Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮೀನು ರಕ್ಷಿಸುವ ಹೋರಾಟದಲ್ಲಿ...

ಜಮೀನು ರಕ್ಷಿಸುವ ಹೋರಾಟದಲ್ಲಿ ಹತ್ಯೆಯಾದವರ ಜಾಗತಿಕ ಪಟ್ಟಿ: ಭಾರತಕ್ಕೆ ತೃತೀಯ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ31 July 2019 11:29 PM IST
share
ಜಮೀನು ರಕ್ಷಿಸುವ ಹೋರಾಟದಲ್ಲಿ ಹತ್ಯೆಯಾದವರ ಜಾಗತಿಕ ಪಟ್ಟಿ: ಭಾರತಕ್ಕೆ ತೃತೀಯ ಸ್ಥಾನ

ಹೊಸದಿಲ್ಲಿ, ಜು.31: ತಮ್ಮ ಜಮೀನು ಮತ್ತು ಪರಿಸರವನ್ನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ ಕಳೆದ ವರ್ಷ ಭಾರತದಲ್ಲಿ 23 ಮಂದಿ ಪ್ರಾಣ ತೆತ್ತಿದ್ದು, ಜಾಗತಿಕ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ ಎಂದು ಮಾನವ ಹಕ್ಕುಗಳ ಪರ ಹೋರಾಡುವ ಸಂಸ್ಥೆ ‘ಗ್ಲೋಬಲ್ ವಿಟ್ನೆಸ್’ನ ವರದಿಯಲ್ಲಿ ತಿಳಿಸಲಾಗಿದೆ.

 2018ರಲ್ಲಿ ತಮ್ಮ ಮನೆ, ಅರಣ್ಯ, ನದಿ, ಜಮೀನುಗಳನ್ನು ವಿನಾಶಕಾರಿ ಉದ್ದಿಮೆಗಳಿಂದ ರಕ್ಷಿಸಿಕೊಳ್ಳುವ ಹೋರಾಟದಲ್ಲಿ ವಿಶ್ವದಾದ್ಯಂತ 164 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ 23 ಮಂದಿ ಸಾವನ್ನಪ್ಪಿದ್ದರೆ, ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿರುವ ಫಿಲಿಪ್ಪೀನ್ಸ್‌ನಲ್ಲಿ 30, ಎರಡನೇ ಸ್ಥಾನದಲ್ಲಿರುವ ಕೊಲಂಬಿಯಾದಲ್ಲಿ 24 ಸಾವು ಸಂಭವಿಸಿದೆ. ತಮಿಳುನಾಡಿನಲ್ಲಿ 2018ರ ಮೇ ತಿಂಗಳಿನಲ್ಲಿ ವೇದಾಂತ ತಾಮ್ರ ಘಟಕದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ 13 ಮಂದಿಯ ಹತ್ಯೆಯಾಗಿರುವುದನ್ನು ‘ಎನಿಮೀಸ್ ಆಫ್ ದಿ ಸ್ಟೇಟ್‌‘ ಎಂಬ ಶಿರೋನಾಮೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. 19 ರಾಷ್ಟ್ರಗಳಲ್ಲಿ ತಲಾ 1 ಸಾವಿನ ಪ್ರಕರಣ ನಡೆದಿದೆ. ಬ್ರೆಝಿಲ್‌ನಲ್ಲಿ 20 ಸಾವು ಸಂಭವಿಸಿದ್ದು 4ನೇ ಸ್ಥಾನದಲ್ಲಿದ್ದರೆ, ಗ್ವಾಟೆಮಾಲ (16) ಮತ್ತು ಮೆಕ್ಸಿಕೊ(14) ನಂತರದ ಸ್ಥಾನದಲ್ಲಿವೆ. ವಿಶ್ವದಲ್ಲಿ ಸಂಭವಿಸಿದ ಒಟ್ಟು ಹತ್ಯೆಯಲ್ಲಿ ಶೇ. 50ಕ್ಕೂ ಹೆಚ್ಚು ಲ್ಯಾಟಿನ್ ಅಮೆರಿಕ ದೇಶಗಳಲ್ಲಿ ದಾಖಲಾಗಿವೆ.

