Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಬ್ಬ ವ್ಯಕ್ತಿಯನ್ನು ‘ಉಗ್ರ’ ಎಂದು...

ಒಬ್ಬ ವ್ಯಕ್ತಿಯನ್ನು ‘ಉಗ್ರ’ ಎಂದು ಘೋಷಿಸುವ ಯುಎಪಿಎ ಮಸೂದೆಯ ಮುಖ್ಯಾಂಶಗಳು

ವಾರ್ತಾಭಾರತಿವಾರ್ತಾಭಾರತಿ2 Aug 2019 7:12 PM IST
share
ಒಬ್ಬ ವ್ಯಕ್ತಿಯನ್ನು ‘ಉಗ್ರ’ ಎಂದು ಘೋಷಿಸುವ ಯುಎಪಿಎ ಮಸೂದೆಯ ಮುಖ್ಯಾಂಶಗಳು

ಹೊಸದಿಲ್ಲಿ, ಆ.2: ಯಾವುದೇ ವ್ಯಕ್ತಿಯನ್ನು 'ಉಗ್ರ' ಎಂದು ಹೆಸರಿಸಿ ಆತನ ಆಸ್ತಿಯನ್ನು ಜಪ್ತಿ ಮಾಡಲು ಕೇಂದ್ರ ಸರಕಾರಕ್ಕೆ ಅಧಿಕಾರ ನೀಡುವ ಉದ್ದೇಶದಿಂದ ಭಯೋತ್ಪಾದನೆ ನಿಗ್ರಹ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಶುಕ್ರವಾರ ಸಂಸತ್‌ ನಲ್ಲಿ ಅಂಗೀಕರಿಸಲಾಯಿತು.

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ, (ಯುಎಪಿಎ) 1967ಕ್ಕೆ ತಿದ್ದುಪಡಿ ತರುವ ಕಾನೂನುಬಾಹಿರ ಚಟುವಟಿಕೆಗಳ (ತಡೆ) ತಿದ್ದುಪಡಿ ಮಸೂದೆ, 2019 ಅನ್ನು ಜುಲೈ 24ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಗಿತ್ತು. ಈ ಮಸೂದೆಯನ್ನು ಆಯ್ಕೆ ಸಮಿತಿಗೆ ಪರಿಶೀಲನೆಗೆ ಕಳುಹಿಸಬೇಕು ಎಂಬ ವಿರೋಧ ಪಕ್ಷಗಳ ಆಗ್ರಹದ ನಡುವೆಯೂ ಶುಕ್ರವಾರ ರಾಜ್ಯಸಭೆಯಲ್ಲಿ ಈ ಮಸೂದೆಯನ್ನು ಅಂಗೀಕರಿಸಲಾಯಿತು. ಒಂದು ಸಂಘಟನೆಯನ್ನು ನಿಷೇಧಿಸಿದಾಗ ಇನ್ನೊಂದು ಸಂಘಟನೆಯನ್ನು ಸ್ಥಾಪಿಸುವ ಕಾರಣ ಅಂತಹ ವ್ಯಕ್ತಿಗಳನ್ನು 'ಉಗ್ರ' ಎಂದು ಹೆಸರಿಸುವುದು ಅನಿವಾರ್ಯ. ಈ ಕಾಯ್ದೆಯಲ್ಲಿ ನಾಲ್ಕು ಹಂತದ ಪರಿಶೀಲನೆಯ ಅವಕಾಶವನ್ನು ಒದಗಿಸಲಾಗಿದ್ದು, ಯಾವುದೇ ರೀತಿಯ ಮಾನವ ಹಕ್ಕುಗಳ ಉಲ್ಲಂಘನೆಯಾಗುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ ಅದು ಮಾನವತೆಯ ವಿರುದ್ಧವಾಗಿದೆ ಎಂದು ಶಾ ಅಭಿಪ್ರಾಯಿಸಿದ್ದಾರೆ.

►ಯುಎಪಿಎ 2019ರ ಮುಖ್ಯಾಂಶಗಳು:

ಸದ್ಯ ತಿದ್ದುಪಡಿ ಮಾಡಲಾದ ಯುಎಪಿಎ ಮಸೂದೆಯಲ್ಲಿ ಉಗ್ರ ಅಥವಾ ಉಗ್ರವಾದದ ವ್ಯಾಖ್ಯಾನವನ್ನು ನೀಡಲಾಗಿಲ್ಲ. ಆದರೆ ಈ ಮಸೂದೆಯ 15ನೇ ವಿಧಿಯಲ್ಲಿ, ಏಕತೆ, ಸಮಗ್ರತೆ, ಭದ್ರತೆ, ಆರ್ಥಿಕ ಭದ್ರತೆ ಅಥವಾ ಭಾರತದ ಸಾರ್ವಭೌಮತೆಗೆ ಬೆದರಿಕೆಯೊಡ್ಡುವ ಅಥವಾ ಭಾರತದಲ್ಲಿ ಅಥವಾ ಇತರ ದೇಶದ ಜನರಲ್ಲಿ ಅಥವಾ ಜನರ ಒಂದು ವಿಭಾಗದಲ್ಲಿ ಭಯವನ್ನು ಸೃಷ್ಟಿಸುವ ಉದ್ದೇಶ ಹೊಂದಿರುವ ಕ್ರಮ ಅಥವಾ ನಡತೆಯನ್ನು ಭಯೋತ್ಪಾದಕ ಚಟುವಟಿಕೆ ಎಂದು ವ್ಯಾಖ್ಯಾನಿಸಲಾಗಿದೆ.

