Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಥಾಯ್ಲೆಂಡ್ ಓಪನ್: ಸೈನಾ, ಶ್ರೀಕಾಂತ್...

ಥಾಯ್ಲೆಂಡ್ ಓಪನ್: ಸೈನಾ, ಶ್ರೀಕಾಂತ್ ಶುಭಾರಂಭ

ಸಾತ್ವಿಕ್ ಸಾಯಿರಾಜ್-ಅಶ್ವಿನಿ ಪೊನ್ನಪ್ಪಗೆ ವೃತ್ತಿಜೀವನದಲ್ಲಿ ಮಹತ್ವದ ಗೆಲುವು

ವಾರ್ತಾಭಾರತಿವಾರ್ತಾಭಾರತಿ31 July 2019 11:01 PM IST
share
ಥಾಯ್ಲೆಂಡ್ ಓಪನ್: ಸೈನಾ, ಶ್ರೀಕಾಂತ್ ಶುಭಾರಂಭ

 ಬ್ಯಾಂಕಾಕ್, ಜು.31: ಐದನೇ ಶ್ರೇಯಾಂಕದ ಆಟಗಾರ ಕಿಡಂಬಿ ಶ್ರೀಕಾಂತ್, ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ ಗೆಲುವಿನೊಂದಿಗೆ ಶುಭಾರಂಭ ಮಾಡಿದರು. ಭಾರತದ ಮಿಶ್ರ ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಹಾಗೂ ಅಶ್ವಿನಿ ಪೊನ್ನಪ್ಪ ತಮ್ಮ ವೃತ್ತಿಜೀವನದಲ್ಲಿ ಅತ್ಯಂತ ದೊಡ್ಡ ಗೆಲುವು ದಾಖಲಿಸಿ ಗಮನ ಸೆಳೆದರು.

ಸುಮಾರು ಎರಡು ತಿಂಗಳ ವಿರಾಮದ ಬಳಿಕ ಸಕ್ರಿಯ ಬ್ಯಾಡ್ಮಿಂಟನ್‌ಗೆ ವಾಪಸಾದ ಸೈನಾ ತನ್ನ ಮೊದಲ ಸುತ್ತಿನ ಸಿಂಗಲ್ಸ್ ಪಂದ್ಯದಲ್ಲಿ ಥಾಯ್ಲೆಂಡ್‌ನ ಫಿಟ್ಟಾಯಪೋರ್ನ್ ಚೈವಾನ್‌ರನ್ನು 21-17, 21-19 ಗೇಮ್‌ಗಳಿಂದ ಸೋಲಿಸಿದರು.

ಏಳನೇ ಶ್ರೇಯಾಂಕದ ಸೈನಾ ಮುಂದಿನ ಸುತ್ತಿನಲ್ಲಿ ಜಪಾನ್‌ನ ಸಯಾಕಾ ತಕಹಶಿ ಅಥವಾ ಇಂಡೋನೇಶ್ಯದ ರುಸೆಲಿ ಹರ್ಟಾವನ್ ಸವಾಲು ಎದುರಿಸಲಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ಆಟಗಾರರಾದ ಕೆ.ಶ್ರೀಕಾಂತ್, ಎಚ್.ಎಸ್. ಪ್ರಣಯ್, ಪಿ.ಕಶ್ಯಪ್ ಹಾಗೂ ಶುಭಾಂಕರ್ ಡೇ ಶುಭಾರಂಭ ಮಾಡಿದ್ದಾರೆ.

ಇಲ್ಲಿ ಬುಧವಾರ ಒಂದು ಗಂಟೆ ಹಾಗೂ ಏಳು ನಿಮಿಷಗಳ ಕಾಲ ನಡೆದ ಪುರುಷರ ಸಿಂಗಲ್ಸ್ ನ ಮೊದಲ ಸುತ್ತಿನ ಪಂದ್ಯದಲ್ಲಿ ಶ್ರೀಕಾಂತ್ ಚೀನಾದ ಕ್ವಾಲಿಫೈಯರ್ ರೆನ್ ಪೆಂಗ್ ಬೋ ವಿರುದ್ಧ 21-13, 17-21, 21-19 ಗೇಮ್‌ಗಳ ಅಂತರದಿಂದ ಜಯ ಸಾಧಿಸಿದರು.

 ಶ್ರೀಕಾಂತ್ ಎರಡನೇ ಸುತ್ತಿನ ಪಂದ್ಯದಲ್ಲಿ ಥಾಯ್ಲೆಂಡ್‌ನ ಖೋಸಿಟ್ ಫೆಟ್‌ಪ್ರದಾಬ್‌ರನ್ನು ಎದುರಿಸಲಿದ್ದಾರೆ. ಆದರೆ, ಸೌರಭ್ ವರ್ಮಾ ಅವರ ಹೋರಾಟ ಮೊದಲ ಸುತ್ತಿನಲ್ಲಿ ಕೊನೆಗೊಂಡಿದೆ. ಪ್ರಣಯ್ ಹಾಂಕಾಂಗ್‌ನ ವಾಂಗ್ ವಿಂಗ್ ಕಿ ವಿನ್ಸೆಂಟ್‌ರನ್ನು 21-16, 22-20 ಸೆಟ್‌ಗಳ ಅಂತರದಿಂದ ಮಣಿಸಿದರು. ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ ಕಶ್ಯಪ್ ಇಸ್ರೇಲ್‌ನ ಮಿಶಾ ಝಿಲ್ಬರ್‌ಮನ್‌ರನ್ನು 18-21, 21-8, 21-14 ಗೇಮ್‌ಗಳಿಂದ ಸದೆಬಡಿದರು.

