Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೀರಶೈವ ಲಿಂಗಾಯತ ಧರ್ಮದಲ್ಲಿ ವೈಜ್ಞಾನಿಕ...

ವೀರಶೈವ ಲಿಂಗಾಯತ ಧರ್ಮದಲ್ಲಿ ವೈಜ್ಞಾನಿಕ ಆಚರಣೆಯಿದೆ: ಮಹಾಂತಲಿಂಗ ಶಿವಚಾರ್ಯ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ4 Aug 2019 8:29 PM IST
share
ವೀರಶೈವ ಲಿಂಗಾಯತ ಧರ್ಮದಲ್ಲಿ ವೈಜ್ಞಾನಿಕ ಆಚರಣೆಯಿದೆ: ಮಹಾಂತಲಿಂಗ ಶಿವಚಾರ್ಯ ಸ್ವಾಮೀಜಿ

ಬೆಂಗಳೂರು, ಆ.4: ವೀರಶೈವ ಲಿಂಗಾಯತ ಧರ್ಮದಲ್ಲಿ ವೈಜ್ಞಾನಿಕ ಆಚರಣೆ ಯಿದೆ ಎಂದು ವಿಭೂತಿ ಮಠದ ಮಹಾಂತಲಿಂಗ ಶಿವಚಾರ್ಯ ಸ್ವಾಮೀಜಿ ಅಭಿಪ್ರಾ ಯಪಟ್ಟರು.

ರವಿವಾರ ವಿಜಯನಗರದ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸೆಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಗಳಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದ ಅವರು, ಬಡವ, ಬಲ್ಲಿದ, ಜಾತಿ, ಮತ, ಬೇಧವೆನ್ನದೆ ಎಲ್ಲವನ್ನು ಒಪ್ಪಿಕೊಂಡಿರುವ ನಮ್ಮ ಸಮಾಜ ಈ ದೇಶಕ್ಕೆ ಒಳ್ಳೆಯ ಕೊಡುಗೆ ನೀಡಿದೆ ಎಂದು ಹೇಳಿದರು.

ಪೋಷಕರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಧಾರ್ಮಿಕ ಸಂಸ್ಕಾರ, ಸಂಸ್ಕೃತಿ ಕಲಿಸುವುದು ಅತ್ಯವಶ್ಯಕ. ಇದರಿಂದ ಧರ್ಮ ಉಳಿಯಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡುತ್ತ ನಮ್ಮ ಧರ್ಮ, ಸಂಸ್ಕೃತಿ ಮರೆಯುತ್ತಿರುವುದು ವಿಷಾದನೀಯ. ನಾವು ಧರ್ಮವನ್ನು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂಬ ಹಿರಿಯ ನಾಣ್ಣುಡಿ ಸವರ್ಣೀಯವಾದುದು ಎಂದು ಹೇಳಿದರು.

ಮಕ್ಕಳು ಎಷ್ಟು ಅಂಕಗಳಿಸಿದ್ದಾರೆ ಎಂಬುದು ಮುಖ್ಯವಲ್ಲ. ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಬಹಳ ಮುಖ್ಯ. ಜೀವನದಲ್ಲಿ ಬರುವ ಎಲ್ಲಾ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ ಶಕ್ತಿಯನ್ನು ರೂಢಿಸಿಕೊಳ್ಳಿ. ಇದರಿಂದ ಜೀವನದಲ್ಲಿ ಸಾಧನೆ ಮಾಡಲು ಸಹಕಾರಿಯಾಗಲಿದೆ. ಅಲ್ಲದೆ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆ ಅನಾವರಣಗೊಳ್ಳಲು ಸೂಕ್ತ ವೇದಿಕೆ ರೂಪಿಸುವುದು ಅವಶ್ಯಕ ಎಂದು ಹೇಳಿದರು.

ಸಕಲ ಜೀವರಾಶಿಗಳಿಗೆ ಲೇಸು ಬಯಸುವಂತಹ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಜೀವನದಲ್ಲಿ ಯಶಸ್ಸು ಕಾಣುವುದರ ಜೊತೆಗೆ ಬಸವಾದಿ ಚರಣಗಳ ವಚನಗಳನ್ನು ಅಧ್ಯಯನ ಮಾಡಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಸಮಾರಂಭದಲ್ಲಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಂ.ತಿಪ್ಪಣ್ಣ, ವೀರಶೈವ ವಿದ್ಯಾಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಪರಮಶಿವಯ್ಯ, ಅಖಿಲ ಭಾರತ ವೀರಶೈವ ಮಹಾಸಭಾ ನಗರ ಜಿಲ್ಲಾ ಘಟಕದ ಅಧ್ಯಕ್ಷ ಗುರುಸ್ವಾಮಿ, ನಟರಾಜ್ ಸಾಗರನಹಳ್ಳಿ ಹಾಗೂ ಜಯಲಿಂಗಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X