Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐಎಂಎ ವಂಚನೆ ಪ್ರಕರಣ: ಮತ್ತೆ ವಿಚಾರಣೆಗೆ...

ಐಎಂಎ ವಂಚನೆ ಪ್ರಕರಣ: ಮತ್ತೆ ವಿಚಾರಣೆಗೆ ಹಾಜರಾದ ಪೊಲೀಸ್ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ3 Aug 2019 8:13 PM IST
share
ಐಎಂಎ ವಂಚನೆ ಪ್ರಕರಣ: ಮತ್ತೆ ವಿಚಾರಣೆಗೆ ಹಾಜರಾದ ಪೊಲೀಸ್ ಅಧಿಕಾರಿ

ಬೆಂಗಳೂರು, ಆ.3: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಸರಕಾರಕ್ಕೆ ಐಎಂಎ ಸಂಸ್ಥೆಯ ಪರವಾಗಿ ವರದಿ ಸಲ್ಲಿಸಿದ್ದ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಅವರನ್ನು ಎರಡನೆ ದಿನವೂ (ಶನಿವಾರ) ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿದೆ.

ನಗರದ ಪೂರ್ವ ವಿಭಾಗದ ಡಿಸಿಪಿ ಆಗಿದ್ದ ಸಂದರ್ಭದಲ್ಲಿ ಅಜಯ್ ಹಿಲೋರಿ ಅವರು ಐಎಂಎ ಸಮೂಹ ಸಂಸ್ಥೆಯ ಪರವಾಗಿ ಸರಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಸಂಬಂಧ ಅಧಿಕಾರಿಗಳು ಶುಕ್ರವಾರ ಹಿಲೋರಿ ಅವರನ್ನು ತೀವ್ರ ವಿಚಾರಣೆ ನಡೆಸಿ ಮಹತ್ವದ ಮಾಹಿತಿ ಕಲೆ ಹಾಕಿದ್ದರು. ಆದರೆ, ಇನ್ನಷ್ಟು ಮಾಹಿತಿ ಸಂಗ್ರಹಿಸಲು ಶನಿವಾರ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಐಎಂಎ ಹಣಕಾಸು ವ್ಯವಹಾರದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಆರ್‌ಬಿಐ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿತ್ತು. ಆಗಿನ ಡಿಸಿಪಿಯಾಗಿದ್ದ ಅಜಯ್ ಹಿಲೋರಿ ಅವರು ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ವಿರುದ್ಧ ಯಾವುದೇ ದೂರುಗಳು ದಾಖಲಾಗಿಲ್ಲ. ಆತನ ವಿರುದ್ಧ ರಾಜ್ಯ ಹಣಕಾಸು ಸಂಸ್ಥೆಗಳ ಠೇವಣಿದಾರರ ಸುರಕ್ಷತಾ ಕಾಯ್ದೆಯಡಿ ಕ್ರಮ ಜರುಗಿಸಲು ಅವಕಾಶವಿಲ್ಲ ಎಂದು ಸರಕಾರಕ್ಕೆ ವರದಿ ಸಲ್ಲಿಸಿದ್ದರು ಎಂದು ಹೇಳಲಾಗುತ್ತಿದೆ.

ಇದೇ ಪ್ರಕರಣದಲ್ಲಿ ಐಎಂಎ ಸಂಸ್ಥೆಯಿಂದ ಲಂಚ ಪಡೆದ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್, ಉಪವಿಭಾಗಾಧಿಕಾರಿ ನಾಗರಾಜು ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್ ಅವರನ್ನು ಸಿಟ್ ಬಂಧಿಸಿತ್ತು. ಇದೀಗ ಅಜಯ್ ಹಿಲೋರಿ ಅವರನ್ನು ವಿಚಾರಣೆ ನಡೆಸಿ, ತನಿಖೆ ಚುರುಕುಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X