ಅಧಿಕೃತ ಗೆಜೆಟ್‌ ನಲ್ಲಿ ಅಧಿಸೂಚನೆಯ ಮೂಲಕ ಕೇಂದ್ರ ಸರಕಾರ ಓರ್ವ ವ್ಯಕ್ತಿಯನ್ನು 'ಉಗ್ರ' ಎಂದು ಹೆಸರಿಸಬಹುದಾಗಿದೆ. ಹಾಗೆ ಮಾಡುವುದಕ್ಕೂ ಮೊದಲು ಆ ವ್ಯಕ್ತಿಯನ್ನು ವಾದವನ್ನು ಆಲಿಸುವ ಅಗತ್ಯ ಇರುವುದಿಲ್ಲ. ವಿಶ್ವ ಸಂಸ್ಥೆಯ ಓರ್ವ ವ್ಯಕ್ತಿಯನ್ನು ಜಾಗತಿಕ 'ಉಗ್ರ' ಎಂದು ಘೋಷಿಸಿದ ಸಂದರ್ಭದಲ್ಲಿ ಆ ವ್ಯಕ್ತಿಯ ಪ್ರಯಾಣದ ಮೇಲೆ ನಿಷೇಧ, ಆಸ್ತಿಗಳ ಮುಟ್ಟುಗೋಲು ಮತ್ತು ಶಸ್ತ್ರಾಸ್ತ್ರ ಖರೀದಿಯ ಮೇಲೆ ನಿಷೇಧ ಹೇರಲಾಗುತ್ತದೆ. ಆದರೆ ಯುಎಪಿಎ ಮಸೂದೆಯಲ್ಲಿ ಅಂತಹ ಯಾವುದೇ ವಿವರಣೆ ನೀಡಲಾಗಿಲ್ಲ.

ಈ ಮಸೂದೆಯ ಪ್ರಕಾರ, ಓರ್ವ ವ್ಯಕ್ತಿಯನ್ನು 'ಉಗ್ರ' ಎಂದು ಘೋಷಿಸಲು ಆತನ ವಿರುದ್ಧ ದೂರು ದಾಖಲಿಸುವ ಅಥವಾ ಬಂಧಿಸುವ ಅಗತ್ಯವಿರುವುದಿಲ್ಲ. ತಿದ್ದುಪಡಿ ಕಾಯ್ದೆಯ ಪ್ರಕಾರ, 'ಉಗ್ರ' ಎಂಬ ಹಣೆಪಟ್ಟಿ ತೆಗೆದು ಹಾಕುವಂತೆ ವ್ಯಕ್ತಿ ಮನವಿ ಮಾಡಿದ ಸಂದರ್ಭದಲ್ಲಿ ಹಾಗೆ ಮಾಡುವ ಅಧಿಕಾರವೂ ಕೇಂದ್ರ ಸರಕಾರಕ್ಕಿದೆ. ಅಂತಹ ಅರ್ಜಿ ಪರಿಶೀಲಿಸುವ ಪ್ರಕ್ರಿಯೆ ಮತ್ತು ನಿರ್ಧಾರ ಮಾಡುವ ಪ್ರಕ್ರಿಯೆಯನ್ನು ಕೇಂದ್ರ ಸರಕಾರ ನಿರ್ಧರಿಸಲಿದೆ.

ಸರಕಾರ ಆತನ ಅರ್ಜಿಯನ್ನು ತಿರಸ್ಕರಿಸಿದರೆ ಆತ ಒಂದು ತಿಂಗಳ ಒಳಗಾಗಿ ಸರಕಾರ ರಚಿಸಿರುವ ಉಚ್ಚ ನ್ಯಾಯಾಲಯದ ಮಾಜಿ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದ ನಾಲ್ಕು ಸದಸ್ಯರ ಪರಿಶೀಲನಾ ಸಮಿತಿಗೆ ತನ್ನ ಅರ್ಜಿಯನ್ನು ಪರಿಶೀಲನೆಗೆ ಕಳುಹಿಸಬಹುದಾಗಿದೆ. ಅಲ್ಲೂ ತಿರಸ್ಕೃತಗೊಂಡರೆ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ನ್ಯಾಯಾಲಯಗಳಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X