Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಭಾವ ಜಂಗಮ

ಭಾವ ಜಂಗಮ

ಬಸವರಾಜು ದೇಸಿಬಸವರಾಜು ದೇಸಿ3 Aug 2019 11:56 PM IST
share
ಭಾವ ಜಂಗಮ

ಈಕೆ ಬಂಜಾರ ಸಮುದಾಯದ ತಾಯಿ. ಬದುಕು ಜಂಗಮ; ಅಸುರಕ್ಷತೆ ಅನಿರೀಕ್ಷಿತಗಳ ಸಂಗಮ. ಒಡವೆಗಳನ್ನು ಮಾಡುವುದು ಮಾರುವುದು ಕಾಯಕ. ಇವತ್ತಿಗೆ ಅಲ್ಲ ಈ ಗಳಿಗೆಗೆ ಸ್ತ್ರೀಯರ ಉಡುಪು ಮಾರುವ ಮಳಿಗೆಯ ಮುಂದೆ ತನ್ನ ಅಂಗಡಿ. ಉಡುಪು ಖರೀದಿಸಿ ಹೊರಬಂದವರು ಅದಕ್ಕೆ ತಕ್ಕ ಕೈಬಳೆ, ಸರಕ್ಕಾಗಿ ತನ್ನಲ್ಲಿ ಬರಬಹುದೆಂಬ ಅಂದಾಜು, ಆಶೆ.

ಕೊಳ್ಳುವ ಗಿರಾಕಿ ಬಂದಾಗಿದೆ. ‘ಬರಬಾರದ ಹೊತ್ತಲ್ಲಿ’ ಎನ್ನುವ ಸ್ಥಿತಿಯಲ್ಲಿ ತಾನಿಲ್ಲ. ಅದೇ ಸರಿಯಾಗಿ ಕೈಗೂಸು ಕಕ್ಕ ಮಾಡಿಕೊಂಡಿದೆ. ಸಂದಿಗ್ಧ. ದುರದೃಷ್ಟಕ್ಕೆ ಸೆರಗೂ ಜಾರಿದೆ. ಹಾಲ್ಕುಡಿವ ಕಂದ. ಹಾಲಿನಿಂದ ಎದೆಯೂ ತುಂಬಿದೆ. ಅದು ತನ್ನ ಗಲ್ಲದ ಪೆಟ್ಟಿಗೆಯೂ ಹೌದು, ಚಿಲ್ಲರೆ ಕಾಸಿನಿಂದ ತುರುಕಿದ ನೋಟಿನಿಂದ ಮತ್ತೂ ಉಬ್ಬಿದೆ. ಮುಚ್ಚಿಕೊಳ್ಳುವ ಅನಿವಾರ್ಯತೆ ಇದೆ, ಇದು ಮಾನ ಮುಚ್ಚಿಕೊಳ್ಳುವ ಸಲುವಾಗಿ ಅಲ್ಲದಿದ್ದರೂ ಅಲ್ಲಿರುವ ಆ ದಿನದ ಸಂಪಾದನೆಯು ಪೊಲೀಸರ, ಕಳ್ಳಕಾಕರ ಕಣ್ಣಿಂದ ತಪ್ಪಿಸಿಕೊಳ್ಳಲು. ಆದರೆ ಕೈಗಳಿಗೆ ಬಿಡುವಿಲ್ಲ. ಇವುಗಳ ನಡುವೆಯೇ ತನ್ನನ್ನು, ತನ್ನ ಅಂಗಡಿಯನ್ನು ಎತ್ತಿಸಿ ಓಡಿಸಲು ಬರುವ ಪೊಲೀಸನನ್ನು ತಡಕಾಡುತ್ತಿವೆ ಆಕೆಯ ಕಂಗಳು.

ಇದಾವುದರ ಪರಿವೇ ಇಲ್ಲದೆ ಕಿವಿಗೆ ನೆಚ್ಚಿನ ಸಂಗೀತ ತುಂಬಿಸಿಕೊಂಡು ಬೇಕಾದನ್ನು ಅರಸುತ್ತಿರುವ ಗಿರಾಕಿಯದೇ ಬೇರೆ ಲೋಕ. ವಿಸರ್ಜನೆಯಿಂದ ಸಿಕ್ಕ ಆರಾಮ ಭಾವ ಕೂಸಿನ ಮೊಗದಲ್ಲಿ ನಗೆಯನ್ನು ಮೂಡಿಸಿದೆ. ಅದರ ಕಣ್ಣ ಕಾಂತಿಯು ಭವಿಷ್ಯದ ಸಂಕೇತದಂತಿದೆ!

share
ಬಸವರಾಜು ದೇಸಿ
ಬಸವರಾಜು ದೇಸಿ
Next Story
X