Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಾವಲಂಬಿಗಳಾಗಿ ಬದುಕಿ ಸಮಾಜಕ್ಕೆ...

ಸ್ವಾವಲಂಬಿಗಳಾಗಿ ಬದುಕಿ ಸಮಾಜಕ್ಕೆ ಮಾದರಿಯಾಗಿ: ಯು.ಟಿ.ಖಾದರ್

ಅರ್ಹ ಮುಸ್ಲಿಂ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ6 Aug 2019 5:56 PM IST
share
ಸ್ವಾವಲಂಬಿಗಳಾಗಿ ಬದುಕಿ ಸಮಾಜಕ್ಕೆ ಮಾದರಿಯಾಗಿ: ಯು.ಟಿ.ಖಾದರ್

ಮಂಗಳೂರು, ಆ. 6: ನಮ್ಮಲ್ಲೇನೂ ಇಲ್ಲ, ನಮ್ಮ ಕಷ್ಟ ಎಂದಿಗೂ ಮುಗಿಯದು, ಸಮಸ್ಯೆಗೆ ಪರಿಹಾರವೂ ಸಿಗದು ಎಂದು ಕೊರಗದೆ ಮುಸ್ಲಿಂ ಮಹಿಳೆಯರು ಸ್ವಾಲಂಬಿಗಳಾಗಿ ಬದುಕಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಮಾಜಿ ಸಚಿವ ಯು.ಟಿ.ಖಾದರ್ ಕರೆ ನೀಡಿದ್ದಾರೆ.

ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಸ್ವರ್ಣ ಮಹೋತ್ಸವದ ಅಂಗವಾಗಿ ನಗರದ ಮಿನಿಪುರಭವನದಲ್ಲಿ ಮಂಗಳವಾರ ಜರುಗಿದ ದ.ಕ. ಮತ್ತು ಉಡುಪಿ ಜಿಲ್ಲೆಯ 70 ಮಂದಿ ಅರ್ಹ ಮುಸ್ಲಿಂ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಸ್ಯೆ ಇಲ್ಲದ ವ್ಯಕ್ತಿ ಇಲ್ಲ, ಮನೆಯೂ ಇಲ್ಲ, ಊರೂ ಇಲ್ಲ. ಸಮಸ್ಯೆ ಎಲ್ಲೆಡೆ ಇದೆ. ಎಲ್ಲರಿಗೂ ಅವರದ್ದೇ ಆದ ಸಮಸ್ಯೆಗಳಿವೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೇ ವಿನಃ ಕೊರಗಿ ಬದುಕಿನಲ್ಲಿ ಜಿಗುಪ್ಸೆಗೊಳಗಾಗಬಾರದು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ರಂಗದಲ್ಲಿ ತನ್ನದೇ ಆದ ರೀತಿಯಲ್ಲಿ ಕಾರ್ಯಾಚರಿಸುವ ಸೆಂಟ್ರಲ್ ಕಮಿಟಿಯು ಅರ್ಹ ಮುಸ್ಲಿಂ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸುತ್ತಿರುವುದು ಶ್ಲಾಘನೀಯ. ಇದರ ಪ್ರಯೋಜನ ಪಡೆದವರು ಬದುಕಿನಲ್ಲಿ ತಾನೂ ಸ್ವಾವಲಂಬಿಯಾಗುವುದರ ಜೊತೆಗೆ ಇತರರಿಗೂ ಉದ್ಯೋಗ ನೀಡಲು ಮನಸ್ಸು ಮಾಡಬೇಕು ಎಂದರು.

ಒಂದೇ ಕಡೆ ನಾಲ್ಕೈದು ಹೊಲಿಗೆ ಯಂತ್ರದ ವ್ಯವಸ್ಥೆ ಕಲ್ಪಿಸಿ ಅಲ್ಲಿಗೆ ಬಂದು ಟೈಲರಿಂಗ್ ಮಾಡುವ ಮತ್ತು ಮಹಿಳೆಯರು ಸಿದ್ಧಪಡಿಸಿದ ಬಟ್ಟೆಬರೆಗಳ ಮಾರಾಟಕ್ಕೆ ಸೆಂಟ್ರಲ್ ಕಮಿಟಿ ಮುಂದಾಗಬೇಕು. ಇದಕ್ಕಾಗಿ ತಾನು 5 ಹೊಲಿಗೆ ಯಂತ್ರವನ್ನು ಕಮಿಟಿಗೆ ನೀಡಲು ಸಿದ್ಧನಿದ್ದೇನೆ ಎಂದು ಯು.ಟಿ.ಖಾದರ್ ನುಡಿದರು.

ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ದುಆಗೈದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಮುಹಮ್ಮದ್ ಮಸೂದ್ ಹೊಲಿಗೆ ಯಂತ್ರ ಪಡೆದವರು ಅದನ್ನು ಯಾವ ರೀತಿಯಲ್ಲಿ ಸದುಪಯೋಗಪಡಿಸುತ್ತಾರೆ ಎಂಬುದನ್ನು ಪ್ರತೀ ಮೂರು ತಿಂಗಳಿಗೊಮ್ಮೆ ಪರಿಶೀಲನೆ ಮಾಡುವುದಾಗಿ ಹೇಳಿದರು.

ಅತಿಥಿಯಾಗಿ ಭಾಗವಹಿಸಿದ ಶಾಸಕ ವೇದವ್ಯಾಸ ಕಾಮತ್ ಸಂಘ ಸಂಸ್ಥೆಗಳ ಜೊತೆ ಸರಕಾರವೂ ಕೂಡ ಸಾಕಷ್ಟು ಯೋಜನೆಗಳನ್ನು ಪ್ರಕಟಿಸುತ್ತದೆ. ಅವುಗಳನ್ನು ಪಡೆಯುವ ಮೂಲಕ ಮುಸ್ಲಿಂ ಸಮುದಾಯವು ಸ್ವಾವಲಂಬಿಯಾಗುವುದರ ಜೊತೆಗೆ ಮುಖ್ಯವಾಹಿನಿಗೆ ಬರಬೇಕಿದೆ ಎಂದರು.

ವೇದಿಕೆಯಲ್ಲಿ ಮಾಜಿ ಮೇಯರ್ ಕೆ.ಅಶ್ರಫ್, ಮುಮ್ತಾಝ್ ಅಲಿಕೃಷ್ಣಾಪುರ, ಸೈಯದ್ ಭಾಷಾ ತಂಙಳ್, ಅಮೀರ್ ಅಹ್ಮದ್ ತುಂಬೆ, ಶಾಹುಲ್ ಹಮೀದ್ ಕೆ.ಕೆ., ಶಾಹುಲ್ ಹಮೀದ್ ತಂಙಳ್, ಮಹ್ಮೂದ್ ಹಾಜಿ, ಹಾಜಿ ಬಿ.ಎಚ್.ಖಾದರ್ ಮತ್ತಿತರರು ಉಪಸ್ಥಿತರಿದ್ದರು. ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹಾಜಿ ಹನೀಫ್ ಬಂದರ್ ಮತ್ತು ಮಾಧ್ಯಮ ಕಾರ್ಯದರ್ಶಿ ಅಬೂಬಕರ್ ಕುದ್ರೋಳಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X