  

ಜಾಗತಿಕವಾಗಿ ಅತೀ ಹೆಚ್ಚಿನ ಪ್ರಮಾಣದ ಹತ್ಯೆ ಸಂಭವಿಸಿದ್ದು ಗಣಿ ಉದ್ದಿಮೆಯಿಂದ ಜಮೀನನ್ನು ರಕ್ಷಿಸಿಕೊಳ್ಳುವ ಹೋರಾಟದಲ್ಲಿ (43). ಕೃಷಿ ಉದ್ಯಮ ವಲಯಕ್ಕೆ ಸಂಬಂಧಿಸಿ 21, ನೀರು ಮತ್ತು ಅಣೆಕಟ್ಟಿಗೆ ಸಂಬಂಧಿಸಿ 17 ಹತ್ಯೆ ಸಂಭವಿಸಿದೆ. ಮೃತಪಟ್ಟವರೆಲ್ಲಾ ತಮ್ಮ ಮನೆ, ಜೀವನಾಧಾರಗಳನ್ನು ರಕ್ಷಿಸಿಕೊಳ್ಳಲು, ಪರಿಸರ ಸಂರಕ್ಷಣೆಗೆ ನಡೆಸಿದ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ ಜನಸಾಮಾನ್ಯರು. ಬಹುತೇಕ ಸಂದರ್ಭದಲ್ಲಿ ಇವರ ಜಮೀನನ್ನು ಬಲಾತ್ಕಾರವಾಗಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಮತ್ತು ಇವರು ವಿರೋಧಿಸಿ ಹೋರಾಟ ನಡೆಸಿದ್ದಾರೆ. ವಿಶ್ವದಾದ್ಯಂತ ಸರಕಾರಗಳು, ನ್ಯಾಯಾಂಗ ವ್ಯವಸ್ಥೆಯ ಮೂಲಕ ಜನಸಾಮಾನ್ಯರ ಮೇಲೆ ಒತ್ತಡ ಹೇರಿ ಅಥವಾ ಬಲಪ್ರಯೋಗದಿಂದ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತದೆ ಎಂದು ವರದಿ ತಿಳಿಸಿದೆ. ಕೆಲವು ರಾಷ್ಟ್ರಗಳಲ್ಲಿ ಪತ್ರಿಕಾ ಸ್ವಾತಂತ್ರಕ್ಕೆ ಕಡಿವಾಣಇರುವ ಕಾರಣ ಜಮೀನು ಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಹೋರಾಟ ನಡೆಸುವವರ ಸ್ಥಿತಿಯನ್ನು ಅಂದಾಜಿಸುವುದು ಕಷ್ಟವಾಗಿದೆ. ಅಲ್ಲದೆ ಸರಕಾರ ಹಾಗೂ ಎನ್‌ಜಿಒ ಸಂಸ್ಥೆಗಳು ಇಂತಹ ಘಟನೆಗಳ ಮೇಲೆ ವ್ಯವಸ್ಥಿತವಾಗಿ ನಿಗಾ ಇರಿಸಿಲ್ಲ ಎಂದು ವರದಿ ತಿಳಿಸಿದೆ.

ಭೂಮಿ ಮತ್ತು ಪರಿಸರ ಸಂರಕ್ಷಣೆಯ ಹೋರಾಟಗಾರರ ವಿರುದ್ಧ ನಡೆಯುತ್ತಿರುವ ದಾಳಿಯನ್ನು ತಡೆಯಲು ಸರಕಾರಗಳು, ಸಂಸ್ಥೆಗಳು ಹಾಗೂ ಹೂಡಿಕೆದಾರರು ಕ್ರಮ ಕೈಗೊಂಡರೆ ಮಾತ್ರ ಇಂತಹ ಹೋರಾಟ ಪರಿಣಾಮಕಾರಿಯಾಗಿ ಮುಂದುವರಿಯಲು ಸಾಧ್ಯ ಎಂದು ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X