Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿದ್ಧಯ್ಯ ಪುರಾಣಿಕ ಅಸಾಮಾನ್ಯ ಚೈತನ್ಯ:...

ಸಿದ್ಧಯ್ಯ ಪುರಾಣಿಕ ಅಸಾಮಾನ್ಯ ಚೈತನ್ಯ: ಡಾ.ಸಿದ್ದಲಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ31 July 2019 10:57 PM IST
share
ಸಿದ್ಧಯ್ಯ ಪುರಾಣಿಕ ಅಸಾಮಾನ್ಯ ಚೈತನ್ಯ: ಡಾ.ಸಿದ್ದಲಿಂಗಯ್ಯ

ಬೆಂಗಳೂರು, ಜು.31: ನವ್ಯ ನವೋದಯ ಕವಿ ಹಾಗೂ ಪ್ರಗತಿಪರ ವಿಚಾರಧಾರೆಗಳ ಒಲವಿದ್ದ ಸಿದ್ದಯ್ಯ ಪುರಾಣಿಕ ಅವರು ಅಸಾಮಾನ್ಯ ಚೈತನ್ಯ ಎಂದು ಹಿರಿಯ ಕವಿ ಡಾ.ಸಿದ್ಧಲಿಂಗಯ್ಯ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಸಾಹಿತ್ಯ ಅಕಾಡೆಮಿಯ ಜಂಟಿಯಾಗಿ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಯೋಜಿಸಿದ್ದ ಡಾ.ಸಿದ್ದಯ್ಯ ಪುರಾಣಿಕ(ಕಾವ್ಯಾನಂದ), ಮಿರ್ಜಿ ಅಣ್ಣಾರಾಯ ಹಾಗೂ ಡಾ.ರಾ.ಯ.ಧಾರವಾಡಕರ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಿದ್ದಯ್ಯ ಪುರಾಣಿಕ ಕವಿ, ಮಾನವತವಾದಿ ಹಾಗೂ ತತ್ವಶಾಲಿ ರಚನಾಕಾರ. ಅವರನ್ನು ಮರೆಯಲು ಸಾಧ್ಯವಿಲ್ಲ. ಉನ್ನತ ಅಧಿಕಾರಿಯಾಗಿ ಕನ್ನಡದ ಪರ ಸಾಕಷ್ಟು ಶ್ರಮಿಸಿದ್ದಾರೆ. ಪ್ರಕೃತಿ ವರ್ಣಿಸುವುದರಲ್ಲಿ, ವಚನಗಳ ಸಂಗ್ರಹ, ಮಕ್ಕಳ ಕವಿತೆ ಸೇರಿದಂತೆ ಸಾಹಿತ್ಯದ ನಾನಾ ಪ್ರಕಾರಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಅವರು ತಿಳಿಸಿದರು.

ಇವತ್ತಿನ ರಾಜಕೀಯ ಮತ್ತು ಸಾಮಾಜಿಕ ಸ್ಥಿತಿಗೆ ಸಿದ್ದಯ್ಯ ಪುರಾಣಿಕರ ಪದ್ಯಗಳು ಪ್ರಸ್ತುತವೆನಿಸಿವೆ. ಜಾತ್ಯತೀತ ಮನೋಭಾವ ಹೊಂದಿದ್ದರು. ಅವರು ಹೇಳಿದ್ದ ಮಾತಿನಂತೆ ಇವತ್ತು ಮನುಷ್ಯ ಬ್ರಾಹ್ಮಣ, ವೈಶ್ಯ, ಶೂದ್ರನಾಗಿದ್ದಾನೆ ಆದರೆ ಮಾನವನಾಗಿಲ್ಲ, ಮನುಷ್ಯತ್ವವನ್ನು ಉಳಿಸಿಕೊಂಡಿಲ್ಲ. ಜಾತಿಯ ಸೋಂಕಿಗೆ ಮದ್ದನ್ನು ನೀಡುವ ಪದ್ಯಗಳನ್ನು ಅವರು ನೀಡಿದ್ದಾರೆ. ಮಿರ್ಜಿ ಅಣ್ಷಾರಾಯರು ಹೇಳಿದಂತೆ ಹಿಂದು ಮುಸಲ್ಮಾನರ ಐಕ್ಯತೆ ಇಂದಿಗೆ ಅವಶ್ಯಕ. ಸೌಹಾರ್ದವನ್ನು ಪ್ರತಿಪಾದನೆ ಮಾಡಿದವರು ಮಿರ್ಜಿ ಅಣ್ಣಾರಾಯರು ಎಂದು ನುಡಿದರು.

ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ ಮಾತನಾಡಿ, ಕನ್ನಡತನದ ಬಗ್ಗೆ ಜಾಗೃತಿ ಮೂಡಿಸಿರುವುದರಿಂದ ಅವರನ್ನು ಪದೇ ಪದೇ ಸ್ಮರಿಸುವುದು ಕನ್ನಡಿಗರ ಕರ್ತವ್ಯ. ಪುರಾಣಿಕರು 50ಕ್ಕೂ ಅಧಿಕ ಕೃತಿಗಳನ್ನು, 1500 ವಚನಗಳನ್ನು ಬರೆದಿದ್ದಾರೆ. ಒತ್ತಡದ ಬದುಕಿನಲ್ಲಿಯೂ ಸಾಹಿತ್ಯವನ್ನು ರಚಿಸುವಂತಹ ಅಭಿರುಚಿಯನ್ನು ಹೊಂದಿದ್ದರು ಎಂದು ಹೇಳಿದರು

ನಮ್ಮ ನಾಡಿನಲ್ಲಿ ಆಡಳಿತಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಾ ಸಾಹಿತ್ಯ ಕೃಷಿ ಮಾಡಿದವರಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ನವರತ್ನರಾಮ್ ಹಾಗೂ ಸಿದ್ದಯ್ಯ ಪುರಾಣಿಕರು ಪ್ರಮುಖರಾಗಿದ್ದು, ಅವರಲ್ಲಿ ಸಿದ್ದಯ್ಯ ಪುರಾಣಿಕರು ತಮ್ಮದೇ ಆಗಿರುವ ಸಾಹಿತ್ಯವನ್ನು ಕನ್ನಡ ನಾಡಿಗೆ ನೀಡಿದ್ದಾರೆ. ಅವರ ಮೇಲೆ ಹರ್ಡೆಕರ್ ಮಂಜಪ್ಪನವರ ಪ್ರಭಾವವಿತ್ತು ಎಂದು ಅವರು ತಿಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ವಹಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X