Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರಿಗೆ ರಾತ್ರಿ ಪಾಳಿಯ ಕೆಲಸ...

ಮಹಿಳೆಯರಿಗೆ ರಾತ್ರಿ ಪಾಳಿಯ ಕೆಲಸ ಸರಿಯಲ್ಲ ಎಂದ ಬಿಜೆಪಿ ಶಾಸಕಿ

ವಾರ್ತಾಭಾರತಿವಾರ್ತಾಭಾರತಿ2 Aug 2019 8:18 PM IST
share
ಮಹಿಳೆಯರಿಗೆ ರಾತ್ರಿ ಪಾಳಿಯ ಕೆಲಸ ಸರಿಯಲ್ಲ ಎಂದ ಬಿಜೆಪಿ ಶಾಸಕಿ

ಪಣಜಿ, ಆ.2: ಮಹಿಳೆಯರು ಸ್ತ್ರೀಸಹಜವಾದ ಕೋಮಲತೆಯುಳ್ಳವರಾದ ಕಾರಣ ಅವರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಬಾರದು ಎಂದು ಗೋವಾದ ಬಿಜೆಪಿ ಶಾಸಕಿ ಅಲೀನಾ ಸಲ್ದಾನಾ ಹೇಳಿದ್ದಾರೆ.

ಮಹಿಳೆಯರು ರಾತ್ರಿ ವೇಳೆ ಮನೆಯಲ್ಲಿರದಿದ್ದರೆ ಮಕ್ಕಳಿಗೆ ಸಮಸ್ಯೆಯಾಗುತ್ತದೆ. ಪುರುಷರಿಗೆ ಹೋಲಿಸಿದರೆ ಮಹಿಳೆಯರು ಸ್ತ್ರೀಸಹಜ ಕೋಮಲತೆ ಹೊಂದಿದವರು. ಆದ್ದರಿಂದ ಅವರನ್ನು ರಾತ್ರಿ ಪಾಳಿಯಲ್ಲಿ ದುಡಿಸಬಾರದು ಎಂದು ವಿಧಾನಸಭೆಯ ಹೊರಭಾಗದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಶಾಸಕಿ ಹೇಳಿದರು.

ಗುರುವಾರ ವಿಧಾನಸಭೆಯಲ್ಲಿ ಮಾತನಾಡಿದ್ದ ಗೋವಾ ಮುಖ್ಯಮಂತ್ರಿ ಚರ್ಚಿಲ್ ಅಲೆಮೊ, ಗೋವಾದ ಮಹಿಳೆಯರು ಕೋಮಲೆಯರಾಗಿದ್ದು ಅವರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಬಾರದು. ಗೋವಾ ರಾಜ್ಯದವರಲ್ಲದ ಮಹಿಳೆಯರು ‘ತುಂಬಾ ಜೋರಿನವರು’ ಎಂದು ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಫ್ಯಾಕ್ಟರಿ ಹಾಗೂ ಉತ್ಪಾದನಾ ಘಟಕದಲ್ಲಿ ಮಹಿಳೆಯರಿಗೆ ರಾತ್ರಿ ಪಾಳಿ ಕೆಲಸಕ್ಕೆ ಅನುವು ಮಾಡಿಕೊಡುವ ‘ಫ್ಯಾಕ್ಟರೀಸ್ (ಗೋವಾ ತಿದ್ದುಪಡಿ) ಕಾಯ್ದೆ 2019 ಗುರುವಾರ ಗೋವಾ ವಿಧಾನಸಭೆಯಲ್ಲಿ 26-5 ಮತಗಳ ಅಂತರದಿಂದ ಅಂಗೀಕಾರವಾಗಿತ್ತು.

 ವಿಧಾನಸಭೆಯಲ್ಲಿ ತಮ್ಮ ಅಸಮಾಧಾನವನ್ನು ಯಾಕೆ ವ್ಯಕ್ತಪಡಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕಿ ಸಲ್ದಾನಾ, ನಾನು ಆಕ್ಷೇಪಿಸಿಲ್ಲ ಎಂದು ಹೇಳುವುದು ಸರಿಯಲ್ಲ. ಇನ್ನೊಂದು ವಿಷಯದ ಬಗ್ಗೆ ಕೆಲವು ಅಂಶಗಳನ್ನು ಸಂಗ್ರಹಿಸಿ ಬರೆದಿಟ್ಟುಕೊಳ್ಳುವುದರಲ್ಲಿ ಮಗ್ನವಾಗಿದ್ದರಿಂದ ಆಕ್ಷೇಪ ಎತ್ತಲು ಅವಕಾಶ ಸಿಗಲಿಲ್ಲ. ಅದೊಂದು ಅಲ್ಪಾವಧಿಯ ಚರ್ಚೆಯಾಗಿದ್ದರಿಂದ ನನಗೆ ಭಾಗವಹಿಸಲು ಆಗಲಿಲ್ಲ. ಈ ಬಗ್ಗೆ ವಿಷಾಧವಿದೆ ಎಂದರು.

ಮಕ್ಕಳು ಮನೆಯಿಂದ ಶಾಲೆಗೆ ತೆರಳುವಾಗ ಹಾಗೂ ರಾತ್ರಿ ವೇಳೆ ಮನೆಯಲ್ಲಿ ಮಹಿಳೆಯರು ಇರಬೇಕು. ಅವರು ತಾಯಂದಿರು. ಅವರಿಗೆ ಬಹಳಷ್ಟು ಜವಾಬ್ದಾರಿಗಳಿರುತ್ತವೆ. ಮನೆಯಲ್ಲಿ ತಾಯಿ ಇರದಿದ್ದರೆ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಬಹುದು. ಮಹಿಳೆಯರು ರಾತ್ರಿ ಪಾಳಿಯಲ್ಲಿ ದುಡಿಯಬಾರದು ಎಂಬುದು ನನ್ನ ಅಭಿಪ್ರಾಯವಾಗಿದೆ. ಮಸೂದೆಯಲಿರುವ ನ್ಯೂನತೆಯ ಬಗ್ಗೆ ಗಮನ ಹರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಶಾಸಕಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X