ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ: ಮೊದಲ ಕಂತಿನ 2 ಸಾವಿರ ರೂ. ಬಿಡುಗಡೆಗೆ ಸುಗ್ರೀವಾಜ್ಞೆ
![ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ: ಮೊದಲ ಕಂತಿನ 2 ಸಾವಿರ ರೂ. ಬಿಡುಗಡೆಗೆ ಸುಗ್ರೀವಾಜ್ಞೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ: ಮೊದಲ ಕಂತಿನ 2 ಸಾವಿರ ರೂ. ಬಿಡುಗಡೆಗೆ ಸುಗ್ರೀವಾಜ್ಞೆ](https://www.varthabharati.in/sites/default/files/images/articles/2019/08/5/203993-1565027047.jpg)
ಬೆಂಗಳೂರು, ಆ.5: ರಾಜ್ಯದ ತುರ್ತು ಕಾರ್ಯಕ್ರಮಗಳ ನಿರ್ವಹಣಾ ನಿಧಿಯ ಮೊತ್ತವನ್ನು 80 ಕೋಟಿ ರೂ.ಗಳಿಂದ 2200 ಕೋಟಿ ರೂ. ಗಳಿಗೆ ಹೆಚ್ಚಿಸಲು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತಿನ 2000ರೂ.ಗಳನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗಿದೆ.
Next Story