ರಸ್ತೆಗಳಿಗೆ ಭಾರೀ ಹಾನಿ: ಪೆರುಂಬಾಡಿಯಿಂದ ಮಾಕುಟ್ಟ ವರೆಗೆ ವಾಹನ ಸಂಚಾರ ಬಂದ್
![ರಸ್ತೆಗಳಿಗೆ ಭಾರೀ ಹಾನಿ: ಪೆರುಂಬಾಡಿಯಿಂದ ಮಾಕುಟ್ಟ ವರೆಗೆ ವಾಹನ ಸಂಚಾರ ಬಂದ್ ರಸ್ತೆಗಳಿಗೆ ಭಾರೀ ಹಾನಿ: ಪೆರುಂಬಾಡಿಯಿಂದ ಮಾಕುಟ್ಟ ವರೆಗೆ ವಾಹನ ಸಂಚಾರ ಬಂದ್](https://www.varthabharati.in/sites/default/files/images/articles/2019/08/5/203879-1564986420.gif)
ಮಡಿಕೇರಿ ಆ.5: ದಕ್ಷಿಣ ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದೆ. ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಭಾಗ ಕುಸಿದಿದ್ದು, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸ್ಥಳ ಪರಿಶೀಲನೆ ನಡೆಸಿದರು. ತಹಶೀಲ್ದಾರ್, ಲೋಕೋಪಯೋಗಿ ಇಂಜಿನಿಯರ್ ಹಾಗೂ ಸ್ಥಳೀಯ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು.
ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ದೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಜಿಲ್ಲಾಧಿಕಾರಿ, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.