Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆ: ಮುಂಗಾರು ಮಳೆ ಪ್ರಮಾಣದಲ್ಲಿ...

ದ.ಕ.ಜಿಲ್ಲೆ: ಮುಂಗಾರು ಮಳೆ ಪ್ರಮಾಣದಲ್ಲಿ ಕುಸಿತ

ಭತ್ತ, ಕೃಷಿ ಚಟುವಟಿಕೆಗೆ ಹೊಡೆತ

ವಾರ್ತಾಭಾರತಿವಾರ್ತಾಭಾರತಿ5 Aug 2019 9:06 PM IST
share
ದ.ಕ.ಜಿಲ್ಲೆ: ಮುಂಗಾರು ಮಳೆ ಪ್ರಮಾಣದಲ್ಲಿ ಕುಸಿತ

ಮಂಗಳೂರು, ಆ.5: ಈ ಬಾರಿ ಕರಾವಳಿಯಲ್ಲಿ ಮುಂಗಾರು ಮಳೆ ಪ್ರಮಾಣದಲ್ಲಿ ಕುಸಿತ ಕಂಡಿವೆ. ಜೊತೆಗೆ ವಿಳಂಬವೂ ಆಗಿದೆ. ಆ ಹಿನ್ನೆಲೆಯಲ್ಲಿ ಭತ್ತ ಕೃಷಿ ಚಟುವಟಿಕೆಗೆ ಹೊಡೆತ ಬಿದ್ದಿವೆ. ಇದ್ದ ಅಲ್ಪಸ್ವಲ್ಪ ಕೃಷಿ ಭೂಮಿಯಲ್ಲಿ ಕೃಷಿ ಚಟುವಟಿಕೆ ತಡವಾಗಿ ಆರಂಭವಾಗಿದ್ದು, ನಿಗದಿತ ಗುರಿ ಸಾಧನೆ ಈವರೆಗೆ ಆಗಿಲ್ಲ.

ಕಳೆದ ವರ್ಷ ಜನವರಿಯಿಂದ ಆಗಸ್ಟ್ 5ರವರೆಗೆ 3058.1 ಮಿ.ಮೀ ಮಳೆಯಾಗಿದ್ದರೆ, ಈ ಬಾರಿ ಅದರ ಅರ್ಧದಷ್ಟೂ ಆಗಿಲ್ಲ. ಅಂದರೆ ಈ ವರ್ಷ ಜನವರಿಯಿಂದ ಆಗಸ್ಟ್ 5ರವರೆಗೆ ಕೇವಲ 1588.4 ಮಿ.ಮೀ. ಮಳೆಯಾಗಿದೆ. ಮುಂಗಾರು ಮಳೆ ವಿಳಂಬ ಮಾತ್ರವಲ್ಲ, ಮಳೆ ಪ್ರಮಾಣದಲ್ಲೂ ಭಾರೀ ಕುಸಿತ ಕಂಡು ಬಂದ ಕಾರಣ ಒಟ್ಟು ಕೃಷಿ ಚಟುವಟಿಕೆಯಲ್ಲಿ ಹಿನ್ನಡೆಯಾಗಿದೆ.

ಸಾಮಾನ್ಯವಾಗಿ ಜೂನ್ ಅಂತ್ಯದ ವೇಳೆಗೆ ಮುಂಗಾರು ಮಳೆ ಚುರುಕುಗೊಂಡು ಗದ್ದೆಯಲ್ಲಿ ನೀರು ತುಂಬಿ ತುಳುಕುತ್ತಿವೆ. ಆ ಬಳಿಕವೇ ಕೃಷಿ ಚಟುವಟಿಕೆ ಅಂದರೆ ಉಳುಮೆ, ನಾಟಿ ಸಹಿತ ಭತ್ತ ಕೃಷಿ ಚಟುವಟಿಕೆ ನಡೆಸಲಾಗುತ್ತದೆ. ದ.ಕ. ಜಿಲ್ಲೆಯಲ್ಲಿ ಭತ್ತ ನಾಟಿ ಗುರಿಯಲ್ಲಿ ಈವರೆಗೆ ಶೇ.44 ಸಾಧನೆಯಾಗಿದೆ. ಅಂದರೆ ಜಿಲ್ಲೆಯ 16,900 ಹೆಕ್ಟೇರ್ ಪ್ರದೇಶದಲ್ಲಿ 7,144 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿದೆ.

ಆಗಸ್ಟ್‌ನಲ್ಲೂ ಬಿತ್ತನೆ ಮತ್ತು ನಾಟಿ ನಡೆಯಲಿದ್ದು, ತಿಂಗಳಾಂತ್ಯದ ವೇಳೆಗೆ ನಿಗದಿತ ಗುರಿ ಸಾಧನೆಯ ನಿರೀಕ್ಷೆಯಿದೆ. ಕಳೆದ ವರ್ಷ ಮೇಯಲ್ಲೇ ಉತ್ತಮ ಮಳೆಯಾಗಿದ್ದರಿಂದ ಆಗಸ್ಟ್ ಮೊದಲ ವಾರದಲ್ಲೇ ನಿಗದಿತ ಗುರಿ ಸಾಧಿಸಲಾಗಿತ್ತು. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಭತ್ತದ ಬೆಳೆಯ ಗುರಿ ಭಾರೀ ಕಡಿಮೆಯಿದೆ. ಅಂದರೆ ದ.ಕ. ಜಿಲ್ಲೆಯಲ್ಲಿ 28 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ನಿಗದಿಪಡಿಸಿತ್ತು. ಆದರೆ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ ಕೆವಲ 15,900 ಹೆಕ್ಟೇರ್ ಭತ್ತ ಬೆಳೆಯುವ ಪ್ರದೇಶ ಪತ್ತೆಯಾಗಿತ್ತು. ಆದ್ದರಿಂದ ಈ ಬಾರಿ ಗುರಿಯೂ ಕಡಿಮೆಯಾಗಿದೆ ಎಂದು ಅಧಿಕಾರಿಗಳು ವಿಶ್ಲೇಷಿಸುತ್ತಾರೆ.

