Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಒಕೆ, ಅಕ್ಸೈ ಚಿನ್ ಜಮ್ಮು ಕಾಶ್ಮೀರದ...

ಪಿಒಕೆ, ಅಕ್ಸೈ ಚಿನ್ ಜಮ್ಮು ಕಾಶ್ಮೀರದ ಅವಿಭಾಜ್ಯ ಅಂಗ: ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ6 Aug 2019 9:52 PM IST
share
ಪಿಒಕೆ, ಅಕ್ಸೈ ಚಿನ್ ಜಮ್ಮು ಕಾಶ್ಮೀರದ ಅವಿಭಾಜ್ಯ ಅಂಗ: ಅಮಿತ್ ಶಾ

ಹೊಸದಿಲ್ಲಿ, ಆ.6: ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಹಾಗೂ ಅಕ್ಸೈ ಚಿನ್ ಜಮ್ಮು ಕಾಶ್ಮೀರದ ಅವಿಭಾಜ್ಯ ಅಂಗವಾಗಿದೆ . ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

 ಮಂಗಳವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ಜಮ್ಮು ಕಾಶ್ಮೀರಕ್ಕಾಗಿ ಪ್ರಾಣತ್ಯಾಗ ಮಾಡಲೂ ಸರಕಾರದ ಮುಖಂಡರು ಸಿದ್ಧರಿದ್ದಾರೆ ಎಂದರು. ಕಾಶ್ಮೀರ ವಿಷಯದ ಬಗ್ಗೆ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಗೊಳಿಸಬೇಕು. ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಇದರಲ್ಲಿ ಅನುಮಾನವೇ ಇಲ್ಲ. ನಾನು ಜಮ್ಮು ಕಾಶ್ಮೀರದ ಬಗ್ಗೆ ಮಾತಾಡುವಾಗ ಪಿಒಕೆ ಮತ್ತು ಅಕ್ಸೈ ಚಿನ್ ವಿಷಯ ಕೂಡಾ ಇದರಲ್ಲಿ ಸೇರಿರುತ್ತದೆ ಎಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿಯವರ ಪ್ರಶ್ನೆಗೆ ಉತ್ತರವಾಗಿ ಶಾ ಹೇಳಿದರು.

370ನೇ ವಿಧಿಯನ್ನು ರದ್ದುಗೊಳಿಸುವ ಮಸೂದೆ ಹಾಗೂ ನಿರ್ಣಯ ಜನರ ಹಕ್ಕಿನ ಉಲ್ಲಂಘನೆ ಎಂಬ ವಿಪಕ್ಷಗಳ ಆರೋಪವನ್ನು ತಿರಸ್ಕರಿಸಿದ ಶಾ, ಕಾಶ್ಮೀರದ ಕುರಿತ ನಿರ್ಣಯವನ್ನು ಸಂಸತ್ತಿನಲ್ಲಿ ಮಂಡಿಸಲು ತನ್ನನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದರು. ಜಮ್ಮು ಮತ್ತು ಕಾಶ್ಮೀರದ ಕುರಿತು ಯಾವುದೇ ಕಾನೂನು ರೂಪಿಸಲು ದೇಶದ ಸಂಸತ್ತನ್ನು ಯಾರೂ ತಡೆಯಲಾರರು. ಕಾಶ್ಮೀರದ ಬಗ್ಗೆ ವಿಶ್ವಸಂಸ್ಥೆ ನಿರ್ಣಯ ಜಾರಿಗೊಳಿಸಬೇಕೆಂದು ಕಾಂಗ್ರೆಸ್ ಬಯಸುತ್ತಿದೆಯೇ ಎಂದು ಶಾ ಪ್ರಶ್ನಿಸಿದರು.

