Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಳೆಯಿಂದ ಫ್ಲೋರಿಡಾದಲ್ಲಿ ಟೀಮ್...

ನಾಳೆಯಿಂದ ಫ್ಲೋರಿಡಾದಲ್ಲಿ ಟೀಮ್ ಇಂಡಿಯಾ-ವಿಂಡೀಸ್ ಹೋರಾಟ

ವಾರ್ತಾಭಾರತಿವಾರ್ತಾಭಾರತಿ1 Aug 2019 11:35 PM IST
share
ನಾಳೆಯಿಂದ ಫ್ಲೋರಿಡಾದಲ್ಲಿ ಟೀಮ್ ಇಂಡಿಯಾ-ವಿಂಡೀಸ್ ಹೋರಾಟ

ಲೌಡೆರ್‌ಹಿಲ್(ಅಮೆರಿಕ), ಆ.1: ವೆಸ್ಟ್ ಇಂಡೀಸ್ ಮತ್ತು ಭಾರತ ತಂಡಗಳ ನಡುವಿನ ಟ್ವೆಂಟಿ-20 ಸರಣಿಯ ಮೊದಲೆರಡು ಪಂದ್ಯಗಳು ಅಮೆರಿಕದಲ್ಲಿ ನಿಗದಿಯಾಗಿದ್ದು, ಶನಿವಾರ ಮೊದಲ ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್‌ನಲ್ಲಿ ಸೋತು ನಿರ್ಗಮಿಸಿದ ಬಳಿಕ ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ನಡುವಿನ ಭಿನ್ನಮತ, ತಂಡದಲ್ಲಿ ಒಗ್ಗಟ್ಟಿಲ್ಲವೆಂಬ ವದಂತಿ ಹಬ್ಬಿತ್ತು. ಇದೀಗ ಎಲ್ಲ ವಿವಾದಗಳಿಗೆ ತೆರೆ ಎಳೆದು ತಂಡವನ್ನು ಬಲಿಷ್ಠವಾಗಿ ಕಟ್ಟಲು ಕೊಹ್ಲಿಗೆ ಉತ್ತಮ ಅವಕಾಶ ದೊರೆಯಲಿದೆ.

ಸರಣಿಯಲ್ಲಿ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯಗಳು ಅಮೆರಿಕದಲ್ಲಿ ನಡೆದರೆ ಕೊನೆಯ ಪಂದ್ಯ ವೆಸ್ಟ್‌ಇಂಡೀಸ್‌ನಲ್ಲಿ ನಡೆಯಲಿದೆ.

 ರವಿ ಶಾಸ್ತ್ರಿ ಅವರ ಕೋಚ್ ಅವಧಿ ವೆಸ್ಟ್ ಇಂಡೀಸ್ ಪ್ರವಾಸ ಮುಗಿಯುವ ತನಕ ವಿಸ್ತರಣೆಗೊಂಡಿದ್ದರೂ, ಅವರಿಗೆ ಮತ್ತೆ ಕೋಚ್ ಆಗಿ ಮುಂದುವರಿಯಲು ತನ್ನ ಸಾಧನೆಯನ್ನು ಮುಂದಿಟ್ಟುಕೊಂಡು ಕ್ರಿಕೆಟ್ ಸಲಹಾ ಸಮಿತಿಯ ಮುಂದೆ ಹಕ್ಕು ಮಂಡಿಸಲು ಅವಕಾಶ ಇದೆ.

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮಿಲಿಟರಿ ಸೇವೆಯ ಕಾರಣಕ್ಕಾಗಿ ಟೀಮ್ ಇಂಡಿಯಾದಿಂದ ದೂರ ಉಳಿದ ಹಿನ್ನೆಲೆಯಲ್ಲಿ ಕೊಹ್ಲಿಗೆ ವಿಂಡೀಸ್ ವಿರುದ್ಧದ ಸರಣಿ ಸವಾಲಾಗಲಿದೆ.

