Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಸ್ಥೆ ಕಟ್ಟಲು ಶ್ರಮಜೀವಿ, ಛಲವಂತ...

ಸಂಸ್ಥೆ ಕಟ್ಟಲು ಶ್ರಮಜೀವಿ, ಛಲವಂತ ಕನಸುಗಾರ ಬೇಕು: ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ4 Aug 2019 9:15 PM IST
share
ಸಂಸ್ಥೆ ಕಟ್ಟಲು ಶ್ರಮಜೀವಿ, ಛಲವಂತ ಕನಸುಗಾರ ಬೇಕು: ಎಚ್.ಕೆ.ಪಾಟೀಲ್

ಮಣಿಪಾಲ, ಆ.4: ಯಾವುದೇ ಸಂಸ್ಥೆಯೊಂದನ್ನು ಯಶಸ್ವಿಯಾಗಿ ಕಟ್ಟಿ ಬೆಳಸಲು ಶ್ರಮಜೀವಿ ಹಾಗೂ ಛಲವಂತನಾದ ಕನಸುಗಾರನೊಬ್ಬ ಬೇಕು. ಆತನಿಗೆ ಪ್ರಾಮಾಣಿಕ ಹಾಗೂ ದಕ್ಷವಾದ ತಂಡವೊಂದು ಬೆನ್ನಿಗಿರಬೇಕು. ಮಣಿಪಾಲದ ಪೈಗಳಿಗೆ ಇವೆಲ್ಲವೂ ಸಿಕ್ಕಿದೆ ಎಂದು ಮಾಜಿ ಸಚಿವ ಹಾಗೂ ಹಾಲಿ ಗದಗ ಶಾಸಕ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಮಣಿಪಾಲ ಕಸ್ತೂರ್‌ಬಾ ಆಸ್ಪತ್ರೆಯ ಯುರಾಲಜಿ ಹಾಗೂ ರೀನಲ್ ಟ್ರಾನ್ಸ್‌ಪ್ಲಾಂಟೇಷನ್ ವಿಭಾಗದ ವತಿಯಿಂದ ಪ್ರಾರಂಭಗೊಂಡ ಸುಧಾರಿತ ಯೂರೋಡೈನಾಮಿಕ್ ಪ್ರಯೋಗಾಲಯವನ್ನು ರವಿವಾರ ಮಣಿಪಾಲದ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೇಶವು ಮಣಿಪಾಲದ ಬಗ್ಗೆ ಹೆಮ್ಮೆ ಪಡುತ್ತದೆ. ವಿಶ್ವದಲ್ಲಿ 500ರೊಳಗೆ ಸ್ಥಾನ ಪಡೆದಿರುವ ದೇಶದ ಏಕೈಕ ಖಾಸಗಿ ವಿಶ್ವವಿದ್ಯಾಲಯ ಮಾಹೆ ಆಗಿದೆ. ಶಿಕ್ಷಣ, ಆರೋಗ್ಯ ಮತ್ತು ಹಣಕಾಸು ಕ್ಷೇತ್ರದಲ್ಲಿ ಮಣಿಪಾಲ ಸಮೂಹ ಉತ್ತಮ ಹಾಗೂ ಮಾದರಿ ಸಂಸ್ಥೆಯಾಗಿ ಅಭಿವೃದ್ಧಿಹೊಂದಿದೆ. ಆರೋಗ್ಯ ಮತ್ತು ಗುಣಮಟ್ಟದ ಚಿಕಿತ್ಸೆಯಲ್ಲಿ ಮಣಿಪಾಲ ತನ್ನ ಶ್ರೇಷ್ಠತೆಗೆ ಹೆಸರುವಾಸಿಯಾಗಿದೆ ಎಂದರು.

ಮಾಹೆ ಕುಲಪತಿ ಡಾ. ಎಚ್. ವಿನೋದ್ ಭಟ್ ಮಾತನಾಡಿ ಪಾಟೀಲ್ ಕುಟುಂಬದಿಂದಾಗಿ ಉತ್ತರ ಕರ್ನಾಟಕದ ಗದಗ, ಬೇಟಗೇರಿ, ಹುಲಿಕೋಟೆ ಪ್ರದೇಶಗಳು ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಭಾರೀ ಪ್ರಗತಿಯನ್ನು ಸಾಧಿಸಿದೆ ಎಂದರಲ್ಲದೇ, ಭವಿಷ್ಯದಲ್ಲಿ ಮಾಹೆಯನ್ನು ವಿಶ್ವ ಅಗ್ರ 200 ವಿವಿಗಳಲ್ಲಿ ಒಂದಾಗಿ ಮಾಡುವುು ನಮ್ಮ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಕೆಎಂಸಿಯ ಮೂತ್ರಶಾಸ್ತ್ರ ಮತ್ತು ಮೂತ್ರಪಿಂಡ ಕಸಿ ವಿಭಾಗ ದೇಶದಲ್ಲೇ ಅಗ್ರಗಣ್ಯ ವಿಭಾಗವಾಗಿದೆ. ಜೀವನಶೈಲಿ ಕಾಯಿಲೆಗಳಿಂದ ಪ್ರಭಾವಿತವಾಗುವ ಪ್ರಮುಖ ಅಂಗವಾದ ಮೂತ್ರಪಿಂಡ(ಕಿಡ್ನಿ)ಕ್ಕೆ ಸಂಬಂಧಪಟ್ಟ ಕಾಯಿಲೆ ಮತ್ತು ಚಿಕಿತ್ಸೆ ವಿಧಾನವನ್ನು ಯುರೋಡೈನಮಿಕ್ ಪ್ರಯೋಗಾಲಯದ ಸಹಾಯದಿಂದ ಕಂಡುಕೊಳ್ಳಬಹುದು ಎಂದು ಹೇಳಿದರು.

ಮಾಹೆಯ ಪ್ರೊ ವೈಸ್‌ಚಾನ್ಸಲರ್ ಡಾ. ಪೂರ್ಣಿಮಾ ಬಿ.ಬಾಳಿಗಾ ಯುರೋ ಡೈನಾಮಿಕ್ಸ್‌ನ ಪ್ರಮಾಣಿತ ಕಾರ್ಯ ವಿಧಾನ ಸೂಚಿ ಬಿಡುಗಡೆ ಗೊಳಿಸಿದರು.

ಕೆಎಂಸಿಯ ಡೀನ್ ಡಾ. ಶರತ್ ಕೆ. ರಾವ್ ಅತಿಥಿಗಳನ್ನು ಸ್ವಾಗತಿಸಿದರೆ, ಕೆಎಂಸಿ ಯುರಾಲಜಿ ವಿಭಾಗ ಮುಖ್ಯಸ್ಥ ಡಾ.ಅರುಣ್ ಚಾವ್ಲ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ ಶೆಟ್ಟಿ ವಂದಿಸಿದರು. ಡಾ.ಅಕ್ಷಯ್ ಕೃಪಲಾನಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X