Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಪ್ರಗತಿಶೀಲ ಕಾಲದ ಸಣ್ಣ ಕತೆಗಳು

ಪ್ರಗತಿಶೀಲ ಕಾಲದ ಸಣ್ಣ ಕತೆಗಳು

ಕಾರುಣ್ಯಾಕಾರುಣ್ಯಾ1 Aug 2019 12:41 AM IST
share
ಪ್ರಗತಿಶೀಲ ಕಾಲದ ಸಣ್ಣ ಕತೆಗಳು

ವಡ್ಡಾರಾಧನೆಯಿಂದ ಹಿಡಿದು ಈವರೆಗೆ ಕನ್ನಡ ಕಥಾ ಇತಿಹಾಸ, ಇಲ್ಲಿನ ಜನಜೀವನವನ್ನು ಕಾಲಕ್ಕೆ ತಕ್ಕಂತೆ ಬೇರೆ ಬೇರೆ ನೆಲೆಗಳಲ್ಲಿ ಕಟ್ಟಿ ಕೊಟ್ಟಿದೆ. ನವೋದಯ ಪೂರ್ವ, ನವೋದಯ, ನವ್ಯ, ಪ್ರಗತಿಶೀಲ, ಬಂಡಾಯ, ದಲಿತ....ಹೀಗೆ ಸಾಹಿತ್ಯ ಮಗ್ಗಲು ಬದಲಿಸಿದಂತೆಯೇ ಕತೆಗಳೂ ತನ್ನ ಅಭಿವ್ಯಕ್ತಿಯ ವಿಧಾನಗಳನ್ನು ಬದಲಿಸಿದೆ. ಮತ್ತು ಆಯಾ ಕಾಲಕ್ಕೆ ತನ್ನ ಪ್ರತಿಕ್ರಿಯೆಗಳನ್ನು ನೀಡಿದೆ. ಕನ್ನಡ ಕತೆಗಳ ಕಣಜಗಳನ್ನು ಅಧ್ಯಯನ ಮಾಡಿದಂತೆಯೇ ಇಲ್ಲಿನ ಜನಜೀವನ ಹಾದು ಬಂದ ದಾರಿಯೊಂದು ತೆರೆದುಕೊಳ್ಳುತ್ತದೆ. ಈ ಕಾರಣದಿಂದಲೇ, ಕನ್ನಡದ ಮಹತ್ವದ ಕತೆಗಳ ಹಾದಿಯನ್ನು ಮತ್ತೆ ಮತ್ತೆ ನಾವು ಅವಲೋಕಿಸಬೇಕಾಗುತ್ತದೆ. ಹಲವರು ಕನ್ನಡ ಕತೆಗಳನ್ನು ಮುಂದಿಟ್ಟುಕೊಂಡು ಇಲ್ಲಿನ ಸಾಮಾಜಿಕ, ಸಾಂಸ್ಕೃತಿಕ ಬದುಕನ್ನು ವಿಶ್ಲೇಷಿಸಿದ್ದಾರೆ. ಇನ್ನು ಹಲವರು, ಇಲ್ಲಿನ ಪ್ರಾತಿನಿಧಿಕ ಕತೆಗಳನ್ನು ಸಂಗ್ರಹಿಸಿ, ಸಂಪಾದಿಸಿ ಹೊರತಂದಿದ್ದಾರೆ. ಇಂತಹ ಯಾವುದೇ ಸಂಪಾದನೆ ಅಲ್ಲಿಗೆ ಮುಗಿಯುವುದಿಲ್ಲ. ಕಾಲಕ್ಕೆ ತಕ್ಕಂತೆಯೇ ಕತೆಗಳ ಮಹತ್ವ ಬದಲಾಗುತ್ತಾ ಹೋಗುತ್ತದೆ. ಈ ನಿಟ್ಟಿನಲ್ಲಿ ಅತ್ಯುತ್ತಮ ಕತೆಗಳನ್ನು ಗುರುತಿಸುವ ಕೆಲಸ ಪದೇ ಪದೇ ನಡೆಯುತ್ತಲೇ ಇರಬೇಕಾಗುತ್ತದೆ. ಇಂದಿನವರೆಗೆ ಬಂದಿರುವ ಕೆಲವು ಸಂಕಲನಗಳಲ್ಲಿ ಅನಕೃ ಅವರ ‘ಕಾಮನಬಿಲ್ಲು’ ಒಂದು ಮೈಲುಗಲ್ಲು ಎಂದು ಗುರುತಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಂಪಾದಿಸಿರುವ 12 ಕತೆಗಳ ಸಂಕಲನ ನಮಗೆ ಮುಖ್ಯವಾಗುತ್ತದೆ. ಕೆ. ನರಸಿಂಹ ಮೂರ್ತಿ ಅವರು ಕೃತಿಯನ್ನು ಸಂಪಾದಿಸಿದ್ದಾರೆ.

