ತಮಾನವೇ ಗತ ಅಥವಾ ಚರಿತ್ರೆಯ ನಿರೂಪಣೆ ಎಂಬಂತೆ ಕಾಣಿಸುತ್ತಿದೆ. ಹಿಂದೂ ಅಸ್ಮಿತೆಯ ಪ್ರಶ್ನೆ ಕೂಡಾ ಇಂತಹ ಗೋಜಲಿನ ಒಂದು ರೂಪಕವಷ್ಟೇ. ಅದಕ್ಕೆ ಭಾರತದಲ್ಲಿ ಚರಿತ್ರಕಾರರು, ಸಮಾಜಶಾಸ್ತ್ರಜ್ಞರು ಮತ್ತು ವಿದ್ವಾಂಸರು ಹಲವು ರೀತಿಯಲ್ಲಿ ತಾತ್ವಿಕವಾಗಿ ಮುಖಾಮುಖಿಯಾಗಿ ಅತ್ಯಂತ ಪ್ರಮುಖ ಪ್ರಶ್ನೆಗಳನ್ನು ಒಡ್ಡಿದರು. ಅಂತಹವರಲ್ಲಿ ಒಬ್ಬರಾದ ಡಿ. ಎನ್. ಝಾ ಅವರು ಕೇಳಿದ ಪ್ರಶ್ನೆ, ವಿಶ್ಲೇಷಣೆ ಮತ್ತು ವಾದ ಸರಣಿಯ ಪ್ರತಿಮೆಯೇ ‘ಹಿಂದೂ ಅಸ್ಮಿತೆಗಾಗಿ ಹುಡುಕಾಟ’ ಎನ್ನುವ ಕಿರು ಕೃತಿ. ಪ್ರದೀಪ ಕುಮಾರ ಶೆಟ್ಟಿ ಕೆ. ಅವರು ಇದನ್ನು ಕನ್ನಡಕ್ಕೆ ತಂದಿದ್ದಾರೆ.

‘‘...ಇತ್ತೀಚಿನ ದಿನಗಳಲ್ಲಿ ಭಾರತೀಯ ರಾಷ್ಟ್ರೀಯ ಅಸ್ಮಿತೆ ಅಥವಾ ಐಡೆಂಟಿಟಿಯನ್ನು ಹಿಂದೂ ಧಾರ್ಮಿಕ ರಾಷ್ಟ್ರೀಯವಾದದ ಮೂಲಕ ಗುರುತಿಸುವ ಕಾತರ ಮತ್ತು ಅಪರಿಮಿತ ಕುತೂಹಲವು ಹಿಂದೂ ಬಲಪಂಥೀಯ ಕೋಮುವಾದಿ ಗುಂಪುಗಳಿಂದ ವಿಪುಲವಾಗಿ ಎಗ್ಗಿಲ್ಲದೆ ನಡೆಯುತ್ತಿದೆ. ತನ್ಮೂಲಕ ಅವು ತೀವ್ರವಾದ ಹಿಂಗೆ ಮತ್ತು ಅಸಹನೆಯ ಹಿಂದೂ ಮೂಲಭೂತವಾದ ಅಥವಾ ಇದಮಿತ್ಥಂ ವಾದದ ಮೂಲಕ ಅದನ್ನೇ ಹಿಂದೂ ಧರ್ಮವೆಂದು ಪ್ರಚಾರ ನಡೆಸುತ್ತಿವೆ. ಅವುಗಳು ಪ್ರಾಚೀನ ಭಾರತೀಯ ಧಾರ್ಮಿಕ ಪಠ್ಯಗಳಿಂದ ಪ್ರೇರಣೆಯನ್ನು ಪಡೆದಿವೆಯೆಂದು ತಮ್ಮನ್ನು ನ್ಯಾಯಬದ್ಧಗೊಳಿಸಿಕೊಳ್ಳಲು ಪ್ರಯತ್ನ ಪಡುತ್ತಿವೆ. ಆದರೆ ಈ ಪ್ರಕ್ರಿಯೆಯಲ್ಲಿ ಅವರು ಈ ಪಠ್ಯಗಳನ್ನು ತಿರುಚಿದ ಮತ್ತು ತಪ್ಪಾಗಿ ಅರ್ಥೈಸಿದ ಬಗ್ಗೆ ಸ್ವಲ್ಪವೂ ತಲೆಕೆಡಿಸಿಕೊಳ್ಳುವುದಿಲ್ಲ. ಅವುಗಳನ್ನು ತೀರಾ ಕೃತಕವಾಗಿ ಪುನರ್‌ಸೃಷ್ಟಿಸಲಾಗುತ್ತಿದೆ. ಹೀಗೆ ಇಂತಹ ಪ್ರಕ್ರಿಯೆಯಲ್ಲಿ ಇನ್ನೂ ಹಲವು ಮಿಥ್ಯೆಗಳನ್ನು ಸೃಷ್ಟಿಸಲಾಗುತ್ತಿದೆ....’’ ಎನ್ನುವ ಝಾ, ಆ ಮಿಥ್ಯೆಗಳನ್ನು ಬಯಲು ಮಾಡುವ ಕೆಲಸವನ್ನು ಈ ಕೃತಿಯ ಮೂಲಕ ಮಾಡುತ್ತಾರೆ.

ಧರ್ಮದ ಅಧ್ಯಯನವನ್ನು ಧರ್ಮದ ವಿದ್ವಾಂಸರುಗಳಿಂದ ಸ್ವತಂತ್ರಗೊಳಿಸಬೇಕಾಗಿದೆ. ಧರ್ಮದ ವಿದ್ವಾಂಸರು ಇಂತಹ ಮಿಥ್ಯೆಗಳನ್ನು ಹಾಗೂ ಕಲ್ಪಿತ ಕಥೆಗಳನ್ನು ಇನ್ನೂ ಬಲಪಡಿಸುವ ಕಾರಣ ಅವು ಧಾರ್ಮಿಕ ಮೂಲಭೂತವಾದಕ್ಕೆ ಸಾಮಗ್ರಿಯಾಗುತ್ತವೆ. ಧರ್ಮದ ಬಗೆಗಿನ ಅಧ್ಯಯನವನ್ನು ನೈಜ, ವಸ್ತುನಿಷ್ಠ ಚರಿತ್ರೆಯ ಆಧಾರದ ಮೇಲೆ ಅಧ್ಯಯನ ಮಾಡಬೇಕಾಗಿದೆ ಎಂದು ಝಾ ವಾದಿಸುತ್ತಾರೆ. ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 72. ಮುಖಬೆಲೆ 80 ರೂಪಾಯಿ.

share
ಕಾರುಣ್ಯಾ
ಕಾರುಣ್ಯಾ
Next Story
X