Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಕರ್ನಾಟಕದ ರೈತ ಚಳುವಳಿಗಳು’ ಪುಸ್ತಕ...

‘ಕರ್ನಾಟಕದ ರೈತ ಚಳುವಳಿಗಳು’ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ4 Aug 2019 9:34 PM IST
share

ಮಂಗಳೂರು, ಆ.4: ಹಿರಿಯ ಕಾರ್ಮಿಕ ಮುಖಂಡ ಕೆ.ಆರ್.ಶ್ರೀಯಾನ್ ರಚಿಸಿದ ‘ಕರ್ನಾಟಕದ ರೈತ ಚಳುವಳಿಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮವು ರವಿವಾರ ನಗರದ ಸರಕಾರಿ ನೌಕರರ ಸಂಘದ ಜರುಗಿತು.

ಕರ್ನಾಟಕ ಪ್ರಾಂತ ರೈತ ಸಂಘದ ದ.ಕ.ಜಿಲ್ಲಾ ಸಮಿತಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಕೃತಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಜನಸಾಮಾನ್ಯರ ಕಷ್ಟ ಕಾರ್ಪಣ್ಯವನ್ನು ಪರಿಹರಿಸುವಲ್ಲಿ ರೈತ ಚಳುವಳಿ ಬೀರಿದ ಪರಿಣಾಮವನ್ನು ಇಂದಿನ ಯುವ ಸಮುದಾಯಕ್ಕೆ ತಿಳಿಸಿಕೊಡುವ ಅಗತ್ಯವಿದೆ ಎಂದರು.

ಹಿಂದೆ ಸಾಮಾಜಿಕ ಬದಲಾವಣೆಯು ಸುಲಭವಾಗಿರಲಿಲ್ಲ. ಅನೇಕ ಹೋರಾಟಗಳು ನಡೆದ ಬಳಿಕ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗತೊಡಗಿದವು. ಭೂ ಸುಧಾರಣೆ ಕಾಯ್ದೆಯು ಕೆಳ ವರ್ಗದವರಿಗೆ ಪ್ರಯೋಜನವಾಗುವುದರ ಜತೆಗೆ ಜಿಲ್ಲೆಯ ಜನರು ಅಕ್ಷರ ಜ್ಞಾನಿಗಳಾಗಳು ಸಾಧ್ಯವಾಯಿತು. ಹೊಸ ಪೀಳಿಗೆಗೆ ಇದರ ಅರಿವಿಲ್ಲ. ಇದ್ದಿದ್ದರೆ ಜಿಲ್ಲೆಯ ಸಾಮಾಜಿಕ ಪರಿಸ್ಥಿತಿ ಇನ್ನೂ ಗಟ್ಟಿಯಾಗಿ ನೆಲೆಗೊಳ್ಳಲು ಸಾಧ್ಯವಾಗುತ್ತಿತ್ತು ಎಂದು ರಮಾನಾಥ ರೈ ಹೇಳಿದರು.

ಕೃತಿಯನ್ನು ಪರಿಚಯಿಸಿದ ಚಿಂತಕ ಜಿ.ರಾಜಶೇಖರ ಸ್ವಾತಂತ್ರಪೂರ್ವದಿಂದ ಇಲ್ಲಿಯವರೆಗಿನ ರೈತ ಚಳುವಳಿಯ ಸಮಗ್ರ ಚಿತ್ರಣ ಪುಸ್ತಕದಲ್ಲಿದೆ. ದ.ಕ., ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಹೋರಾಟಗಳ ದಾಖಲೀಕರಣವೂ ಇದರಲ್ಲಾಗಿದೆ. ಟಿಪ್ಪು ಬಡ ರೈತರ, ಭೂಹಿಡುವಳಿದಾರರ ಸ್ನೇಹಿತ ಎನ್ನುವ ಮೂಲಕ ಸರಕಾರಕ್ಕೆ ಸಂದೇಶ ನೀಡಲಾಗಿದೆ. ಭೂಮಿಯನ್ನು ಜಮೀನುದಾರರಿಂದ ಬಿಡಿಸಿ ಸಣ್ಣ ಹಿಡುವಳಿದಾರರಿಗೆ ನೀಡಿರುವುದರಿಂದಲೇ ಆ ಪ್ರಾಂತದಲ್ಲಿ ಇಂದಿಗೂ ಜಮೀನುದಾರರು ಟಿಪ್ಪುವನ್ನು ದ್ವೇಷಿಸುತ್ತಾರೆ ಎಂದರು.

ಜಾಗತೀಕರಣದ ಪರಿಣಾಮ ಕುರಿತು ಪುಸ್ತಕದಲ್ಲಿ ವಿವರಿಸಲಾಗಿದೆ. ಅಂದರೆ ಉದಾರೀಕರಣ ಹಾಗೂ ಖಾಸಗೀಕರಣವು ಜಾಗತೀಕರಣದ ಕಣ್ಣುಗಳಿದ್ದಂತೆ. ಡಾ.ಮನಮೋಹನ್ ಸಿಂಗ್ ಅರ್ಥ ಸಚಿವರಾಗಿ, ನರಸಿಂಹರಾವ್ ಪ್ರಧಾನ ಮಂತ್ರಿಯಾಗಿದ್ದಾಗ ಆರಂಭವಾಗಿದ್ದ ಜಾಗತೀಕರಣದ ಪ್ರಕ್ರಿಯೆಗೆ ಮೋದಿ ವೇಗ ನೀಡಿದ್ದಾರೆ ಎಂದು ಜಿ.ರಾಜಶೇಖರ ನುಡಿದರು.

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ವಕೀಲ ಯಶವಂತ ಮರೋಳಿ, ದ.ಕ.ಜಿಲ್ಲಾ ಸಮಿತಿಯ ಅಧ್ಯಕ್ಷ ಕೆ.ಕೃಷ್ಣಪ್ಪ ಸಾಲ್ಯಾನ್, ಲೇಖಕ ಕೆ.ಆರ್.ಶ್ರೀಯಾನ್ ಉಪಸ್ಥಿತರಿದ್ದರು.

ಸಮಿತಿ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟ ಸ್ವಾಗತಿಸಿದರು. ಸುನೀಲ್ ಕುಮಾರ್ ಬಜಾಲ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X