Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಆ.1ರಿಂದ ಸಾಂಪ್ರದಾಯಿಕ...

ಮಂಗಳೂರು: ಆ.1ರಿಂದ ಸಾಂಪ್ರದಾಯಿಕ ಮೀನುಗಾರಿಕೆ ಆರಂಭ

ವಾರ್ತಾಭಾರತಿವಾರ್ತಾಭಾರತಿ31 July 2019 7:36 PM IST
share
ಮಂಗಳೂರು: ಆ.1ರಿಂದ ಸಾಂಪ್ರದಾಯಿಕ ಮೀನುಗಾರಿಕೆ ಆರಂಭ

ಮಂಗಳೂರು, ಜು. 31: ಕಳೆದ ಎರಡು ತಿಂಗಳ ಕಾಲ ನಿಷೇಧಕ್ಕೊಳಗಾಗಿದ್ದ ಯಾಂತ್ರೀಕೃತ ಮೀನುಗಾರಿಕೆಯು ಆ.1ರಂದು ಮತ್ತೆ ಆರಂಭಗೊಳ್ಳಲಿದೆ. ಈಗಾಗಲೆ ಮೀನುಗಾರರು ಬಲೆ, ಮಂಜುಗೆಡ್ಡೆ, ಆಹಾರ ವಸ್ತು ಸಹಿತ ಪೂರಕ ಪರಿಕಗಳು ಹಾಗೂ ಶುಭ ನಿರೀಕ್ಷೆಯೊಂದಿಗೆ ಮೀನುಗಾರರು ಕಡಲಿಗೆ ಇಳಿಯಲು ತಯಾರಿ ನಡೆಸಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಸುಮಾರು 850 ಆಳ ಸಮುದ್ರ ಟ್ರಾಲ್‌ಬೋಟ್‌ಗಳು ಹಾಗೂ 350 ಮರದ ಬೋಟ್‌ಗಳಿವೆ. ಆಳ ಸಮುದ್ರ ಟ್ರಾಲ್ ಬೋಟ್‌ಗಳ ಪೈಕಿ ಹೆಚ್ಚಿನವು ಆ.1ರಂದು ಕಡಲಿಗಿಳಿಯಲಿದ್ದು, ಉಳಿದ ಟ್ರಾಲ್‌ ಬೋಟ್‌ಗಳು ಹಾಗೂ 90ರಷ್ಟು ಪರ್ಸೀನ್ ಬೋಟ್‌ಗಳು ಸಮುದ್ರ ಪೂಜೆ ಬಳಿಕ ಕಡಲಿಗಿಳಿಯಲಿವೆ. ಅದರಲ್ಲೂ ಪೂರಕ ಹವಾಮಾನ ಸೃಷ್ಟಿಯ ಬಳಿಕವಷ್ಟೇ ಮರದ ಬೋಟ್‌ಗಳು ಕಡಲಿಗಿಳಿಯುತ್ತವೆ ಎಂದು ಮೀನುಗಾರರ ಮೂಲಗಳು ತಿಳಿಸಿವೆ.

ಕರ್ನಾಟಕ ಕರಾವಳಿ ಮೀನುಗಾರಿಕೆ ಕಾಯ್ದೆ 1986ರನ್ವಯ ಜೂ.1ರಿಂದ ಜು.31ರ ತನಕ 61 ದಿನ ಸಾಂಪ್ರದಾಯಿಕ ಮೀನುಗಾರಿಕೆ ನಿಷೇಧಿಸಿ ಮೀನುಗಾರಿಕಾ ಇಲಾಖೆಯು ಪ್ರತೀ ವರ್ಷ ಆದೇಶ ಹೊರಡಿಸುತ್ತದೆ.

ಅಂದರೆ ಬಲೆ ಉಪಯೋಗಿಸಿ ಯಾಂತ್ರೀಕೃತ ದೋಣಿಗಳ ಮೂಲಕ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ ಬೋರ್ಡ್ ಅಥವಾ ಔಟ್ ಬೋರ್ಡ್ ಯಂತ್ರ ಅಳವಡಿಸಿರುವ ಸಾಂಪ್ರದಾಯಿಕ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಆದರೆ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳು ಮೀನುಗಾರಿಕೆ ನಡೆಸಲು ಅನುಮತಿ ನೀಡಿದೆ.

