Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 370ನೇ ವಿಧಿ : ಸರಕಾರದ ನಿರ್ಧಾರಕ್ಕೆ...

370ನೇ ವಿಧಿ : ಸರಕಾರದ ನಿರ್ಧಾರಕ್ಕೆ ಮತ್ತಷ್ಟು ಕಾಂಗ್ರೆಸ್ ಮುಖಂಡರ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ6 Aug 2019 7:04 PM IST
share
370ನೇ ವಿಧಿ : ಸರಕಾರದ ನಿರ್ಧಾರಕ್ಕೆ ಮತ್ತಷ್ಟು ಕಾಂಗ್ರೆಸ್ ಮುಖಂಡರ ಬೆಂಬಲ

ಹೊಸದಿಲ್ಲಿ, ಆ.6: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ನಿರ್ಣಯವನ್ನು ಕೇಂದ್ರ ಸರಕಾರ ಮಂಡಿಸಿದ್ದು, ವಿಪಕ್ಷ ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿತ್ತು. ಆದರೆ ಇದೀಗ ಈ ನಿರ್ಣಯವನ್ನು ಬೆಂಬಲಿಸಿ ಹಲವು ಕಾಂಗ್ರೆಸ್ ಸದಸ್ಯರು ಧ್ವನಿ ಎತ್ತಿರುವುದು ಪಕ್ಷಕ್ಕೆ ಮುಜುಗುರ ಉಂಟು ಮಾಡಿದೆ.

ಸೋಮವಾರ ನಿರ್ಣಯವನ್ನು ಕಾಂಗ್ರೆಸ್ ಮುಖಂಡರಾದ ಜನಾರ್ದನ ದ್ವಿವೇದಿ, ಭುವನೇಶ್ವರ್ ಕಲಿತಾ ಸ್ವಾಗತಿಸಿದ್ದರು. ಇದೀಗ ಮಂಗಳವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಕ್ಷೇತ್ರವಾದ ರಾಯ್‌ಬರೇಲಿಯ ಸದರ್ ಕ್ಷೇತ್ರದ ಶಾಸಕಿ ಅದಿತಿ ಸಿಂಗ್ ಈ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಜಮ್ಮು ಕಾಶ್ಮೀರವನ್ನು ರಾಷ್ಟ್ರದ ಪ್ರಧಾನ ವಾಹಿನಿಯಲ್ಲಿ ಸೇರಿಸಲು ಇದು ಸಹಾಯವಾಗುತ್ತದೆ. ಇದನ್ನು ರಾಜಕೀಯಗೊಳಿಸಬಾರದು. ಇದೊಂದು ಐತಿಹಾಸಿಕ ನಿರ್ಧಾರ ಎಂದಿದ್ದಾರೆ.

ಕಾಂಗ್ರೆಸ್‌ನ ಮತ್ತೊಬ್ಬ ನಾಯಕ, ರಾಜಸ್ತಾನದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅಶೋಕ್ ಚಾಂದ್ನ ನಿರ್ಣಯವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. “370 ವಿಧಿ ರದ್ದುಗೊಳಿಸುವುದನ್ನು ನಾನು ಸ್ವಾಗತಿಸುತ್ತೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಆದರೆ ನಿರ್ಧಾರವನ್ನು ಶಾಂತರೀತಿಯಲ್ಲಿ ಜಾರಿಗೊಳಿಸಬೇಕು, ಬಲಪ್ರಯೋಗ ನಡೆಸಬಾರದು” ಎಂದವರು ಟ್ವೀಟ್ ಮಾಡಿದ್ದಾರೆ. ಮುಂಬೈಯ ಕಾಂಗ್ರೆಸ್ ಮುಖಂಡ ಮಿಲಿಂದ್ ದಿಯೋರ, ಈ ವಿಷಯದಲ್ಲಿ ರಾಜಕೀಯವನ್ನು ಬದಿಗೆ ಸರಿಸಬೇಕಿದೆ. ದುರದೃಷ್ಟವಶಾತ್ 370ನೇ ವಿಧಿಯ ಮೇಲಿನ ಚರ್ಚೆ ಉದಾರವಾದಿಗಳು ಹಾಗೂ ಸಂಪ್ರದಾಯವಾದಿಗಳ ನಡುವಿನ ಚರ್ಚೆ ಎಂಬಂತೆ ಬಿಂಬಿಸಲ್ಪಟ್ಟಿದೆ. ತಮ್ಮ ರಾಜಕೀಯ ಸಿದ್ಧಾಂತವನ್ನು ಬದಿಗಿಟ್ಟು, ಭಾರತದ ಸಮಗ್ರತೆಗೆ, ಏಕತೆಗೆ , ಕಾಶ್ಮೀರದಲ್ಲಿ ಶಾಂತಿ ನೆಲೆಸಲು, ಅಲ್ಲಿನ ಯುವಕರಿಗೆ ಉದ್ಯೋಗ, ಕಾಶ್ಮೀರಿ ಪಂಡಿತರಿಗೆ ನ್ಯಾಯ ಒದಗಿಸಲು ಯಾವುದು ಪೂರಕವೋ ಆ ವಿಷಯದ ಕುರಿತು ಚರ್ಚೆ ನಡೆಯಬೇಕು ಎಂದಿದ್ದಾರೆ.

ಮಾಜಿ ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಅವರೂ ನಿರ್ಣಯಕ್ಕೆ ಬೆಂಬಲ ಸೂಚಿಸಿದ್ದಾರೆ. 21ನೇ ಶತಮಾನದಲ್ಲಿ 370ನೇ ವಿಧಿಯ ಅಗತ್ಯವಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಇದನ್ನು ರದ್ದುಪಡಿಸುವ ನಿರ್ಧಾರ ದೇಶದ ಹಿತಾಸಕ್ತಿಗೆ ಪೂರಕವಾಗಿದೆ. ಅಷ್ಟೇ ಅಲ್ಲ, ಭಾರತದ ಅವಿಭಾಜ್ಯ ಅಂಗವಾಗಿರುವ ಜಮ್ಮು ಕಾಶ್ಮೀರದ ಜನತೆಗೆ ಒಳಿತಾಗಲಿದೆ. ಇದನ್ನು ಶಾಂತರೀತಿಯಲ್ಲಿ ಅನುಷ್ಟಾನಗೊಳಿಸುವ ಜವಾಬ್ದಾರಿ ಸರಕಾರದ್ದಾಗಿದೆ ಎಂದವರು ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X