Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳಿಗೆ ಅರ್ಥವಾಗುವ ಸಾಹಿತ್ಯ ರಚನೆ...

ಮಕ್ಕಳಿಗೆ ಅರ್ಥವಾಗುವ ಸಾಹಿತ್ಯ ರಚನೆ ಅಗತ್ಯ: ಕವಿ ಸಿದ್ದಲಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ5 Aug 2019 10:07 PM IST
share
ಮಕ್ಕಳಿಗೆ ಅರ್ಥವಾಗುವ ಸಾಹಿತ್ಯ ರಚನೆ ಅಗತ್ಯ: ಕವಿ ಸಿದ್ದಲಿಂಗಯ್ಯ

ಬೆಂಗಳೂರು, ಆ.5: ಮಕ್ಕಳಿಗೆ ಅರ್ಥವಾಗುವ, ಹತ್ತಿರವಾಗುವಂತಹ ಸಾಹಿತ್ಯ ರಚನೆ ಅಗತ್ಯವಿದೆ ಎಂದು ದಲಿತ ಕವಿ ಸಿದ್ದಲಿಂಗಯ್ಯ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ನಗರದ ಜೈನ್ ವಿಶ್ವವಿದ್ಯಾಲಯದ ಸೆಮಿನಾರ್ ಹಾಲ್‌ನಲ್ಲಿ ಶಬ್ದನಾ ಭಾಷಾಂತರ ಕೇಂದ್ರ, ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ಪ್ರಥಮ ಬುಕ್ಸ್ ಸಹಯೋಗದೊಂದಿಗೆ ಆಯೋಜಿಸಿದ್ದ ‘ಮಕ್ಕಳ ಜನಪ್ರಿಯ ಪುಸ್ತಕಗಳ ಮರುಓದು’ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿಯೇ ಯೋಗ, ಅಧ್ಯಾತ್ಮದ ವಿಷಯಗಳನ್ನು ಓದಿಸುವುದರಿಂದ ಅದು ಅವರಿಗೆ ಅರ್ಥವಾಗುವುದಿಲ್ಲ. ಅದರ ಬದಲಿಗೆ ಅವರಿಗೆ ಇಷ್ಟವಾಗುವ, ಆಸಕ್ತಿ ಹುಟ್ಟಿಸುವ ಸಾಹಿತ್ಯದ ರಚನೆ ಅಗತ್ಯವಿದೆ. ಹೀಗಾಗಿ, ಮಕ್ಕಳನ್ನು ಸಾಹಿತ್ಯದ ಕಡೆಗೆ ಆಕರ್ಷಿಸುವ ಸಾಹಿತ್ಯವನು ರಚಿಸಬೇಕು ಎಂದು ನುಡಿದರು.

ಮಕ್ಕಳಲ್ಲಿ ಅಧ್ಯಾತ್ಮ, ಯೋಗದ ಕುರಿತಾದ ಸಾಹಿತ್ಯ ಗೊಂದಲವನ್ನು ಸೃಷ್ಟಿಸುತ್ತದೆ. ಹೀಗಾಗಿ, ಮಕ್ಕಳಿಗೆ ಕೈಗೆಟುಕುವ ಸಾಹಿತ್ಯ ರಚನೆಗೆ ಮುಂದಾಗಬೇಕು. ಇಂದಿನ ಕೆಲ ಹಿರಿಯ ಸಾಹಿತಿಗಳು ಮಕ್ಕಳ ಸಾಹಿತ್ಯ ರಚನೆಯನ್ನು ಕೈಬಿಟ್ಟಿದ್ದಾರೆ. ಆದರೆ, ಕನ್ನಡ ಸಾಹಿತ್ಯ ಪ್ರಾರಂಭದ ದಿನದಿಂದಲೂ ಮಕ್ಕಳ ಸಾಹಿತ್ಯಕ್ಕೆ ನಾವು ಆದ್ಯತೆ ನೀಡಿದ್ದೇವೆ. ಮಕ್ಕಳಿಗೆ ಸಾಕು ಪ್ರಾಣಿಗಳ ಮೇಲೆ ತುಂಬಾ ಪ್ರೀತಿ ಇದೆ. ಇದೇ ವಿಷಯ ಸಾಹಿತ್ಯದಲ್ಲಿ ಇನ್ನೂ ಜೀವಂತವಾಗಿದೆ ಎಂದು ತಿಳಿಸಿದರು.