1948ರಲ್ಲಿ ಕಾಶ್ಮೀರದ ವಿಷಯವನ್ನು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಲಾಯಿತು. ಬಳಿಕ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭ ಶಿಮ್ಲ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದು ರಾಜಕೀಯ ವಿಷಯವಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಎಂಬ ಎಂಬ ವಿಷಯದಲ್ಲಿ ಕಾನೂನಾತ್ಮಕ ಅಥವಾ ವಿಧಾಯಕ (ಶಾಸನಸಭೆ) ಭಿನ್ನಾಭಿಪ್ರಾಯ ಇಲ್ಲ ಎಂದು ಶಾ ಸ್ಪಷ್ಟಪಡಿಸಿದರು.

ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ ಮತ್ತು ಜಮ್ಮು ಕಾಶ್ಮೀರ ಇದನ್ನು ಒಪ್ಪಿಕೊಂಡಿದೆ. ಆದ್ದರಿಂದ ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ ಕಾನೂನು ಜಾರಿಗೊಳಿಸಲು ದೇಶದ ಸಂಸತ್ತು ಸಮರ್ಥವಾಗಿದೆ. ಭಾರತದ ಸಂವಿಧಾನ ಹಾಗೂ ಜಮ್ಮು ಕಾಶ್ಮೀರದ ಸಂವಿಧಾನದಲ್ಲಿ ನಿರ್ಧರಿಸಿರುವಂತೆ ಜಮ್ಮು ಮತ್ತು ಕಾಶ್ಮೀರದ ಗಡಿಯೊಳಗೆ ಪಿಒಕೆ ಹಾಗೂ ಅಕ್ಸೈ ಚಿನ್ ಪ್ರದೇಶ ಬರುತ್ತದೆ ಎಂದು ಶಾ ಹೇಳಿದರು.

ಈ ಎರಡೂ ಭಾಗಗಳು ಈಗ ಪಾಕಿಸ್ತಾನ ಮತ್ತು ಚೀನಾದ ನಿಯಂತ್ರಣದಲ್ಲಿವೆ. ಈ ಸಂದರ್ಭ ಮಧ್ಯಪ್ರವೇಶಿಸಿದ ಡಿಎಂಕೆಯ ಟಿಆರ್ ಬಾಲು, ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಇರುವಂತೆ ಭಾಸವಾಗುತ್ತದೆ. ನಮ್ಮ ಸಹೋದ್ಯೋಗಿ ಫಾರೂಕ್ ಅಬ್ದುಲ್ಲಾ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇದ್ದಾರೆಯೇ ಅಥವಾ ಬಂಧನದಲ್ಲಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದರು. ಇದಕ್ಕೆ ಉತ್ತರಿಸಿದ ಶಾ, ಇದರಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಲಡಾಕ್ ಜನರ ಕೋರಿಕೆಯಂತೆ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಗಿದೆ. ಕೇಂದ್ರಾಡಳಿತ ಪ್ರದೇಶ ಲಡಾಕ್‌ನಲ್ಲಿ ಅಕ್ಸೈ ಚಿನ್ ಸೇರಿದೆ.

ಲಡಾಕ್‌ನ ಎರಡು ಹಿಲ್ ಕೌನ್ಸಿಲ್‌ಗಳು ಮುಂದುವರಿಯಲಿದ್ದು ಅದರ ಅಧ್ಯಕ್ಷರಿಗೆ ಸಚಿವರ ದರ್ಜೆ ನೀಡಲಾಗುವುದು. ಹಿಲ್ ಮೆಂಬರ್‌ಗಳು ತಮ್ಮ ಪ್ರದೇಶದ ಸಮಸ್ಯೆಗೆ ಧ್ವನಿಯಾಗಲಿದ್ದಾರೆ. ಇದರಲ್ಲಿ ಯಾರ ಶಾಸಕಾಂಗ ಹಕ್ಕಿನ ಮೇಲೂ ಪರಿಣಾಮವಾಗಿಲ್ಲ ಎಂದರು. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಹೊಂದಿರುವ ಕೇಂದ್ರಾಡಳಿತ ಪ್ರದೇಶವಾಗಲಿದೆ. ಶಾಸಕರು, ಮುಖ್ಯಮಂತ್ರಿ ಇರುತ್ತಾರೆ ಎಂದು ಶಾ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X