Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚರ್ಚೆಗೆ ಗ್ರಾಸವಾದ ಬಿಬಿಎಂಪಿಯ ಜಾಹೀರಾತು...

ಚರ್ಚೆಗೆ ಗ್ರಾಸವಾದ ಬಿಬಿಎಂಪಿಯ ಜಾಹೀರಾತು ನೀತಿ

ವಾರ್ತಾಭಾರತಿವಾರ್ತಾಭಾರತಿ2 Aug 2019 10:04 PM IST
share
ಚರ್ಚೆಗೆ ಗ್ರಾಸವಾದ ಬಿಬಿಎಂಪಿಯ ಜಾಹೀರಾತು ನೀತಿ

ಬೆಂಗಳೂರು, ಆ.2: ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗಿವ ಸ್ಕೈವಾಕ್, ಬಸ್ ನಿಲ್ದಾಣ ಹಾಗೂ ಶೌಚಾಲಯದ ಜಾಗಗಳಲ್ಲಿ ಜಾಹೀರಾತು ಹಾಕುವುದಕ್ಕೆ ಪಾಲಿಕೆ ಅನುಮತಿ ನೀಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಜಾಹೀರಾತು ನೀತಿಗೆ ಸಂಬಂಧಿಸಿದಂತೆ ಬಿಬಿಎಂಪಿಯು 2018ರಲ್ಲಿ ರಚಿಸಿರುವ ಬೈಲಾದ ಬಗ್ಗೆಯೇ ಈಗ ದ್ವಂದ್ವಗಳು ಮೂಡಿರುವುದರಿಂದ ನಗರಾಭಿವೃದ್ಧಿ ಇಲಾಖೆ ಜಾಹೀರಾತು ನಿಯಮ 2019ರ ಕರಡನ್ನು ವಿರೋಧಿಸಿ ನಿರ್ಣಯ ತೆಗೆದುಕೊಳ್ಳುವುದಕ್ಕೆ ಪಾಲಿಕೆಯಲ್ಲಿ ಒಮ್ಮತ ಮೂಡುತ್ತಿಲ್ಲ. ಜಾಹೀರಾತಿನ ಬಗ್ಗೆ ಚರ್ಚೆ ಮಾಡುವುದಕ್ಕೆ ಪಾಲಿಕೆ ಜು.29ಕ್ಕೆ ಕರೆದಿದ್ದ ವಿಶೇಷ ಸಭೆಯಲ್ಲಿ ಆಡಳಿತ ಪಕ್ಷದ ನಾಯಕರೂ ಸೇರಿದಂತೆ ಕೆಲವು ನಾಯಕರು ಜಾಹೀರಾತಿಗೆ ಸಂಬಂಧಿಸಿದಂತೆ ಸರಕಾರದ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದರು.

ಈ ಬಗ್ಗೆ ಕ್ರಿಯಾಲೋಪದ ಪ್ರಶ್ನೆ ಎತ್ತಿದ್ದ ವಿರೋಧ ಪಕ್ಷದ ನಾಯಕರು ಕರ್ನಾಟಕ ಪೌರ ಆಡಳಿತ ಕಾಯ್ದೆ-1976ರ ಕಲಂ 425 ಪ್ರಕಾರ ಬಿಬಿಎಂಪಿ ಬೈಲಾ ರಚಿಸಬಹುದು. ಇದರಲ್ಲಿ ಲೋಪವಾದರೆ ಅಥವಾ ಬೈಲಾ ರೂಪಿಸುವಲ್ಲಿ ವಿಫಲವಾದರೆ ಸರಕಾರ ಕೆಎಂಸಿ ಕಾಯ್ದೆಯ ಕಲಂ 427ರ ಪ್ರಕಾರ ಮಧ್ಯ ಪ್ರವೇಶಿಸಿ, ಹೊಸ ನೀತಿಯನ್ನು ಜಾರಿ ಮಾಡುವುದಕ್ಕೆ ಅವಕಾಶವಿದೆ.