ಇಂದಿನ ದಿನಗಳಲ್ಲಿ ಶಿಶು ಸಾಹಿತ್ಯ ರಚನೆ ಅತ್ಯಂತ ತ್ರಾಸದಾಯಕ ಕೆಲಸವಾಗಿದೆ. ಡಾ.ಎಚ್.ಎಸ್.ವೆಂಕಟೇಶಮೂರ್ತಿ ಸೇರಿದಂತೆ ಕೆಲವರನ್ನು ಹೊರತುಪಡಿಸಿದರೆ ಮಕ್ಕಳ ಸಾಹಿತ್ಯದ ಸಂಖ್ಯೆ ಕಡಿಮೆಯಾಗುತ್ತಿದೆ. ಒಂದು ಭಾಷೆಯ ಉಳಿವಿನ ಪ್ರಶ್ನೆಯು ಮಕ್ಕಳ ಓದಿನ ಮೇಲೆ ನಿಂತಿರುತ್ತದೆ. ಅವರಿಗೆ ಸಣ್ಣ ವಯಸ್ಸಿನಿಂದಲೇ ಕನ್ನಡದ ಓದಿನ ಅಭಿರುಚಿ ಬೆಳೆಸಬೇಕು. ಅದಕ್ಕಾಗಿ ಅವರಿಗೆ ಇಷ್ಟವಾಗುವ ಸಾಹಿತ್ಯ ರಚನೆ ಬೇಕು ಎಂದು ಸಿದ್ದಲಿಂಗಯ್ಯ ನುಡಿದರು.

ಮಕ್ಕಳಿಗೆ ಕವಿತೆ, ನಾಟಕ, ಕಾದಂಬರಿ ಸೇರಿದಂತೆ ಎಲ್ಲ ಪ್ರಕಾರದ ಸಾಹಿತ್ಯವನ್ನೂ ಓದಿಸಬೇಕು. ಅವರಿಗೆ ಅರ್ಥವಾಗುವಂತೆ ಸರಳವಾದ ಭಾಷೆಯ ಮೂಲಕ ಅವರನ್ನು ತಲುಪಬೇಕು ಎಂದ ಅವರು, ಈ ಮೂಲಕ ಮಕ್ಕಳನ್ನು ಸಾಹಿತ್ಯ ಲೋಕಕ್ಕೆ ಸೆಳೆಯಬೇಕು. ನಂತರದ ಹಂತದಲ್ಲಿ ಮಕ್ಕಳ ಮನಸ್ಸನ್ನು ತಣಿಸಿ, ಆಸಕ್ತಿ ಕೆರಳಿಸಿ, ಕಲ್ಪನೆಯನ್ನು ವಿಸ್ತರಿಸುವ ಪುಟ್ಟ ಕಥೆಗಳನ್ನು, ದೃಶ್ಯವಾಗಿ ಕಟ್ಟಿಕೊಡುವ ನಾಟಕಗಳ ಮೂಲಕ ಅವರ ಸಾಹಿತ್ಯ ಲೋಕದಲ್ಲಿಯೇ ಉಳಿಯುವಂತೆ ಮಾಡಬೇಕಿದೆ ಎಂದರು.

ಮಕ್ಕಳಿಗೆ ಓದಿನ ಆಸಕ್ತಿಯನ್ನು ಹೆಚ್ಚಿಸುವ ಯಾವುದೇ ಪುಸ್ತಕವನ್ನು ಅವರಿಗೆ ನೀಡಬೇಕು. ಆ ಮೂಲಕ ಅವರಲ್ಲಿ ಹವ್ಯಾಸ ಬೆಳೆಸಬೇಕು. ಒಮ್ಮೆ ಓದು ಆರಂಭವಾದರೆ ಅದು ಹವ್ಯಾಸವಾಗಿ ಮಾರ್ಪಡುತ್ತದೆ. ಮಕ್ಕಳನ್ನು ಪುಸ್ತಕ ಮಳಿಗೆಗೆ ಕರೆದುಕೊಂಡು ಹೋಗಬೇಕು. ಅಲ್ಲಿ ಅವರಿಗೆ ಯಾವ ಪುಸ್ತಕ ಇಷ್ಟವಾಗುತ್ತದೆ ಎಂದು ತಿಳಿದುಕೊಂಡು ಅದನ್ನೇ ಗಿಫ್ಟ್ ಆಗಿ ಕೊಡುವಂತಹ ಪದ್ಧತಿ ಪೋಷಕರು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶಬ್ದನಾ ಭಾಷಾಂತರ ಕೇಂದ್ರದ ಗೌರವ ನಿರ್ದೇಶಕ ಎಸ್.ಆರ್.ವಿಜಯಶಂಕರ್, ಪ್ರಥಮ ಬುಕ್ಸ್‌ನ ಹಿರಿಯ ಸಂಪಾದಕ ಸಂಧ್ಯಾ ಟಾಕ್ಸಾಳೆ, ಅಧ್ಯಕ್ಷ ಸುಝೇನ್ ಸಿಂಗ್, ಮೈಥಿಲಿ ಪಿ.ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X