ಕರಾವಳಿಯಲ್ಲಿ 2018-19ನೆ ಸಾಲಿನಲ್ಲಿ 3,166 ಕೋ.ರೂ. ಮೌಲ್ಯದ 2,77,747 ಟನ್ ಮೀನು ಹಿಡಿಯಲಾಗಿದೆ. 2017-18ನೆ ಸಾಲಿನ ವರ್ಷಕ್ಕೆ ಹೋಲಿಸಿದರೆ 2018-19ನೆ ಸಾಲಿನ ಮೀನುಗಾರಿಕೆ ಪ್ರಮಾಣ ಮತ್ತು ಮೌಲ್ಯ ಕುಸಿದುದರ ಪರಿಣಾಮ 70 ಕೋ.ರೂ. ವೌಲ್ಯದ ಮೀನುಗಾರಿಕೆ ಕಡಿಮೆಯಾಗಿದೆ. ಕಳೆದ ಋತುವಿನಲ್ಲಿ 3,236.99 ಕೋ.ರೂ. ಮೌಲ್ಯದ 2,92,061 ಟನ್ ಮೀನು ಹಿಡಿಯಲಾಗಿತ್ತು. ಈ ಋತುವಿನಲ್ಲಿ ಬಂಗುಡೆ, ಬೂತಾಯಿ, ಕೊಡ್ಡಾಯಿ, ಅಂಜಲ್ ಮೀನು ಹೆಚ್ಚು ದೊರೆತಿಲ್ಲ. ಆದರೆ ಕಪ್ಪು ಬಣ್ಣದ ಕ್ಲಾಟಿ ಮೀನು ಮತ್ತು ಮದ್ನಾಲ್ ಸಾಕಷ್ಟು ಸಿಕ್ಕಿದೆ.

ಟ್ರಾಲ್‌ಬೋಟ್ ಮೀನುಗಾರರು ಮೀನುಗಾರಿಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೋಟ್‌ನಲ್ಲಿ ತೆರಳುವ ಮೀನುಗಾರರು ಧಕ್ಕೆಯಲ್ಲಿ ಫ್ಯಾಕ್ಟರಿಯಿಂದ ಮಂಜುಗಡ್ಡೆ ಸಂಗ್ರಹ ಮಾಡಿಕೊಳ್ಳುತ್ತಿದ್ದಾರೆ. ಆ.1ರಂದು ಕೆಲವು ಬೋಟ್‌ಗಳು ಸಮುದ್ರಕ್ಕೆ ಇಳಿಯಲಿದ್ದು, ಉಳಿದವು ಹಂತಹಂತವಾಗಿ ಮೀನುಗಾರಿಕೆಗೆ ತೆರಳಲಿವೆ. ಕೆಲ ಟ್ರಾಲ್ ಬೋಟ್‌ಗಳು ಹಾಗೂ ಪರ್ಸೀನ್ ಬೋಟ್‌ಗಳು ಸಮುದ್ರದ ಪೂಜೆ ಬಳಿಕ ಸಮುದ್ರಕ್ಕೆ ಇಳಿಯಲಿವೆ.

-ನಿತಿನ್ ಕುಮಾರ್, ಮೀನುಗಾರ ಮುಖಂಡ

ಗಿಲ್‌ನೆಟ್ ಮೀನುಗಾರಿಕೆಗೆ ಯಾವುದೇ ತೊಂದರೆಯಾಗದಿದ್ದರೂ ಕೂಡ ಮಳೆ ಬೀಳುವ ಸಮಯಕ್ಕೆ ಸರಿಯಾದ ಮಳೆ ಬೀಳದ ಕಾರಣ ಸಂತಾನೋತ್ಪತ್ತಿ ಆಗದ ಕಾರಣ ಈ ಬಾರಿ ಮೀನು ಉತ್ಪಾದನೆಯಲ್ಲಿ ಹೆಚ್ಚಿನ ಇಳುವರಿ ನಿರೀಕ್ಷೆ ಇಟ್ಟುಕೊಳ್ಳುವ ಹಾಗಿಲ್ಲ. ಇದು ಮೀನುಗಾರಿಕೆಗೆ ಬಹುದೊಡ್ಡ ಹೊಡೆತ ನೀಡಲಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರ ಮೀನುಗಾರಿಕೆಯ ಬಗ್ಗೆ ವಿಶೇಷ ಆಸಕ್ತಿ ವಹಿಸಿಕೊಳ್ಳುವ ಅಗತ್ಯವಿದೆ.
- ಅಲಿ ಹಸನ್ ಕುದ್ರೋಳಿ, ಅಧ್ಯಕ್ಷರು
ಗಿಲ್‌ನೆಟ್ ಮೀನುಗಾರರ ಸಂಘ, ಮಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X