Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಷ ಸೇವಿಸಲು ಮುಂದಾದ ಗುತ್ತಿಗೆ ನೌಕರರು:...

ವಿಷ ಸೇವಿಸಲು ಮುಂದಾದ ಗುತ್ತಿಗೆ ನೌಕರರು: ಬಾಟಲಿ ವಶಪಡಿಸಿಕೊಂಡ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ2 Aug 2019 9:55 PM IST
share
ವಿಷ ಸೇವಿಸಲು ಮುಂದಾದ ಗುತ್ತಿಗೆ ನೌಕರರು: ಬಾಟಲಿ ವಶಪಡಿಸಿಕೊಂಡ ಪೊಲೀಸರು

ಚಿಕ್ಕಮಗಳೂರು, ಆ.2: ನಗರದ ಮಲ್ಲೇಗೌಡ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸದಿಂದ ತೆಗೆದು ಹಾಕಿರುವ ಹೊರಗುತ್ತಿಗೆ ನೌಕರರು ವಿಷ ಸೇವಿಸಲು ಮುಂದಾದಾಗ ಪೊಲೀಸರು ವಿಷದ ಬಾಟಲಿ ವಶಪಡಿಸಿಕೊಂಡು ಸಂಭವಿಸಲಿದ್ದ ಅನಾಹುತ ತಪ್ಪಿಸಿದ ಘಟನೆ ಶುಕ್ರವಾರ ನಡೆಯಿತು.

ಸರಕಾರದ ಆದೇಶದ ಮೇರೆಗೆ ಜಿಲ್ಲಾಸ್ಪತ್ರೆಯಲ್ಲಿ ಹೊರಗುತ್ತಿಗೆ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲ ನೌಕರರನ್ನು ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಇತ್ತೀಚೆಗೆ ಕೆಲಸದಿಂದ ತೆಗೆದು ಹಾಕಿದ್ದರು. ಅಧಿಕಾರಿಗಳ ಕ್ರಮ ಖಂಡಿಸಿ ಹೊರಗುತ್ತಿಗೆ ನೌಕರರು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಗುರುವಾರದಿಂದ ಪ್ರತಿಭಟನೆಗೆ ಮುಂದಾಗಿದ್ದರು. ಶುಕ್ರವಾರ ಬೆಳಗ್ಗೆಯೂ ನೌಕರರು ಆಸ್ಪತ್ರೆ ಮುಂಭಾಗ ಧರಣಿ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷೆ ರಾಧಾ ಸುಂದರೇಶ್ ನೌಕರರ ಧರಣಿಗೆ ಆಗಮಿಸಿ ಬೆಂಬಲ ವ್ಯಕ್ತಪಡಿಸಿದರು.

ಇದೇ ವೇಳೆ ಹಲವರಿಂದ ಸಹಿ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾಗುವಂತೆ ವೈದ್ಯಾಧಿಕಾರಿಗಳು ಸೂಚಿಸಿದರು. ಆದರೆ ನೌಕರರು ಮಾತ್ರ ಇತ್ತೀಚೆಗೆ ಕೆಲಸದಿಂದ ತೆಗೆದು ಹಾಕಿರುವ ನೌಕರರನ್ನು ಕೆಲಸಕ್ಕೆ ಸೇರಿಸಿಕೊಳ್ಳುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದು ಧರಣಿ ಮುಂದುವರಿಸಿದರು.

ಇದೇ ಸಂದರ್ಭದಲ್ಲಿ ಧರಣಿ ನಿರತ ನೌಕರರ ಪೈಕಿ ಕೆಲ ನೌಕರರು ವಿಷದ ಬಾಟಲಿಯನ್ನು ಪ್ರದರ್ಶಿಸಿ ವಜಾ ಮಾಡಲಾದ ನೌಕರರನ್ನು ಕೆಲಕ್ಕೆ ನೇಮಿಸಿಕೊಳ್ಳದಿದ್ದಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಧಿಕಾರಿಗಳನ್ನು ಎಚ್ಚರಿಕೆ ನೀಡಿದರು. ಈ ವೇಳೆ ಧರಣಿ ನಿರತರು, ಸಂಘಟನೆಗಳ ಮುಖಂಡರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ನಡುವೆ ಸ್ಥಳದಲ್ಲಿ ಮಾತುಕತೆ ನಡೆಯುತ್ತಿತ್ತು. ಈ ವೇಳೆ ಕೆಲ ನೌಕರರು ವಿಷ ಕುಡಿಯಲು ಮುಂದಾಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಧರಣಿ ನಿರತರ ಕೈಯಿಂದ ವಿಷದ ಬಾಟಲಿಗಳನ್ನು ಕಿತ್ತುಕೊಂಡು ಸಂಭವಿಸಲಿದ್ದ ಅನಾಹುತವನ್ನು ತಪ್ಪಿಸಿದರು.

