Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಜಾರ್ಜ್ ಫೆರ್ನಾಂಡಿಸ್ ನೆನಪಿಗೆ...

ಜಾರ್ಜ್ ಫೆರ್ನಾಂಡಿಸ್ ನೆನಪಿಗೆ ಬರಲಿಲ್ಲವೇ?

-ಅಮ್ಮೆಂಬಳ ಆನಂದ, ಮಣಿಪಾಲ-ಅಮ್ಮೆಂಬಳ ಆನಂದ, ಮಣಿಪಾಲ1 Aug 2019 11:54 PM IST
share

ಮಾನ್ಯರೇ,

1999ರಲ್ಲಿ ಅಟಲ್ ಬಿಹಾರಿ ವಾಜಪೇಯಿಯವರು ಸರಕಾರವು ಅವರ ಮಂತ್ರಿಮಂಡಲದಲ್ಲಿ ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ನೇತೃತ್ವದಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್‌ನಲ್ಲಿ ಯುದ್ಧ ಮಾಡಿ ಭಾರತವು ಗೆದ್ದಿದ್ದರ 20ನೇ ವರ್ಷದ ಸಂಭ್ರಮವನ್ನು ವಿಶೇಷವಾಗಿ ವಿವಿಧ ಮಾಧ್ಯಮ ಚಾನೆಲ್‌ಗಳು ಭಾರತದ ಜನತೆಗೆ ಸಡಗರದಿಂದ ಅನುಭವಿಸುವಂತೆ ಮಾಡಿದವು. ಇದು ಔಚಿತ್ಯಪೂರ್ಣವೂ ಅಭಿನಂದನೀಯವೂ ಆದ ಸಂಗತಿ.

ಇದೇ ಸಂಭ್ರಮವನ್ನು ಶನಿವಾರ ದಿಲ್ಲಿಯ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ಪ್ರದರ್ಶಿಸಿದ್ದನ್ನು ಸಿಎನ್‌ಎನ್ ಸುದ್ದಿ ಮಾಧ್ಯಮ ರಾತ್ರಿ 7ರಿಂದ ನೇರ ಪ್ರಸಾರ ಮಾಡಿತ್ತು. ಪ್ರಧಾನಿ ನರೇಂದ್ರ ಮೋದಿ ಸಮಾರಂಭದ ಉದ್ದಕ್ಕೂ ಉಪಸ್ಥಿತರಿದ್ದರಲ್ಲದೆ, ಸಾಂದರ್ಭಿಕವಾದ ಸುಮಾರು 20 ನಿಮಿಷ ತಮ್ಮ ಭಾಷಣವನ್ನು ವೇದಿಕೆಯಲ್ಲಿ ಮಾಡಿದರು. ಅಂದು ಯುದ್ಧದಲ್ಲಿ ಹುತಾತ್ಮರಾಗಿದ್ದ ಸೈನಿಕರ ಮಾತೆಯರಿಗೆ ತಮ್ಮ ನಮನ ಸಲ್ಲಿಸಿದರು. ಕಾರ್ಗಿಲ್ ಯುದ್ಧದ ವಿಜಯೋತ್ಸವದ ನೆನಪಿಗಾಗಿ ರಕ್ಷಣಾ ಖಾತೆಗೆ ಮತ್ತು ಯೋಧರು ಹಾಗೂ ಯುದ್ಧದಲ್ಲಿ ಮಡಿದ ಹುತಾತ್ಮರ ಮಕ್ಕಳಿಗೆ ಸರಕಾರದಿಂದ ನೀಡುವ ವಿಶೇಷ ಸವಲತ್ತುಗಳನ್ನು ಕೂಡ ಅವರು ಘೋಷಿಸಿದರು.

 ತಾನು ಒಮ್ಮೆ ಕಾರ್ಗಿಲ್‌ಗೆ ಭೇಟಿ ಮಾಡಿದ್ದನ್ನು ಸ್ಮರಿಸಿಕೊಂಡ ‘‘ಇದು ನನ್ನ ತೀರ್ಥಯಾತ್ರೆ’’ ಎಂದು ಹೇಳಿಕೊಂಡರು. ಆದರೆ ಆ ಯುದ್ಧ ನಡೆಯುತ್ತಿರುವಾಗ ರಕ್ಷಣಾ ಮಂತ್ರಿಯಾಗಿದ್ದ ಜಾರ್ಜ್ ಫೆರ್ನಾಂಡಿಸ್ ಅವರ ನೆನಪು ಪ್ರಧಾನಿ ಮಂತ್ರಿಗಳಿಗೆ ಆಗದೇ ಇರುವುದು ಆಶ್ಚರ್ಯವೂ ಶೋಚನೀಯವೂ ಹೌದು. ಜಾರ್ಜ್ ಯುದ್ಧ ನಡೆಯುತ್ತಿರುವಾಗಲೇ ರಣರಂಗಕ್ಕೆ ಹಲವು ಬಾರಿ ಸ್ವತಃ ಹೋಗಿ ಸೈನಿಕರಲ್ಲಿ ಧೈರ್ಯ ತುಂಬಿದ್ದರು ಕೂಡ.

ಜಾರ್ಜ್ ನಿಧನರಾಗಿ ಆರು ತಿಂಗಳು ಕಳೆಯುವಷ್ಟರಲ್ಲಿ ಪ್ರಧಾನಮಂತ್ರಿಗಳು ಅವರನ್ನು ಮರೆತುಬಿಟ್ಟರೋ ಹೇಗೆ? ಭಾಷಣದ ಕೊನೆಗೆ ಈಗಿನ ಭಾಜಪ ಜಾಯಮಾನದಂತೆ ‘‘ಭಾರತ್ ಮಾತಾಕೀ ಜೈ’’ ಎಂಬ ಘೋಷಣೆಯನ್ನು ತಾನು ಮಾಡಿ ಅದಕ್ಕೆ ಸಭಿಕರ ಮರು ಘೋಷಣೆಯನ್ನು ಸ್ವೀಕರಿಸಿದರು. ಆದರೆ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರೂ ಘೋಷಿಸಿ ಇದುವರೆಗೂ ಪ್ರಚಲಿತವಿರುವ ‘‘ಜೈ ಹಿಂದ್’’, ಅಂತೆಯೇ ನೆಹರೂ ಉತ್ತರಾಧಿಕಾರಿ ಲಾಲ್ ಬಹದ್ದೂರ್ ಶಾಸ್ತ್ರಿ ಅಂದು ಮೊಳಗಿಸಿದ್ದ ‘‘ಜೈ ಜವಾನ್ ಜೈ ಕಿಸಾನ್’’ ಇವುಗಳ ನೆನಪು ಈ ಸಂದರ್ಭದಲ್ಲಿ ಮಾಡುವುದು ಔಚಿತ್ಯವಾಗಿತ್ತಲ್ಲವೇ? ಇಂತಹ ಮರೆಗುಳಿ ಏನನ್ನು ಸೂಚಿಸುತ್ತದೆ?

share
-ಅಮ್ಮೆಂಬಳ ಆನಂದ, ಮಣಿಪಾಲ
-ಅಮ್ಮೆಂಬಳ ಆನಂದ, ಮಣಿಪಾಲ
Next Story
X