ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ಹರಿಯುತ್ತಿದ್ದ ನೀರು ಸ್ಥಗಿತ: ರೈತರ ಆಕ್ರೋಶ
![ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ಹರಿಯುತ್ತಿದ್ದ ನೀರು ಸ್ಥಗಿತ: ರೈತರ ಆಕ್ರೋಶ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ಹರಿಯುತ್ತಿದ್ದ ನೀರು ಸ್ಥಗಿತ: ರೈತರ ಆಕ್ರೋಶ](https://www.varthabharati.in/sites/default/files/images/articles/2019/08/2/203520-1564768560.jpg)
ಸಾಂದರ್ಭಿಕ ಚಿತ್ರ
ಮಂಡ್ಯ, ಆ.2: ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಜಿಲ್ಲೆಯ ನಾಲೆಗಳಿಗೆ ಬಿಡಲಾಗುತ್ತಿದ್ದ ನೀರು ಇಂದು ಸಂಜೆಯಿಂದ ಸ್ಥಗಿತಗೊಂಡಿದೆ.
ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕಳೆದ 15 ದಿನದಿಂದ ನಾಲೆಗಳಿಗೆ ನೀರು ಬಿಡಲಾಗುತ್ತಿತ್ತು. ಆದರೆ ಇಂದು ಸಂಜೆ ನೀರು ಸ್ಥಗಿತಗೊಂಡಿದ್ದು, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ನೀರು ಬಿಟ್ಟು ಮಂಡ್ಯ ಜಿಲ್ಲೆಯ ನಾಲೆಗಳಿಗೆ ನೀರು ಸ್ಥಗಿತ ಮಾಡಿದ್ದು ರೈತರ ಆಕ್ರೋಶಕ್ಕೆ ಗುರಿಯಾಗಿದ್ದು, ಕೂಡಲೇ ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ಸ್ಥಗಿತಗೊಳಿಸಬೇಕು. ಮೊದಲು ಮಂಡ್ಯ ರೈತರ ಹಿತಕ್ಕೆ ರಾಜ್ಯ, ಕೇಂದ್ರ ಸರ್ಕಾರಗಳು ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.
Next Story