ಇದರಿಂದ ಆಕ್ರೋಶಗೊಂಡ ನೌಕರರು ಕೆಲಸಕೊಡಿ ಇಲ್ಲಾ ವಿಷಕೊಡಿ ಎಂದು ಏರುಧ್ವನಿಯಲ್ಲೆ ಧರಣಿಯನ್ನು ಬಿರುಸುಗೊಳಿಸಿದರು. ಈ ವೇಳೆ ಪೊಲೀಸರು ಸಮಾಧಾನಪಡಿಸಿ ವಿಷದ ಬಾಟಲಿಯನ್ನು ವಶಕ್ಕೆ ಪಡೆದರು. ಪರಿಸ್ಥಿತಿಯ ವಿಷಮ ಸ್ಥಿತಿಯ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಜಿಲ್ಲಾ ಸರ್ಜನ್ ಡಾ.ಕುಮಾರ್ ನಾಯಕ್ ಮಾತನಾಡಿ, ಸರಕಾರದಿಂದ ಬಂದ ಆದೇಶಕ್ಕೆ ಎಲ್ಲರೂ ಗೌರವಕೊಡಬೇಕು. ಅದು ನಮ್ಮ ಕರ್ತವ್ಯ ಇದು ನಮ್ಮ ಸ್ವಂತ ನಿರ್ಧಾರವಲ್ಲ. ಎರಡು ದಿನ ಸಮಾಧಾನವಾಗಿರಿ, ಈ ಸಂಬಂಧ ಸರಕಾರಕ್ಕೆ ಮನವಿ ಮಾಡಲಾಗಿದೆ. ಸರಕಾರ ಮನವಿಯನ್ನು ಪುಸ್ಕರಿಸಲೂಬಹುದು ಎಂದು ಧರಣಿ ನಿರತರನ್ನು ಸಮಾಧಾನ ಪಪಡಿಸಿದರು.

ರಾಜ್ಯಾಧ್ಯಕ್ಷೆ ರಾಧಾಸುಂದರೇಶ್ ಮಾತನಾಡಿ, ಕಳೆದ 20 ವರ್ಷಗಳಿಂದ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿರುವವರನ್ನು ತೆಗೆದು ಹಾಕುವುದು ನ್ಯಾಯವಲ್ಲ. ಇದನ್ನೆ ನಂಬಿ ಆ ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳ ಬಳಿ ತೆರಳಿ ನೌಕರರ ಅಳಲನ್ನು ತೋಡಿಕೊಂಡರು. ಎಸ್ಪಿ ಇದಕ್ಕೆ ಸ್ಪಂದಿಸಿ, ಜಿಲ್ಲಾಸ್ಪತ್ರೆಗೆ ಬಂದು ಸರಕಾರದ ಆದೇಶ ಪಾಲನೆ ಮಾಡಿ ಎಂದರು. ಇದಕ್ಕೆ ಆರೋಗ್ಯಾಧಿಕಾರಿಗಳು ಸ್ಪಂದಿಸಿ ನೌಕರರನ್ನು ಮತ್ತೆ ಕೆಲಸಕ್ಕೆ ಸೇರಿಸಕೊಳ್ಳುವುದಾಗಿ ಭರವಸೆ ನೀಡಿದ್ದರಿಂದ ಧರಣಿ ನಿರತ ನೌಕರರು ಧರಣಿ ಹಿಂಪಡೆದರು.

ನೌಕರರಾದ ಬಾಬು, ರುಕ್ಮಿಣಿ, ಗುರುವಮ್ಮ ಧರಣಿ ನೇತೃತ್ವ ವಹಿಸಿದ್ದರು. ಕೆಲಸದಿಂದ ವಜಾಗೊಂಡ ನೌಕರರೂ ಸೇರಿದಂತೆ ನೂರಾರು ನೌಕರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X