Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರದ ಕೊನೆಯ ಯುವರಾಜ ಕರಣ್ ಸಿಂಗ್...

ಕಾಶ್ಮೀರದ ಕೊನೆಯ ಯುವರಾಜ ಕರಣ್ ಸಿಂಗ್ ಸಂಸತ್ತಿನಲ್ಲಿ ಮಾಡಿದ್ದ ಭಾಷಣದಲ್ಲಿ ಹೇಳಿದ್ದೇನು ?

ಇಲ್ಲಿದೆ ಸಂಪೂರ್ಣ ವಿವರ

ವಾರ್ತಾಭಾರತಿವಾರ್ತಾಭಾರತಿ5 Aug 2019 10:13 PM IST
share
ಕಾಶ್ಮೀರದ ಕೊನೆಯ ಯುವರಾಜ ಕರಣ್ ಸಿಂಗ್ ಸಂಸತ್ತಿನಲ್ಲಿ ಮಾಡಿದ್ದ ಭಾಷಣದಲ್ಲಿ ಹೇಳಿದ್ದೇನು ?

ಹೊಸದಿಲ್ಲಿ, ಆ.5: “ಜಮ್ಮು ಕಾಶ್ಮೀರದ ವಿಷಯವು ತುಂಬಾ ಸಂಕೀರ್ಣ ಮತ್ತು ಜಟಿಲ ವ್ಯವಹಾರವಾಗಿದ್ದು, ಇದನ್ನು ಯಾವುದೇ ಮ್ಯಾಜಿಕ್ ಬುಲೆಟ್‌ನಿಂದ ರಾತ್ರೋರಾತ್ರಿ ಪರಿಹರಿಸಲು ಆಗದು” ಎಂದು 2016ರಲ್ಲಿ ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ಕಾಂಗ್ರೆಸ್ ಮುಖಂಡ ಡಾ ಕರಣ್ ಸಿಂಗ್ ಹೇಳಿದ್ದರು.

ಕರಣ್ ಸಿಂಗ್ ಜಮ್ಮು ಕಾಶ್ಮೀರದ ಕೊನೆಯ ಯುವರಾಜನಾಗಿದ್ದು, ಜಮ್ಮು ಕಾಶ್ಮೀರದ ಕೊನೆಯ ದೊರೆ ಮಹಾರಾಜ ಹರಿಸಿಂಗ್ ಪುತ್ರ. ಕರಣ್ ಸಿಂಗ್ ಸಂಸತ್ತಿನಲ್ಲಿ ಮಾಡಿದ್ದ ಭಾಷಣದ ಸಾರಾಂಶ ಇಲ್ಲಿದೆ:

 ಭಾರತದೊಂದಿಗೆ ವಿಲೀನಗೊಳ್ಳುವ ಒಪ್ಪಂದ ಪತ್ರಕ್ಕೆ ತಂದೆ 1947ರ ಅಕ್ಟೋಬರ್ 27ರಂದು ಸಹಿ ಹಾಕಿದಂದಿನಿಂದ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ನಾನಾಗ ಕೋಣೆಯಲ್ಲಿ ಕುಳಿತಿದ್ದೆ. ಆದರೆ ದಯವಿಟ್ಟು ನೆನಪಿಸಿಕೊಳ್ಳಿ; ನನ್ನ ತಂದೆ ಮೂರು ವಿಷಯದ ಮೇಲೆ ಒಪ್ಪಿಕೊಂಡರು - ರಕ್ಷಣೆ, ಸಂವಹನ ಮತ್ತು ವಿದೇಶ ವ್ಯವಹಾರ. ರಾಜರ ಆಡಳಿತದಲ್ಲಿದ್ದ ಇತರ ಪ್ರದೇಶಗಳು ಸಹಿ ಹಾಕಿದಂತೆಯೇ ನನ್ನ ತಂದೆ ಕೂಡಾ ಸಹಿ ಹಾಕಿದ್ದಾರೆ. ಇತರ ರಾಜ್ಯಗಳು ಬಳಿಕ ಭಾರತದೊಂದಿಗೆ ವಿಲೀನಗೊಂಡವು. ಆದರೆ ಜಮ್ಮು ಕಾಶ್ಮೀರ ಮಾತ್ರ ವಿಲೀನಗೊಂಡಿಲ್ಲ. ಜಮ್ಮು ಮತ್ತು ಕಾಶ್ಮೀರವು ಭಾರತದ ಇತರ ಪ್ರದೇಶಗಳೊಂದಿಗೆ ಹೊಂದಿರುವ ಸಂಬಂಧಕ್ಕೆ 370ನೇ ವಿಧಿ ಮಾರ್ಗಸೂಚಿಯಾಗಿದೆ. ಹೌದು, ಅದು ಭಾರತದ ಅವಿಭಾಜ್ಯ ಅಂಗವಾಗಿದೆ. ಆದರೆ ಈ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಬಳಿಕ 1952ರಲ್ಲಿ ಶೇಖ್ ಅಬ್ದುಲ್ಲಾ ಮತ್ತು ಜವಾಹರಲಾಲ್ ನೆಹರೂ ಮಧ್ಯೆ ರಾಜಕೀಯ ಒಪ್ಪಂದ ಏರ್ಪಟ್ಟಿತು.

