Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೊರೂರು ಡ್ಯಾಮ್‍ಗೆ ಮುತ್ತಿಗೆ: ನೂರಾರು...

ಗೊರೂರು ಡ್ಯಾಮ್‍ಗೆ ಮುತ್ತಿಗೆ: ನೂರಾರು ಪ್ರತಿಭಟನಾಕಾರರ ಬಂಧನ, ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ2 Aug 2019 7:06 PM IST
share
ಗೊರೂರು ಡ್ಯಾಮ್‍ಗೆ ಮುತ್ತಿಗೆ: ನೂರಾರು ಪ್ರತಿಭಟನಾಕಾರರ ಬಂಧನ, ಬಿಡುಗಡೆ

ಹಾಸನ,ಅ.2: ಅಣೆಕಟ್ಟೆನಿಂದ ಹೇಮಾವತಿ ನದಿಗೆ ನೀರು ಬಿಡುವುದನ್ನು ನಿಲ್ಲಿಸಿ, ನಾಲೆ ಮತ್ತು ಏತ ನೀರಾವರಿ ಯೋಜನೆಯಲ್ಲಿ ನೀರು ಬಿಡುವಂತೆ ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ. ರಾಮಸ್ವಾಮಿ ನೇತೃತ್ವದಲ್ಲಿ ಗೊರೂರು ಡ್ಯಾಮ್‍ಗೆ ಮುತ್ತಿಗೆ ಹಾಕಿ ಒಳಗ ಪ್ರವೇಶ ಮಾಡುವಾಗ ಪೊಲೀಸರು ನೂರಾರು ಪ್ರತಿಭಟನಕಾರರನ್ನು ಬಂಧಿಸಿದ ಘಟನೆ ನಡೆದಿದೆ. 

ಮೊದಲು ಗೊರೂರು ಹೇಮಾವತಿ ಯೋಜನೆಯ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ಕುಳಿತು ಪ್ರತಿಭಟನೆ ನಡೆಸಿದ ಶಾಸಕರು, ರೈತರ, ಜನ-ಜಾನುವಾರುಗಳ ಜೀವ ಉಳಿಸಲು ನೀರು ಬಿಡಬೇಕು, ಹೇಮಾವತಿ ಬಲ ಮೇಲ್ದಂಡ ನಾಲೆಗೆ ನೀರು ಹರಿಸಲು ಕ್ರಮಕೈಗೊಳ್ಳಬೇಕು ಎಂದು ಮುಖ್ಯ ಇಂಜಿನಿಯರ್ ಗೆ ಪತ್ರ ಬರೆದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆರೆಗಳಲ್ಲಿ ನೀರು ಇಲ್ಲದೇ ಜಾನುವಾರುಗಳು ನೀರು ಕುಡಿಯಲು ದೂರದ  ಸ್ಥಳಗಳಿಗೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಕೂಡಲೇ ಹೇಮಾವತಿ ಜಲಾಶಯದಿಂದ ನದಿಗೆ ನೀರು ಬಿಡುವುದನ್ನು ನಿಲ್ಲಿಸಿ ರೈತರ ನಾಲೆಗಳಿಗೆ ನೀರು ಹರಿಸಬೇಕು. ಕುಡಿಯುವ ನೀರು ಹಾಗೂ ಜಮೀನು ಕೆಲಸಕ್ಕೆ ನೀರಿಲ್ಲದೆ ಅರಕಲಗೂಡು ಭಾಗದ ರೈತರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಬಲದಂಡೆ ನಾಲೆಯ ಮೂಲಕ ನೀರು ಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅರ್ಧ ಮಳೆಗಾಲ ಮುಗಿದರೂ ಜಲಾಶಯ ಭರ್ತಿಯಾಗಿಲ್ಲ. ಆದರೂ ತಮಿಳುನಾಡಿಗೆ ನದಿಯ ಮೂಲಕ ನೀರು ಬಿಡಲಾಗುತ್ತಿದೆ. ರೈತರು ಬೆಳೆದ ಬೆಳೆ ಸಂಪೂರ್ಣ ಹಾಳಾಗಿದೆ. ನಾವು ಕೇಳುತ್ತಿರುವುದು ಜನ ಜಾನುವಾರುಗಳಿಗಾಗಿ ಕುಡಿಯುವ ನೀರು. ಅದನ್ನೂ ಕೊಡದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.

ಹೇಮಾವತಿ ಜಲಾಶಯ ಭರ್ತಿಯಾಗಲು ಇನ್ನೂ 30 ಅಡಿ ಬಾಕಿ ಇದೆ. ಆದರೆ ತಮಿಳುನಾಡಿಗೆ ನದಿಯ ಮೂಲಕ ನೀರು ಬಿಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಪ್ರತಿಭಟನಕಾರರು, ಜಿಲ್ಲೆಯಲ್ಲಿ ಜಲಾಶಯ ಇದ್ದರೂ ರೈತರು ಮತ್ತು ಜನ ಜಾನುವಾರುಗಳು ಹನಿ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ನಂತರ ಪ್ರತಿಭಟನಾಕಾರರು ಹೇಮಾವತಿ ಜಲಾಶಯದ ಎಂಜಿನಿಯರ್ ಕಚೇರಿಯಿಂದ ಅಣೆಕಟ್ಟೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ಮುಖ್ಯದ್ವಾರದಲ್ಲೇ ತಡೆದರು. ಈ ವೇಳೆ ನಾಲೆಯ ಕ್ರಸ್ಟ್ ಗೇಟ್ ಎತ್ತಲು ಯತ್ನಿಸಿದಾಗ ಪೊಲೀಸರು ಶಾಸಕ ಎ.ಟಿ. ರಾಮಸ್ವಾಮಿ ಸೇರಿದಂತೆ ನೂರಾರು ರೈತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X