ಆದರೆ, ಈ ವಿಷಯದಲ್ಲಿ ಪಾಲಿಕೆಯಿಂದ ಯಾವುದೇ ಲೋಪವಾಗಿಲ್ಲ. ಪಾಲಿಕೆ 2018ರ ಆ.28ರಂದು ಅನುಮೋದನೆ ನೀಡಿರುವ ಹೊರಾಂಗಣ ಸೈನೇಜ್ ಮತ್ತು ಸಾರ್ವಜನಿಕ ಸಂದೇಶ ನೀತಿ ಹಾಗೂ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ- 2018ರ ಬಗ್ಗೆ ಸರಕಾರದ ಗಮನಕ್ಕೆ ತರಲಾಗಿದೆ.

ಆದರೆ, ಈಗ ನಗರಾಭಿವೃದ್ಧಿ ಇಲಾಖೆ ಜಾಹೀರಾತು ನಿಯಮ 2019ರ ಕರಡು ಅಧಿಸೂಚನೆ ತಂದಿರುವುದು ಹಿಂದಿನ ಉದ್ದೇಶವೇನು ಎಂದು ಪಾಲಿಕೆಯ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ, ವಿರೋಧ ಪಕ್ಷದ ಸದಸ್ಯರು ಜಾಹೀರಾತಿನ ಬಗ್ಗೆ ಚರ್ಚೆ ಮುಗಿಯುವ ಮುನ್ನವೇ, ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿ ಜಾಹೀರಾತು ನಿಯಮ- 2019ರ ಕರಡಿನ ಹಿಂದೆ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಅವರ ಕೈವಾಡವಿದೆ. ಇದರಲ್ಲಿ ಭ್ರಷ್ಟಾಚಾರ ನಡೆದಿದ್ದು, ಚುನಾವಣೆಗೆ ಹಣ ಸಂಗ್ರಹಿಸುವ ಉದ್ದೇಶದಿಂದ ಜಾಹೀರಾತಿಗೆ ಅನುವು ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ಸಭಾತ್ಯಾಗ ಮಾಡಿದ್ದು, ಚರ್ಚೆಗೆ ಗ್ರಾಸವಾಗಿದೆ.

ಅದೇ ರೀತಿ ಜು.30ರಂದು ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲೂ ನಗರಾಭಿವೃದ್ಧಿ ಇಲಾಖೆಯ ಕರಡಿನ ಬಗ್ಗೆ ನಿರ್ಣಯ ತೆಗೆದುಕೊಳ್ಳದೆ ಇರುವುದಕ್ಕೆ ಆಡಳಿತ ಪಕ್ಷದ ಕೆಲವು ಸದಸ್ಯರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಹಿನ್ನೆಲೆಯಿಂದ ನೋಡಿದರೆ ಜಾಹೀರಾತಿಗೆ ಅನುವು ಮಾಡಿಕೊಡುವುದಕ್ಕೆ ಸರ್ವ ಪಕ್ಷಗಳ ಕೆಲವು ಸದಸ್ಯರು ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ.

ಆ.6ಕ್ಕೆ ಸಭೆ ಸಾಧ್ಯತೆ: ಜು.29ಕ್ಕೆ ಜಾಹೀರಾತಿಗೆ ಸಂಬಂಧಿಸಿದಂತೆ ಬಿಬಿಎಂಪಿಯು ವಿಶೇಷ ಸಭೆ ನಡೆಸಿತ್ತು. ಈ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳುವಲ್ಲಿ ವಿಫಲವಾಗಿರುವುದರಿಂದ ಆ.6 ಅಥವಾ 7ಕ್ಕೆ ಮತ್ತೊಮ್ಮೆ ಸಭೆ ನಡೆಯುವ ಸಾಧ್ಯತೆ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X