1957ರಲ್ಲಿ ರಾಜ್ಯದ ಸಂವಿಧಾನವನ್ನು ಅಂಗೀಕರಿಸಲಾಯಿತು. 1957ರ ಜನವರಿ 26ರಂದು ನಾನೇ ಆ ಸಂವಿಧಾನಕ್ಕೆ ಸಹಿ ಹಾಕಿದ್ದೇನೆ. 1975ರಲ್ಲಿ ಶೇಖ್ ಅಬ್ದುಲ್ಲಾ ಮತ್ತು ಇಂದಿರಾ ಗಾಂಧಿ ಮಧ್ಯೆ ಮತ್ತೊಂದು ರಾಜಕೀಯ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಬಳಿಕ ಕ್ರಮೇಣ ಹಲವು ಆಯೋಗಗಳು ನೇಮಕಗೊಂಡವು. ಆದರೂ, ಜಮ್ಮು ಮತ್ತು ಕಾಶ್ಮೀರದ ನಿಖರ ಸ್ಥಿತಿ ಹಾಗೂ ಭಾರತದೊಂದಿಗಿನ ಸಂಬಂಧದ ಕುರಿತು ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಅದು ಭಾರತದ ಅವಿಭಾಜ್ಯ ಅಂಗ ಎಂಬುದರಲ್ಲಿ ಸಂದೇಹವೇ ಇಲ್ಲ. ಆದರೆ ಯಾವ ರೀತಿಯ ಸಂಬಂಧ ಹೊಂದಿರಬೇಕು ಎಂಬ ಬಗ್ಗೆ ಗೊಂದಲವಿದೆ. ಹಲವು ಒಕ್ಕೂಟ ರಾಷ್ಟ್ರಗಳಲ್ಲಿ ವಿವಿಧ ರೀತಿಯ ವ್ಯವಸ್ಥೆಯಿದೆ. ಚೀನಾದಲ್ಲಿ ಒಂದು ದೇಶ, ಎರಡು ವ್ಯವಸ್ಥೆಯಿದೆ. ಆದ್ದರಿಂದ ಅವಿಭಾಜ್ಯ ಅಂಗ ಎಂಬ ಪದವನ್ನು ಡಿಕ್ಷನರಿಯಲ್ಲಿ ತಿಳಿಸಿದಂತೆ ಅರ್ಥೈಸಿಕೊಳ್ಳಬಾರದು ಮತ್ತು ಕಾಶ್ಮೀರದ ವಿಷಯದಲ್ಲಿ ಆ ಅರ್ಥ ಬರುವುದಿಲ್ಲ. ಆದ್ದರಿಂದಲೇ ಈ ಗೊಂದಲವಿನ್ನೂ ಬಗೆಹರಿದಿಲ್ಲ. ಇದನ್ನು ಆದಷ್ಟು ಬೇಗ ಬಗೆಹರಿಸದಿದ್ದರೆ ಗೊಂದಲ ಹೆಚ್ಚಾಗುತ್ತಾ ಹೋಗುತ್ತದೆ ಎಂದು ಕರಣ್ ಸಿಂಗ್ ರಾಜ್ಯಸಭೆಯಲ್ಲಿ ಹೇಳಿದ್ದರು.

ಜಮ್ಮು ಮತ್ತು ಕಾಶ್ಮೀರದ ಪ್ರಪ್ರಥಮ ರಾಜ್ಯಪಾಲರಾಗಿ 1965ರ ಮಾರ್ಚ್ 30ರಂದು ಕರಣ್ ಸಿಂಗ್‌ರನ್ನು ನೇಮಕ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X