ಕರಾವಳಿಯಲ್ಲಿ ಈ ಬಾರಿ ಮುಂಗಾರು ಮಳೆ ಭಾರೀ ಇಳಿಕೆಯಾಗಿದೆ. ಅಂದರೆ ಜಿಲ್ಲೆಯಲ್ಲಿ ಜೂನ್‌ನ ಸರಾಸರಿ ಮಳೆ 914.8 ಮಿ.ಮೀ.ನಲ್ಲಿ ಕೇವಲ 439.4 ಮಿ.ಮೀ. ಸುರಿದಿದೆ. ಜುಲೈಯ ಸರಾಸರಿ ಮಳೆ 1217 ಮಿ.ಮೀ. ಆಗಿದ್ದರೆ ಸುರಿದ ಮಳೆ 981.3 ಮಿ.ಮೀ. ಆಗಿದೆ.
ಮುಂಗಾರು ಪೂರ್ವ ಮಳೆಯೂ ಕಡಿಮೆಯಾಗಿದ್ದರಿಂದ ಉಳುಮೆಯೊಂದಿಗೆ ಗದ್ದೆ ಹದ ಮಾಡುವುದು ಕೂಡ ರೈತರಿಗೆ ಸಮಸ್ಯೆಯಾಗಿ ಕಾಡಿತು. ಮಳೆಯ ಪ್ರಮಾಣವು ಮತ್ತೆಯೂ ಕಡಿಮೆಯಾದ ಪರಿಣಾಮ ಕೃಷಿ ಚಟಿವಟಿಕೆಗೆ ಹೊಡೆತ ಬಿದ್ದಿವೆ.

ಮಳೆ ಪ್ರಮಾಣ ಕಡಿಮೆಯಾದ ಕಾರಣ ಮುಂಗಾರಿನ ಬಿತ್ತನೆ, ನಾಟಿ ಕೆಲಸವೂ ತಡವಾಗಿದೆ. ಇದರ ನೇರ ಪರಿಣಾಮ ಹಿಂಗಾರಿನ ಮೇಲೆ ಆಗಲಿದೆ. ಅಂದರೆ ಹಿಂಗಾರು ವೇಳೆ ಭತ್ತ ಕೃಷಿ ಕಷ್ಟವಾಗಲಿದೆ ಎಂದು ರೈತರು ಅಭಿಪ್ರಾಯಪಡುತ್ತಾರೆ. ಜಿಲ್ಲೆಯ ಹಲವು ಕಡೆ ಇನ್ನೂ ಕೃಷಿ ಚಟುವಟಿಕೆ ಪೂರ್ತಿಗೊಂಡಿಲ್ಲ. ಕನಿಷ್ಠ 25 ದಿನ ನೇಜಿ ನಾಟಿ ಮಾಡಿದರೆ ಮಾತ್ರ ನಿಗದಿತ ಅವಧಿಯಲ್ಲಿ ಬೆಳೆ ತೆಗೆಯಲು ಸಾಧ್ಯವಿದೆ. ಇದೀಗ ಬಿತ್ತನೆ ಮಾಡಿದರೆ ಹೆಚ್ಚೇನೂ ಪ್ರಯೋಜನವಿಲ್ಲ. ಸೋಮವಾರದಿಂದ ಮಳೆ ಸ್ವಲ್ಪ ಚುರುಕು ಕಂಡಿದೆ. ಅಂದರೆ ಕಳೆದ ವರ್ಷ ಆ.5ರಂದು ಜಿಲ್ಲೆಯಲ್ಲಿ ಕೇವಲ 12 ಮಿ.ಮೀ. ಮಳೆಯಾಗಿದ್ದರೆ, ಈ ಬಾರಿ 57.7 ಮಿ.ಮೀ. ಮಳೆಯಾಗಿದೆ. ಇದು ಭತ್ತ ಹೊರತುಪಡಿಸಿ ಇತರ ಕೃಷಿ ಚಟುವಟಿಕೆಗೆ ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇದೆ.

ಮಳೆ ವಿಳಂಬವಾದ ಕಾರಣ ಭತ್ತ ಕೃಷಿ ಚಟುವಟಿಕೆಯೂ ವಿಳಂಬವಾಗಿದೆ. ಇದೀಗ ಬಿತ್ತನೆ, ಉಳುಮೆ ಕೆಲಸಗಳು ಚುರುಕುಗೊಂಡಿವೆ. ಸೋಮವಾರದಿಂದ ಭಾರೀ ಮಳೆಯಾಗಿದ್ದು, ನೀರು ಹರಿಯುತ್ತಿದೆ. ಗದ್ದೆಯಲ್ಲೂ ನೀರು ನಿಂತಿದೆ.

- ಡಾ.ಸೀತಾ, ಜಂಟಿ ನಿರ್ದೇಶಕಿ ದ.ಕ. ಜಿಲ್ಲಾ ಕೃಷಿ ಇಲಾಖೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X