Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರವೀಶ್ ಕುಮಾರ್‌ಗೆ ಪ್ರತಿಷ್ಠಿತ...

ರವೀಶ್ ಕುಮಾರ್‌ಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ2 Aug 2019 9:49 AM IST
share
ರವೀಶ್ ಕುಮಾರ್‌ಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

ಹೊಸದಿಲ್ಲಿ, ಆ.2: ಏಶ್ಯಾದ ‘ನೋಬಲ್ ಪ್ರಶಸ್ತಿ’ ಎಂಬ ಹೆಗ್ಗಳಿಕೆ ಹೊಂದಿರುವ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಈ ಬಾರಿ ಎನ್‌ಡಿಟಿವಿ ಪತ್ರಕರ್ತ ರವೀಶ್ ಕುಮಾರ್ ಆಯ್ಕೆಯಾಗಿದ್ದಾರೆ.

ಭಾರತದ ಅತ್ಯಂತ ಪ್ರಭಾವೀ ಟಿವಿ ಪತ್ರಕರ್ತರಾಗಿರುವ ರವೀಶ್ ಕುಮಾರ್ ಧ್ವನಿ ಇಲ್ಲದವರಿಗೆ ಧ್ವನಿಯಾಗಿದ್ದಾರೆ. ಸತ್ಯದ ಪರ, ಸ್ವಾತಂತ್ರ್ಯದ ಪರ ಹಾಗೂ ಸಮಗ್ರತೆಯ ಪರವಾಗಿ ಧ್ವನಿ ಎತ್ತುವ ಧೈರ್ಯ ತೋರಿದ್ದಾರೆ. ಸಮಚಿತ್ತದ, ಹರಿತವಾದ, ಮಾಹಿತಿ ಹೊಂದಿದ ಟಿವಿ ಆ್ಯಂಕರ್ ಆಗಿದ್ದಾರೆ. ಕಾರ್ಯಕ್ರಮದ ಅತಿಥಿಗಳ ಮೇಲೆ ನಿಯಂತ್ರಣ ಸಾಧಿಸಲು ಪ್ರಯತ್ನಿಸುತ್ತಿವುದಿಲ್ಲ. ಯಾವುದೇ ರಾಜಕೀಯ ಪಕ್ಷದ ಪರ ವಹಿಸದೆ ಕಾರ್ಯಕ್ರಮ ನಿರ್ವಹಿಸುತ್ತಿರುವ ರವೀಶ್ ಕುಮಾರ್‌ಗೆ ಒಂದಿಲ್ಲೊಂದು ರೀತಿಯಲ್ಲಿ ಕಿರುಕುಳ ಮತ್ತು ಬೆದರಿಕೆ ಎದುರಾಗುತ್ತಿದೆ. ಆದರೆ ಪತ್ರಿಕಾ ಧರ್ಮಕ್ಕೆ ಚ್ಯುತಿಯಾಗದಂತೆ ಕಾರ್ಯ ನಿರ್ವಹಿಸುತ್ತಿರುವ ಅವರನ್ನು ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಪತ್ರದಲ್ಲಿ ತಿಳಿಸಲಾಗಿದೆ.

ರವೀಶ್ ಕುಮಾರ್ ಅವರಲ್ಲದೆ, ಮ್ಯಾನ್ಮಾರ್ ಮೂಲದ ಪತ್ರಕರ್ತ ಕೊ ಸ್ವೆವಿನ್, ಥೈಲ್ಯಾಂಡಿನ ಮಾನವ ಹಕ್ಕುಗಳ ಕಾರ್ಯಕರ್ತ ಆಂಖಾನಾ ನೀಲಪಜಿತ್, ಫಿಲಿಪ್ಪೀನ್ಸ್‌ನ ಪುಜಂತೆ ಕಯಾಬ್ಯಾಬ್ ಹಾಗೂ ದಕ್ಷಿಣ ಕೊರಿಯಾದ ಕಿಮ್ ಜೊಂಗ್‌ಕಿಯವರನ್ನೂ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

1996ರಿಂದಲೂ ಎನ್‌ಡಿಟಿವಿ ಜೊತೆ ಕಾರ್ಯನಿರ್ವಹಿಸುತ್ತಿರುವ ರವೀಶ್ ಕುಮಾರ್ ತಮ್ಮ ಭೀತಿಯಿಲ್ಲದ ನೇರ ನುಡಿಗಾಗಿ ಹೆಸರಾಗಿದ್ದರು ಮತ್ತು ಇದೇ ಕಾರಣಕ್ಕೆ ಇವರಿಗೆ ಹಲವು ಬಾರಿ ಜೀವಬೆದರಿಕೆ ಕರೆ ಬಂದಿತ್ತು. ಬಿಹಾರದ ಜಿತ್‌ವಾರ್‌ಪುರ ಎಂಬಲ್ಲಿ ಬಾಲ್ಯ ಕಳೆದ ರವೀಶ್ ಕುಮಾರ್ ದಿಲ್ಲಿ ವಿವಿಯಲ್ಲಿ ಉನ್ನತ ಅಧ್ಯಯನ ನಡೆಸುವಾಗ ಚರಿತ್ರೆ ಮತ್ತು ಸಾರ್ವಜನಿಕ ವ್ಯವಹಾರ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಹಿಂದೆ ಆರ್‌ಕೆ ಲಕ್ಷ್ಮಣ್, ಪಿ ಸಾಯಿನಾಥ್, ಅರುಣ್ ಶೌರಿ, ಕಿರಣ್ ಬೇಡಿ ಹಾಗೂ ಅರವಿಂದ್ ಕೇಜ್ರಿವಾಲ್ ಈ ಪ್ರತಿಷ್ಠಿತ ಪ್ರಶಸ್ತಿ ಪಡೆದ ಭಾರತೀಯರಾಗಿದ್ದಾರೆ.