ಇಲ್ಲಿರುವ ಕತೆಗಳು ಪ್ರಗತಿಶೀಲ ಕಾಲದವುಗಳು. ಬಸವರಾಜ ಕಟ್ಟೀಮನಿ ಅವರ ಗಿರಿಜಾ ಕಂಡ ಸಿನೆಮಾ, ಚದುರಂಗ ಅವರ ನಾಲ್ಕು ಮೊಳ ಭೂಮಿ, ಅನುಪಮಾ ಅವರ ದೇವರೇ ಬರಲಿಲ್ಲ, ಎಸ್. ಅನಂತನಾರಾಯಣ ಅವರ ಮಾನವ ಪ್ರೇಮ, ಕೋ. ಚೆನ್ನಬಸಪ್ಪ ಅವರ ಮುಕ್ಕಣ್ಣನ ಮುಕ್ತಿ, ವರಗಿರಿ ಅವರ ದ್ಯಾಮ-ಕೆಂಚಿ, ಶೇಷಗಿರಿರಾವ್ ಅವರ ಮುಯ್ಯಿ, ವರದರಾಜ ಹುಯಿಲಗೋಳ ಅವರ ಬಾಗಿಲು ತೆರೆದಿತ್ತು, ಮಿರ್ಜಿ ಅಣ್ಣಾರಾಯರ ನಮ್ಮೂರ ನಾಯಕರು, ವಿ.ಜಿ.ಭಟ್ಟರ ರಾಮರಾಜ್ಯ, ಅನುಭವಾಮೃತ, ಗುಪ್ತಚಾರ, ಶ್ರೀಕಾಂತ ಅವರ ಭೂಮಿಕಂಪಿಸಲಿಲ್ಲ, ಸದಾಶಿವ ಅವರ ನಲ್ಲಿಯಲ್ಲಿ ನೀರು ಬಂತು ಕತೆಗಳು ಇಲ್ಲಿವೆ.

ಹೊಸತಲೆಮಾರಿನ ಕತೆಗಾರರು ಇಲ್ಲಿರುವ ಬಹುತೇಕ ಕತೆಗಾರರ ಹೆಸರನ್ನು ಕೇಳಿರುವುದು ಕಡಿಮೆ. ಹಾಗೆಯೇ ಇಲ್ಲಿರುವ ಕತೆಗಳನ್ನು ಓದಿರುವ ಸಾಧ್ಯತೆಗಳು ಅಲ್ಪ. ಹಳೆಬೇರನ್ನು ಅರಿತುಕೊಂಡಾಗಷ್ಟೇ ಹೊಸ ಚಿಗುರು ತನ್ನ ಮುಂದಿರುವ ದಾರಿಯನ್ನು ಸ್ಪಷ್ಟಪಡಿಸಿಕೊಳ್ಳಲು ಸಾಧ್ಯ. ಇಲ್ಲಿರುವ ಕತೆಗಳ ಸರಳತೆ, ಜೀವಂತಿಕೆ, ಮಾನವೀಯತೆ ನಮ್ಮನ್ನು ಕಾಡುವಂಥವುಗಳು.150 ಪುಟಗಳ ಈ ಕೃತಿಯ ಮುಖಬೆಲೆ 80 ರೂಪಾಯಿ.

share
ಕಾರುಣ್ಯಾ
ಕಾರುಣ್ಯಾ
Next Story
X