  

ಟೀಮ್ ಇಂಡಿಯಾಕ್ಕೆ ಪ್ಲೋರಿಡಾದಲ್ಲಿ ಶನಿವಾರ ಮತ್ತು ರವಿವಾರ ನಡೆಯಲಿರುವ ಎರಡು ಟ್ವೆಂಟಿ-20 ಪಂದ್ಯಗಳಲ್ಲಿ ಉತ್ತಮ ಬೆಂಬಲ ದೊರೆಯುವುದನ್ನು ನಿರೀಕ್ಷಿಸಲಾಗಿದೆ. ಮೂರು ವರ್ಷಗಳ ಹಿಂದೆ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಇಲ್ಲಿ ಪಂದ್ಯವನ್ನಾಡಿದ್ದವು. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ವೆಸ್ಟ್ ಇಂಡೀಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 245 ರನ್ ಗಳಿಸಿತ್ತು. ವೆಸ್ಟ್ ಇಂಡೀಸ್‌ನ ಎವಿನ್ ಲೆವಿಸ್ 49 ಎಸೆತಗಳಲ್ಲಿ ಶತಕ (5ಬೌ,9ಸಿ) ಬಾರಿಸಿದ್ದರು ಮತ್ತು ಜಾನ್ಸನ್ ಚಾರ್ಲ್ಸ್ 79 ರನ್(33ಎ, 6ಬೌ, 7ಸಿ) ಗಳಿಸಿದ್ದರು.

ಇದಕ್ಕೆ ಉತ್ತರವಾಗಿ ಭಾರತ 4 ವಿಕೆಟ್ ನಷ್ಟದಲ್ಲಿ 244 ರನ್ ಗಳಿಸಿ ವೀರೋಚಿತ ಸೋಲುಂಡಿತ್ತು.

ಲೋಕೇಶ್ ರಾಹುಲ್ ಔಟಾಗದೆ 110 ರನ್(51ಎ, 12 ಬೌ, 5ಸಿ), ರೋಹಿತ್ ಶರ್ಮಾ 62 ರನ್(28ಎ, 4ಬೌ,4ಸಿ) , ಮಹೇಂದ್ರ ಸಿಂಗ್ ಧೋನಿ 43 ರನ್ (25ಎ, 2ಬೌ,2ಸಿ) ಗಳಿಸಿದ್ದರೂ ಭಾರತ ಕೇವಲ 1 ರನ್ ಅಂತರದಲ್ಲಿ ಸೋಲು ಅನುಭವಿಸಿತು. ಅಜಿಂಕ್ಯ ರಹಾನೆ (7) ಮತ್ತು ವಿರಾಟ್ ಕೊಹ್ಲಿ(16) ವಿಫಲರಾಗಿದ್ದರು.

ರಾಹುಲ್ ಅದೇ ಪ್ರದರ್ಶನವನ್ನು ಮುಂದುವರಿಸುವ ನಿರೀಕ್ಷೆಯಲ್ಲಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಮತ್ತು ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ತಂಡದ ಸೇವೆಗೆ ಲಭ್ಯರಿಲ್ಲ. ಟೆಸ್ಟ್ ಸರಣಿಗೆ ಬುಮ್ರಾ ವಾಪಸಾಗಲಿದ್ದಾರೆ.

ಸ್ಪೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ವೆಸ್ಟ್ ತಂಡಕ್ಕೆ ಟ್ವೆಂಟಿ-20 ಸರಣಿಗೆ ಲಭ್ಯರಿಲ್ಲ. ಅವರು ಕೆನಡಾದಲ್ಲಿ ಗ್ಲೋಬಲ್ ಟಿ20 ಟೂರ್ನಮೆಂಟ್‌ನಲ್ಲಿ ಆಡುತ್ತಿದ್ದಾರೆ. ಅವರು ಏಕದಿನ ಸರಣಿಯಲ್ಲಿ ಆಡಲಿದ್ದಾರೆ. ಅವರ ಪಾಲಿಗೆ ಇದು ಕೊನೆಯ ಏಕದಿನ ಸರಣಿಯಾಗುವ ಸಾಧ್ಯತೆ ಇದೆ. 39ರ ಹರೆಯದ ಗೇಲ್ ಭಾರತದಲ್ಲಿ 2023ರಲ್ಲಿ ನಡೆಯಲಿರುವ ವರ್ಲ್ಡ್ ಕಪ್ ತನಕ ಆಡುವ ಸಾಧ್ಯತೆ ದೂರವಾಗಿದೆ. ಭಾರತ ಟೆಸ್ಟ್, ಏಕದಿನ ಮತ್ತು ಟ್ವೆಂಟಿ-20 ಸರಣಿಯಲ್ಲಿ ಫೇವರಿಟ್ ಆಗಿ ಕಂಡು ಬಂದರೂ, ತವರಿನಲ್ಲಿ ವಿಂಡೀಸ್ ಹೋರಾಟ ನಡೆಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X