ಬಂಡೀಪುರದಲ್ಲಿ ಸಫಾರಿ ವಾಹನದ ಮೇಲೆ ಆನೆ ದಾಳಿ
![ಬಂಡೀಪುರದಲ್ಲಿ ಸಫಾರಿ ವಾಹನದ ಮೇಲೆ ಆನೆ ದಾಳಿ ಬಂಡೀಪುರದಲ್ಲಿ ಸಫಾರಿ ವಾಹನದ ಮೇಲೆ ಆನೆ ದಾಳಿ](https://www.varthabharati.in/sites/default/files/images/articles/2019/08/1/203225-1564599663.jpg)
ಚಾಮರಾಜನಗರ, ಜು.31: ಸಫಾರಿ ವಾಹನದ ಮೇಲೆ ಆನೆಯೊಂದು ದಾಳಿ ನಡೆಸಿ ವಾಹನದ ಗಾಜನ್ನು ಪುಡಿಗಟ್ಟಿದ್ದು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಸಫಾರಿ ಝೋನ್ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಫಾರಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಆನೆ ವಾಹನವನ್ನು ಗುದ್ದಿ ಗಾಜನ್ನು ಪುಡಿಗಟ್ಟಿದೆ. ಇದರಿಂದ ಕೆಲಕಾಲ ಪ್ರವಾಸಿಗರು ಆತಂಕಕ್ಕೆ ಒಳಗಾಗಿದ್ದಾರೆ. ನಂತರ ಅರಣ್ಯ ಸಿಬ್ಬಂದಿ ಕಾಡಿನ ಹಕ್ಕಿಯಂತೆ ಕೂಗಿ ಆನೆಯನ್ನು ಓಡಿಸಿದ್ದಾರೆ.
Next Story