ಜಮ್ಮು& ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ಕ್ರಮ ಸ್ವಾಗತಾರ್ಹ- ಸಿಎಂ ಯಡಿಯೂರಪ್ಪ
![ಜಮ್ಮು& ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ಕ್ರಮ ಸ್ವಾಗತಾರ್ಹ- ಸಿಎಂ ಯಡಿಯೂರಪ್ಪ ಜಮ್ಮು& ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ಕ್ರಮ ಸ್ವಾಗತಾರ್ಹ- ಸಿಎಂ ಯಡಿಯೂರಪ್ಪ](https://www.varthabharati.in/sites/default/files/images/articles/2019/08/5/203957-1565022830.gif)
ಬೆಂಗಳೂರು, ಆ.5: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರ ಸರಕಾರದ ಕ್ರಮ ಸ್ವಾಗತಾರ್ಹ. ಸ್ವಾತಂತ್ರ ನಂತರ ಪ್ರಧಾನಿ ಮೋದಿ ಒಂದು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಪ್ರತಿಯೊಬ್ಬ ಪ್ರಜೆಯೂ ಇದನ್ನು ಸ್ವಾಗತ ಮಾಡುತ್ತಾನೆ. ‘ಏಕ್ ದೇಶ್ ಮೇ ದೋ ಪ್ರಧಾನ್, ದೋ ವಿಧಾನ್, ದೋ ನಿಶಾನ್ ನಹಿ ಚಲೇಗಾ, ನಹಿ ಚಲೇಗಾ’ ಎಂದು ಹೋರಾಟ ಮಾಡಿ ಶ್ಯಾಮ್ ಪ್ರಸಾದ್ ಮುಖರ್ಜಿ ಹುತಾತ್ಮರಾದರು. ಅವರ ಆತ್ಮಕ್ಕೆ ಇಂದು ಶಾಂತಿ ಸಿಕ್ಕಿದೆ ಎಂದರು.
ಪಕ್ಷೇತರ ಶಾಸಕ ನಾಗೇಶ್ ಭೇಟಿ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್, ಡಾಲರ್ಸ್ ಕಾಲನಿಯಲ್ಲಿರುವ ನಿವಾಸದಲ್ಲಿ ಯಡಿಯೂರಪ್ಪರನ್ನು ಭೇಟಿ ಮಾಡಿ 15 ನಿಮಿಷ ಮಾತುಕತೆ ನಡೆಸಿದರು. ಸಂಪುಟ ರಚನೆ ಕುರಿತು ಚರ್ಚಿಸಲು ಯಡಿಯೂರಪ್ಪ ಇಂದು ಹೊಸದಿಲ್ಲಿಗೆ ತೆರಳುತ್ತಿರುವುದರಿಂದ, ನಾಗೇಶ್ ಈ ಭೇಟಿ ಮಾಡಿದ್ದಾರೆ.
Next Story