Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಹಳೆಗನ್ನಡದ ಹೊಸ ನೋಟಗಳು....

ಹಳೆಗನ್ನಡದ ಹೊಸ ನೋಟಗಳು....

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ1 Aug 2019 6:40 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹಳೆಗನ್ನಡದ ಹೊಸ ನೋಟಗಳು....

ಇಂದು ಹಳೆಗನ್ನಡ ಕೇವಲ ಕನ್ನಡ ಸಾಹಿತ್ಯ ವಿದ್ಯಾರ್ಥಿಗಳಿಗೆ ಅನಿವಾರ್ಯ ಎನ್ನುವ ಕಾರಣಕ್ಕಾಗಿ ಮೀಸಲಾಗಿ ಉಳಿದಿದೆ. ನಾಲ್ಕೈದು ದಶಕಗಳ ಹಿಂದೆ, ಹೊಸಗನ್ನಡದ ನಡುವೆಯೂ ಹಳೆಗನ್ನಡದಲ್ಲಿ ಕಾವ್ಯಗಳನ್ನು ಬರೆದ ಹಿರಿಯ ಕವಿಗಳಿದ್ದಾರೆ. ಹಲವು ಕವಿಗಳು ಈ ದಿನಗಳಲ್ಲೂ ಹಳೆಗನ್ನಡದ ಮೇಲೆ ಆಸಕ್ತಿ ತೋರಿಸುತ್ತಾರಾದರೂ, ಅವುಗಳಿಗೆ ಓದುಗರ ಸಂಖ್ಯೆ ತೀರಾ ಕಡಿಮೆ. ವಿದ್ವಾಂಸರು, ಶಿಕ್ಷಕರು ಕುತೂಹಲಕ್ಕಾಗಿಯಷ್ಟೇ ಅವುಗಳನ್ನು ಕೈಗೆತ್ತಿಕೊಳ್ಳುತ್ತಾರೆ. ಹೊಸತಲೆಮಾರು ಕನ್ನಡದ ಗಂಭೀರ ಸಾಹಿತ್ಯವನ್ನು ತಲೆಯೆತ್ತಿ ನೋಡದ ಈ ದಿನಗಳಲ್ಲಿ ಹಳೆಗನ್ನಡವನ್ನು ಓದುತ್ತದೆ ಎಂದು ನಿರೀಕ್ಷಿಸುವುದೇ ತಪ್ಪಾಗುತ್ತದೆ. ಇಷ್ಟಾದರೂ, ಕನ್ನಡದ ಬೇರುಗಳನ್ನು ಉಳಿಸಿಕೊಳ್ಳುವುದು ನಮ್ಮ ಭಾಷೆಯ ಅಸ್ಮಿತೆಯ ದೃಷ್ಟಿಯಿಂದ ಅತ್ಯಗತ್ಯ. ಕನ್ನಡ ಸಾಹಿತ್ಯ ಪರಂಪರೆಗಳನ್ನು ಗುರುತಿಸಬೇಕಾದರೆ ಹಳೆಗನ್ನಡವನ್ನು ನಾವು ನಿರ್ಲಕ್ಷಿಸುವಂತೆಯೇ ಇಲ್ಲ. ಹಳೆಗನ್ನಡವನ್ನು ತಿರಸ್ಕರಿಸುವುದೆಂದರೆ, ಕನ್ನಡ ಸಾಹಿತ್ಯ ಪರಂಪರೆಯನ್ನೇ ತಿರಸ್ಕರಿಸುವುದೆಂದರ್ಥ. ಈ ನಿಟ್ಟಿನಲ್ಲಿ 2018ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಖಿಲ ಭಾರತ ಪ್ರಪ್ರಥಮ ಹಳೆಗನ್ನಡ ಸಾಹಿತ್ಯ ಸಮ್ಮೇಳನ ಶ್ರವಣಬೆಳಗೊಳದಲ್ಲಿ ನಡೆಯಿತು.ಹಲವು ಹಿರಿ-ಕಿರಿಯರು ಈ ಸಮ್ಮೇಳನದಲ್ಲಿ ಪ್ರಬಂಧ ಮಂಡಿಸಿದರು. ಆ ಪ್ರಬಂಧಗಳನ್ನು ಕನ್ನಡ ಸಾಹಿತ್ಯ ಪರಿಷತ್ ಒಟ್ಟುಗೂಡಿಸಿ ಪುಸ್ತಕ ರೂಪದಲ್ಲಿ ಹೊರತಂದಿದೆ. ‘ಹಳತು-ಹೊನ್ನು’ ಹೆಸರಿನ ಈ ಕೃತಿಯ ಪ್ರಧಾನ ಸಂಪಾದಕರು ನಾಡೋಜ ಡಾ. ಮನು ಬಳಿಗಾರ್. ಸಂಪಾದಕರಾಗಿ ಡಾ. ಪದ್ಮರಾಜ ದಂಡಾವತಿ ಕೈ ಜೋಡಿಸಿದ್ದಾರೆ.