“ಮ್ಯಾಗ್ಸೆಸೆ ಪುರಸ್ಕೃತರ ಕೂಟಕ್ಕೆ ರವೀಶ್ ಕುಮಾರ್‌ಗೆ ಸುಸ್ವಾಗತ. ಈಗಿನ ಕಠಿಣ ದಿನಗಳಲ್ಲಿ ಅವರ ಧೀರ ಪತ್ರಿಕೋದ್ಯಮ ಮತ್ತಷ್ಟು ಬಲಿಷ್ಟವಾಗಲಿದೆ ಎಂಬ ಆಶಾವಾದ ಹೊಂದಿದ್ದೇನೆ” ಎಂದು ದಿಲ್ಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಟ್ವೀಟ್ ಮಾಡಿದ್ದಾರೆ.

ಸರಕಾರದ ಹಸ್ತಕ್ಷೇಪದಿಂದ ಬೆದರಿಕೆಗೆ ಒಳಗಾಗಿರುವ, ಕಟು ರಾಷ್ಟ್ರೀಯವಾದಿಗಳಿಂದ ಕಲುಷಿತಗೊಂಡಿರುವ, ಟ್ರೋಲ್‌ಗಳು ಹಾಗೂ ಸುಳ್ಳು ಸುದ್ದಿ ಪ್ರಸಾರ ಮಾಡುವವರಿಂದ, ಟಿಆರ್‌ಪಿ ಮೋಹಕ್ಕೆ ಒಳಗಾಗಿರುವ ಮಾಧ್ಯಮದ ವ್ಯಕ್ತಿಗಳ ನಡುವಿನ ಸ್ಪರ್ಧೆಗೆ ವೇದಿಕೆಯಾಗಿರುವ ಮಾಧ್ಯಮ ಕ್ಷೇತ್ರದಲ್ಲಿ, ಜನರಲ್ಲಿ ಕೌತುಕ ಹುಟ್ಟಿಸುವ ಬ್ರೇಕಿಂಗ್ ನ್ಯೂಸ್‌ಗಳ ಭರಾಟೆಯ ಮಧ್ಯೆ ರವೀಶ್ ಕುಮಾರ್ ಸಂಯಮದ, ಸಮತೋಲಿತ, ವಸ್ತುನಿಷ್ಟ ವರದಿಗಾರಿಕೆಯ ಕರ್ತವ್ಯ ನಿಭಾಯಿಸಿದ್ದಾರೆ ಎಂದು ಮ್ಯಾಗ್ಸೇಸೆ ಪ್ರತಿಷ್ಠಾನ ಹೇಳಿದೆ.

ಜನತೆಯ ಸುದ್ದಿಮನೆ ಜನತೆ ಆಧಾರಿತ ಪತ್ರಿಕೋದ್ಯಮದ ನಿಟ್ಟಿನಲ್ಲಿ ಶ್ರಮಿಸುತ್ತಿರುವ ರವೀಶ್ ಕುಮಾರ್ ತಾವು ಕಾರ್ಯ ನಿರ್ವಹಿಸುತ್ತಿದ್ದ ಸುದ್ದಿಮನೆಯನ್ನು ‘ಜನತೆಯ ಸುದ್ದಿಮನೆ’ ಎಂದೇ ಕರೆಯುತ್ತಿದ್ದರು. ವೃತ್ತಿಪರ ಮೌಲ್ಯಗಳಾದ ಸಂಯಮ, ಉದ್ವೇಗರಹಿತ, ಸಮತೋಲನ, ವಸ್ತುನಿಷ್ಟ ವರದಿಗಾರಿಕೆ ಪತ್ರಕರ್ತರ ಕರ್ತವ್ಯವಾಗಬೇಕು ಎಂದು ಪ್ರತಿಪಾದಿಸುವ ಜೊತೆಗೆ ಇತರರಿಗೆ ಮಾದರಿಯಾಗಿದ್ದರು ಎಂದು ಮ್ಯಾಗ್ಸೆಸೆ ಪ್ರತಿಷ್ಟಾನದ ಹೇಳಿಕೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X