Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ...

ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆ: ವಾಟಾಳ್ ನಾಗರಾಜ್ ಬಂಧನ

ವಾರ್ತಾಭಾರತಿವಾರ್ತಾಭಾರತಿ4 Aug 2019 10:32 PM IST
share
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆ: ವಾಟಾಳ್ ನಾಗರಾಜ್ ಬಂಧನ

ಮಂಡ್ಯ, ಆ.4: ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕೃಷ್ಣರಾಜಸಾಗರ(ಕೆಆರ್‍ಎಸ್) ಜಲಾಶಯದ ಬಳಿ ಮಲಗಿ ಪ್ರತಿಭಟಿಸಿದ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ರವಿವಾರ ಬಂಧಿಸಿದರು.

ಕಾರ್ಯಕರ್ತರ ಜೊತೆ ಜಲಾಶಯದ ಬಳಿಗೆ ಬಂದ ವಾಟಾಳ್ ನಾಗರಾಜ್, ಜಲಾಶಯದಲ್ಲಿ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ಖಂಡಿಸಿ, ಮುಖ್ಯ ದ್ವಾರದ ಬಳಿ ಮಲಗಿ ವಿನೂತನ ಪ್ರತಿಭಟನೆ ನಡೆಸಿದರು.

ನಂತರ, ಜಲಾಶಯದ ಕಡೆಗೆ ತೆರಳಲು ಯತ್ನಿಸಿದ ಅವರನ್ನು ಪೊಲೀಸರು ತಡೆದರು. ಆದರೆ, ಅವರು ರಾಜ್ಯ ಸರಕಾರ ಮತ್ತು ಕಾವೇರಿ ನದಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಾಗರಾಜ್, ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಕರ್ನಾಟಕದ ರೈತರಿಗೆ ನೀರಿಲ್ಲದಂತಹ ಸಂದರ್ಭದಲ್ಲಿ ತಮಿಳುನಾಡಿಗೆ ಜಲಾಶಯದಿಂದ ನೀರು ಹರಿಸುವ ಪ್ರಮೇಯ ಏನಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು. ಉಭಯ ರಾಜ್ಯಗಳ ನಡುವೆ ಕಾವೇರಿ ನದಿ ವಿವಾದ ಹೊಸದೇನಲ್ಲ. ಪ್ರತಿಭಟನೆಯೂ ಹೊಸದಲ್ಲ. ಆದರೆ, ನ್ಯಾಯಯುತ ಪರಿಹಾರವಷ್ಟೆ ಅಂತಿಮ ಗುರಿ ಎಂದು ಅವರು ಹೇಳಿದರು.

ಕಾವೇರಿ ಪ್ರಾಧಿಕಾರದ ರಚನೆ ರಾಜ್ಯಕ್ಕೆ ಮರಣ ಶಾಸನ. ಅದನ್ನು ವಿರೋಧಿವುದಾಗಿ ಹೇಳಿ ಹಿಂದಿನ ಸರಕಾರ ಹೇಳಿತ್ತು. ಈಗ ನಮ್ಮ ಅಧಿಕಾರಿಗಳನ್ನೇ ಪ್ರಾಧಿಕಾರದ ಸಭೆಗೆ ಕಳುಹಿಸುತ್ತಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಪ್ರಾಧಿಕಾರ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡುವಂತೆ ಸ್ರಚಿಸುತ್ತಿದೆ. ಕೇಂದ್ರ ಸರಕಾರ ಪ್ರಾಧಿಕಾರ ತಮಿಳುನಾಡಿನ ಕೈಗೊಂಬೆಯಾಗಿದೆ.
ತಮಿಳುನಾಡಿನ ಹಿತಕ್ಕಾಗಿ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡುತ್ತಿದೆ. ನೀರು ಬಿಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಅವರು ಕಿಡಿಕಾರಿದರು. ಅಣೆಕಟ್ಟು, ಕೆರೆ, ಕಟ್ಟೆಗಳಲ್ಲೂ ನೀರಿಲ್ಲ. ಅಂತಹದಲ್ಲಿ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡುವಂತೆ ಹೇಳಿದೆ. ಈ ಆದೇಶವನ್ನು ರಾಜ್ಯ ಸರಕಾರ ಒಪ್ಪಬಾರದು. ಯಾವ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಅವರು ತಾಕೀತು ಮಾಡಿದರು.

ವಾರದೊಳಗೆ ಮೇಕೆದಾಟು ಯೋಜನೆ ರಾಜ್ಯ ಸರಕಾರ ಆರಂಭಸದಿದ್ದರೆ ನಾವೇ ಶಂಕುಸ್ಥಾಪನೆ ಮಾಡುತ್ತೇವೆ ಎಂದು ಅವರು ಎಚ್ಚರಿಸಿದರು.

ಟಿಪ್ಪು ಸುಲ್ತಾನ್ ದೇಶ ಕಂಡ ಅಪ್ರತಿಮ ವೀರ. ಪಾರ್ಲಿಮೆಂಟ್ ಮುಂದೆ ಟಿಪ್ಪು ಪ್ರತಿಮೆ ಪ್ರತಿಷ್ಠಾಪಿಸಬೇಕು. ಟಿಪ್ಪು ಜಯಂತಿ ರದ್ದತಿ ಆದೇಶ ಹಿಂಪಡೆಯಬೇಕು.

-ವಾಟಾಳ್ ನಾಗರಾಜ್, ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X