Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೇತುವೆಗಳ ಸುತ್ತ ರಕ್ಷಣಾತ್ಮಕ ತಡೆಗೋಡೆಗೆ...

ಸೇತುವೆಗಳ ಸುತ್ತ ರಕ್ಷಣಾತ್ಮಕ ತಡೆಗೋಡೆಗೆ ಶಾಸಕ ಯು.ಟಿ. ಖಾದರ್ ಒತ್ತಾಯ

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ3 Aug 2019 6:45 PM IST
share
ಸೇತುವೆಗಳ ಸುತ್ತ ರಕ್ಷಣಾತ್ಮಕ ತಡೆಗೋಡೆಗೆ ಶಾಸಕ ಯು.ಟಿ. ಖಾದರ್ ಒತ್ತಾಯ

ಮಂಗಳೂರು, ಆ.3: ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಉಳ್ಳಾಲದ ನೇತ್ರಾವತಿ ಸೇತುವೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಯಲ್ಲಿರುವ ನದಿಗಳ ಸೇತುವೆಗಳ ಸುತ್ತಮುತ್ತ ರಕ್ಷಣಾತ್ಮಕ ಪಾರದರ್ಶಕ ತಡೆಗೋಡೆ ಅಳವಡಿಸುವಂತೆ ಒತ್ತಾಯಿಸಿ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಿಗೆ ಪತ್ರ ಬರೆದಿರುವುದಾಗಿ ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ.

ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಾಕೃತಿಕ ಸೌಂದರ್ಯದಿಂದ ಕೂಡಿದ ಜಿಲ್ಲೆಯ ಅನೇಕ ಸೇತುವೆಗಳು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಒಳಪಡುತ್ತಿದ್ದು, ಅವುಗಳಿಗೆ ಸಮರ್ಪಕ ರಕ್ಷಣಾ ವ್ಯವಸ್ಥೆಯಿಲ್ಲ. ಹಾಗಾಗಿ ಇಲ್ಲಿ ನದಿ, ಸಮುದ್ರಕ್ಕೆ ಹಾರಿ ಆತ್ಮಹತ್ಯೆಯಂತಹ ಘಟನೆಗಳು ನಡೆಯುತ್ತಿವೆ. ಈ ಸೇತುವೆಗಳ ಸುತ್ತಮುತ್ತ ರಕ್ಷಣಾತ್ಮಕ ನೆಲೆಯಲ್ಲಿ ಫೈಬರ್‌ನ ಪಾರದರ್ಶಕ ಗ್ಲಾಸ್‌ಗಳನ್ನು ಅಳವಡಿಸಲು ಮುಂದಾಗಬೇಕು. ಅಲ್ಲದೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಸೂಚನೆ ನೀಡಬೇಕು. ಪಾರದರ್ಶಕ ತಡೆಗೋಡೆಯಿಂದ ಹೆದ್ದಾರಿಯಲ್ಲಿ ಸಂಚರಿಸುವವರಿಗೆ ಸೇತುವೆಯ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ಸಾಧ್ಯವಾಗಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ ಎಂದು ಅವರು ಹೇಳಿದರು.

ಅಧಿಕಾರಿಗಳ ವರ್ಗಾವಣೆ ಬೇಡ

ಅಧಿಕಾರ ವಹಿಸಿಕೊಂಡ ಕೂಡಲೇ ಮುಖ್ಯಮಂತ್ರಿಗಳು ಅಧಿಕಾರಿಗಳ ವರ್ಗಾವಣೆಗೆ ಮುಂದಾಗಿದ್ದಾರೆ. ಹಿಂದಿನ ಸರ್ಕಾರ ನಿಯುಕ್ತಿಗೊಳಿಸಿದ ಅಧಿಕಾರಿಗಳನ್ನೂ ಎತ್ತಂಗಡಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ದಕ್ಷತೆಯಿಂದ ಕೆಲಸ ಮಾಡುವ ಅಧಿಕಾರಿಗಳ ವರ್ಗಾವಣೆ ಬೇಡ ಎಂದು ಅವರು ಆಗ್ರಹಿಸಿದರು.

ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಕನಿಷ್ಠ ಒಂದು ವರ್ಷವರೆಗೆ ಯಾವುದೇ ವರ್ಗಾವಣೆ ಮಾಡಿರಲಿಲ್ಲ. ಆದರೆ ಈಗ ಸಚಿವ ಸಂಪುಟ ವಿಸ್ತರಣೆಯಾಗದೆ, ಗೃಹ ಸಚಿವರ ನೇಮಕವಾಗುವ ಮೊದಲೇ ತರಾತುರಿಯಲ್ಲಿ ಉತ್ತಮ ಅಧಿಕಾರಿಗಳನ್ನೂ ಮುಖ್ಯಮಂತ್ರಿಗಳು ವರ್ಗಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ವರ್ಗಾಯಿಸದಂತೆ ಕೋರಿ ಮುಖ್ಯಂತ್ರಿಗೆ ಪತ್ರ ಬರೆಯಲಾಗಿದೆ ಎಂದು ಯು.ಟಿ.ಖಾದರ್ ಹೇಳಿದರು.

ದ.ಕ.ಜಿಲ್ಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್‌ನ್ನು ವರ್ಗಾಯಿಸಲಾಗಿದೆ. ಇನ್ನು ಜಿಲ್ಲಾಧಿಕಾರಿ, ಎಸ್ಪಿ, ಜಿ.ಪಂ. ಸಿಇಒ ಪ್ರಾಮಾಣಿಕ ಅಧಿಕಾರಿಗಳಾಗಿದ್ದಾರೆ. ಸ್ವಹಿತಕ್ಕಾಗಿ ಅಧಿಕಾರಿಗಳನ್ನು ವರ್ಗಾಯಿಸದೆ ಕರ್ತವ್ಯದಲ್ಲಿ ಮುಂದುವರಿಯಲು ಅವಕಾಶ ಮಾಡಬೇಕು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಅತಿವೃಷ್ಟಿಯನ್ನು ಕೇಳೋರಿಲ್ಲ

ರಾಜ್ಯದ ಉತ್ತರ ಕರ್ನಾಟಕ ಅತಿವೃಷ್ಟಿಗೆ ನಲುಗುತ್ತಿದೆ. ಆದರೆ ಸಚಿವರಿಲ್ಲದೆ ಅಲ್ಲಿನ ಜನತೆಯ ಗೋಳನು ಕೇಳುವವರಿಲ್ಲದಂತಾಗಿದೆ. ಸದನದಲ್ಲಿ ವಿಶ್ವಾಸಮತ ಯಾಚನೆಗೆ ತರಾತುರಿ ಮಾಡಿದ ಯಡಿಯೂರಪ್ಪ ಅವರು ಈಗ ಮುಖ್ಯಮಂತ್ರಿಯಾಗಿ ವಾರ ಕಳೆದರೂ ಸಂಪುಟ ವಿಸ್ತರಣೆ ಬಗ್ಗೆ ಮೌನವಾಗಿದ್ದಾರೆ. ಮಳೆಯಿಂದ ಡ್ಯಾಂ ರಕ್ಷಣೆಗಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಹೆಚ್ಚುವರಿ ನೀರನ್ನು ಬಿಡಲಾಗುತ್ತಿದೆ. ಇದರಿಂದಾಗಿ ಉತ್ತರ ಕರ್ನಾಟಕದಲ್ಲಿ ಪ್ರವಾಹದ ಪರಿಸ್ಥಿತಿ ತಲೆದೋರಿದೆ. ಆದರೆ ಅಲ್ಲಿನವರ ಕಷ್ಟವನ್ನು ವಿಚಾರಿಸುವವರೇ ಇಲ್ಲವಾಗಿದೆ ಎಂದು ಖಾದರ್ ಆರೋಪಿಸಿದರು.

ಗೋಷ್ಠಿಯಲ್ಲಿ ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಸದಾಶಿವ ಉಳ್ಳಾಲ್, ಈಶ್ವರ ಉಳ್ಳಾಲ್, ಪ್ರಥ್ವಿರಾಜ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X