ಪ್ರೊ. ಹಂಪ ನಾಗರಾಜಯ್ಯ, ಷ. ಶೆಟ್ಟರ್, ಪುರುಷೋತ್ತಮ ಬಿಳಿಮಲೆ, ಚಂದ್ರಶೇಖರ ನಂಗಲಿ, ಡಾ. ಶಾಂತಿನಾಥ ದಿಬ್ಬದ, ಡಾ. ದುರ್ಗಾದಾಸ್, ಗೀತಾ ವಸಂತ, ಡಾ. ಪ್ರಮೀಳಾ ಮಾಧವ್, ಡಾ. ಶ್ರೀಕಂಠ ಕೂಡಿಗೆ, ಡಾ. ಕೆ. ವೈ. ನಾರಾಯಣ ಸ್ವಾಮಿ, ಎಂ.ಎಸ್. ಆಶಾದೇವಿ, ಡಾ. ಪಿ.ವಿ. ನಾರಾಯಣ, ಮೇಟಿ ಮಲ್ಲಿಕಾರ್ಜುನ, ಡಾ. ಮಾಧವ ಪೆರಾಜೆ, ಡಾ. ಶ್ರೀವತ್ಸ ಎಸ್. ವಟಿ, ಡಾ. ಎಸ್.ಪಿ. ಪದ್ಮಪ್ರಸಾದ್, ವೆಂಕಟಗಿರಿ ದಳವಾಯಿ, ಡಾ. ತಮಿಳ್ ಸೆಲ್ವಿ, ಡಾ. ಜಿನದತ್ತ ಹಡಗಲಿ, ಪ್ರೊ. ಪ್ರೀತಿ ಶುಭಚಂದ್ರ ಇಷ್ಟು ಲೇಖಕರು ಮಂಡಿಸಿದ ಹಳೆಗನ್ನಡಕ್ಕೆ ಸಂಬಂಧಿಸಿದ ಮಹತ್ವದ ಪ್ರಬಂಧಗಳನ್ನು ಇಲ್ಲಿ ಒಟ್ಟುಗೂಡಿಸಲಾಗಿದೆ.
ಷ. ಶೆಟ್ಟರ್ ಅವರ ಸಮ್ಮೇಳನಾಧ್ಯಕ್ಷರ ಭಾಷಣ, ಹಳೆಗನ್ನಡ ಸಾಹಿತ್ಯದ ಪ್ರೇರಣೆ-ಪರಿಕಲ್ಪನೆಗಳ ವಿನ್ಯಾಸಗಳ ಕುರಿತ ಹಂಪ ನಾಗರಾಜಯ್ಯ ಲೇಖನ, ಮರುಸೃಷ್ಟಿಯ ಸವಾಲುಗಳ ಕುರಿತ ಬಿಳಿಮಲೆಯ ಒಳನೋಟ, 11ನೇ ಶತಮಾನದ ಸಾಹಿತ್ಯದಲ್ಲಿ ಹಿಂಸೆ-ಅಹಿಂಸೆಗಳ ನಿರ್ವಹಣೆಯ ಕುರಿತಂತೆ ಶ್ರೀಕಂಠ ಕೂಡಿಗೆಯವರ ವಿಶ್ಲೇಷಣೆ, ಸ್ತ್ರೀ ದೃಷ್ಟಿಯಲ್ಲಿ ಹಳೆಗನ್ನಡ ಸಾಹಿತ್ಯದ ಪ್ರಸ್ತುತತೆಯ ಕುರಿತಂತೆ ಆಶಾದೇವಿಯವರ ಬರಹ, ತಮಿಳ್ ಸೆಲ್ವಿ ಅವರ ಕವಿರಾಜಮಾರ್ಗದ ಅನನ್ಯತೆ ಈ ಕೃತಿಯೊಳಗಿನ ಮಹತ್ವದ ಲೇಖನಗಳಾಗಿವೆ. ಒಟ್ಟು ಸಮ್ಮೇಳನದ ಭಾಷಣಗಳ ಕುರಿತಂತೆ ಡಾ. ಪದ್ಮರಾಜ ದಂಡಾವತಿ ಅವರ ದೀರ್ಘ ಅವಲೋಕನವೂ ಇದರೊಳಗೆ ಸೇರಿಕೊಂಡಿದೆ. 276 ಪುಟಗಳ ಕೃತಿಯ ಮುಖಬೆಲೆ 210 ರೂಪಾಯಿ. ಕನ್ನಡ ಸಾಹಿತ್ಯ ಪರಿಷತ್ ಕೃತಿಯನ್ನು ಹೊರತಂದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X