 ಪ್ರಣಯ್ ಹಾಗೂ ಕಶ್ಯಪ್ ಎರಡನೇ ಸುತ್ತಿನಲ್ಲಿ ಕ್ರಮವಾಗಿ ಜಪಾನ್‌ನ ಕೆಂಟಾ ನಿಶಿಮೊಟೊ ಹಾಗೂ ತೈಪೆಯ ಚೌ ಟಿಯೆನ್ ಚೆನ್‌ರಿಂದ ಕಠಿಣ ಸವಾಲು ಎದುರಿಸಲಿದ್ದಾರೆ.

64 ನಿಮಿಷಗಳ ಹೋರಾಟದಲ್ಲಿ ಸೌರಭ್ ಭಾರೀ ಹೋರಾಟ ನೀಡಿದರೂ ಜಪಾನ್‌ನ ಕಾಂಟಾ ಸುನೆಯಾಮಾ ವಿರುದ್ಧ 21-23, 19-21, 21-9 ಗೇಮ್‌ಗಳ ಅಂತರದಿಂದ ಶರಣಾದರು.

ಯುವ ಆಟಗಾರ ಶುಭಾಂಕರ್ ಡೇ ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಅಗ್ರ ಶ್ರೇಯಾಂಕದ ಹಾಗೂ ವಿಶ್ವದ ನಂ.1 ಆಟಗಾರ ಕೆಂಟೊ ಮೊಮೊಟಾರಿಂದ ವಾಕ್‌ಓವರ್ ಪಡೆದು ಎರಡನೇ ಸುತ್ತಿಗೇರಿದ್ದಾರೆ. ಮಹಿಳೆಯರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಸಾಯಿ ಉತ್ತೇಜಿತಾ ರಾವ್ ಚೀನಾದ ಚೆನ್ ಕ್ಸಿಯಾವೊ ಕ್ಸಿನ್ ವಿರುದ್ಧ 17-21, 7-21 ಗೇಮ್‌ಗಳ ಅಂತರದಿಂದ ಸೋತಿದ್ದಾರೆ.

►ಒಲಿಂಪಿಕ್ಸ್ ಬೆಳ್ಳಿ ವಿಜೇತ ಜೋಡಿಗೆ ರಾಂಕಿರೆಡ್ಡಿ - ಪೊನ್ನಪ್ಪ ಶಾಕ್

 ಒಂದು ಗಂಟೆ ಹಾಗೂ 2 ನಿಮಿಷಗಳ ಕಾಲ ನಡೆದ ಮಹಿಳೆಯರ ಮಿಶ್ರ ಡಬಲ್ಸ್ ಪಂದ್ಯದಲ್ಲಿ ಭಾರತದ ಶ್ರೇಯಾಂಕರಹಿತ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಹಾಗೂ ಅಶ್ವಿನಿ ಪೊನ್ನಪ್ಪ ಮಲೇಶ್ಯಾದ ಒಲಿಂಪಿಕ್ಸ್ ಬೆಳ್ಳಿ ವಿಜೇತ ಜೋಡಿ ಸೂನ್ ಹಾಗೂ ಯಿಂಗ್ ವಿರುದ್ಧ 21-18, 18-21, 21-17 ಗೇಮ್‌ಗಳ ಅಂತರದಿಂದ ಜಯ ಸಾಧಿಸಿದರು. ವಿಶ್ವದ ನಂ.23ನೇ ಆಟಗಾರ್ತಿ ಪೊನ್ನಪ್ಪ ಹಾಗೂ ರಾಂಕಿರೆಡ್ಡಿ ಎರಡನೇ ಬಾರಿ ಸೂನ್ ಹಾಗೂ ಯಿಂಗ್ ಎದುರು ಉತ್ತಮ ಪ್ರದರ್ಶನ ನೀಡಿದರು. ಭಾರತದ ಜೋಡಿ ಕಳೆದ ವರ್ಷ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಲೇಶ್ಯಾದ ಎದುರಾಳಿಗಳನ್ನು ಸೋಲಿಸಿದ್ದರು.

ಪೊನ್ನಪ್ಪ ಹಾಗೂ ರಾಂಕಿರೆಡ್ಡಿ ಎರಡನೇ ಸುತ್ತಿನಲ್ಲಿ ಇಂಡೋನೇಶ್ಯದ ಅಲ್ಫಿಯಾನ್ ಎಕೊ ಪ್ರಸೆಟಿಯಾ ಹಾಗೂ ಮಾರ್ಶೆಲ್ಲಾ ಗಿಶ್ಚಾರನ್ನು ಎದುರಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X