ತಂದೆಗೆ ಇನ್ನೂ ತಿಳಿದಿಲ್ಲ ಕಾಫಿ ಡೇ ಮಾಲಕ ಸಿದ್ದಾರ್ಥ ಸಾವಿನ ಸುದ್ದಿ: ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ
![ತಂದೆಗೆ ಇನ್ನೂ ತಿಳಿದಿಲ್ಲ ಕಾಫಿ ಡೇ ಮಾಲಕ ಸಿದ್ದಾರ್ಥ ಸಾವಿನ ಸುದ್ದಿ: ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ತಂದೆಗೆ ಇನ್ನೂ ತಿಳಿದಿಲ್ಲ ಕಾಫಿ ಡೇ ಮಾಲಕ ಸಿದ್ದಾರ್ಥ ಸಾವಿನ ಸುದ್ದಿ: ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ](https://www.varthabharati.in/sites/default/files/images/articles/2019/07/31/203146-1564590342.jpg)
ಸಿದ್ದಾರ್ಥ ಅವರ ತಂದೆ ಗಂಗಯ್ಯ ಹೆಗಡೆ- ತಾಯಿ ವಾಸಂತಿ ಹೆಗಡೆ
ಮೈಸೂರು,ಜು.31: ಮಗನ ಸಾವಿನ ಸುದ್ದಿ ತಿಳಿಯದೇ ಸಿದ್ಧಾರ್ಥ ಅವರ ತಂದೆ ಮೈಸೂರಿನ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಗಂಗಯ್ಯ ಹೆಗಡೆ ಅವರಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಫಿ ಡೇ ಮಾಲಕ ಸಿದ್ಧಾರ್ಥ್ ಅವರ ತಂದೆ ಗಂಗಯ್ಯ ಹೆಗಡೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಅವರನ್ನು ನಗರದ ಗೋಪಾಲಗೌಡ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದುರದೃಷ್ಟವೆಂದರೆ ಮಗ ಸಿದ್ಧಾರ್ಥ್ ಸಾವಿನ ವಿಚಾರವನ್ನು ಗಂಗಯ್ಯ ಹೆಗಡೆಯವರಿಗೆ ಇನ್ನೂ ತಿಳಿಸಲಾಗಿಲ್ಲ ಎನ್ನಲಾಗಿದೆ.
ಇನ್ನು ತಮ್ಮ ಗಂಡನನ್ನು ನೋಡಿಕೊಳ್ಳುತ್ತಿದ್ದ ಸಿದ್ಧಾರ್ಥ್ ಅವರ ತಾಯಿ ವಾಸಂತಿ ಹೆಗಡೆ ಮಗನ ವಿಚಾರ ತಿಳಿದು ನಿನ್ನೆಯೇ ಚಿಕ್ಕಮಗಳೂರಿನ ಚೇತನಹಳ್ಳಿಗೆ ತೆರಳಿದ್ದಾರೆ. ಇನ್ನು ಗಂಗಯ್ಯ ಅವರ ಚಿಕಿತ್ಸೆಯ ಬಗ್ಗೆ ಆಸ್ಪತ್ರೆಯವರಲ್ಲಿ ಕೇಳಿದಾಗ ಈ ಕುರಿತು ಯಾವುದೇ ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
Next Story