Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಿಕೆ ಉದ್ಯಮವಾಗದೆ ಸೇವಾ ಮಾಧ್ಯಮವಾಗಿ...

ಪತ್ರಿಕೆ ಉದ್ಯಮವಾಗದೆ ಸೇವಾ ಮಾಧ್ಯಮವಾಗಿ ಉಳಿಯಲಿ-ಸಂಜೀವ ಮಠಂದೂರು

ಪುತ್ತೂರಿನಲ್ಲಿ ಪತ್ರಿಕಾ ದಿನಾಚರಣೆ; ಮೀಡಿಯಾ ಎಟ್ ವಿಲೇಜ್ ಅಭಿಯಾನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ6 Aug 2019 10:56 PM IST
share
ಪತ್ರಿಕೆ ಉದ್ಯಮವಾಗದೆ ಸೇವಾ ಮಾಧ್ಯಮವಾಗಿ ಉಳಿಯಲಿ-ಸಂಜೀವ ಮಠಂದೂರು

ಪುತ್ತೂರು: ಪ್ರಜಾಪ್ರಭುತ್ವದ ಮೌಲ್ಯವನ್ನು ಹೆಚ್ಚಿಸುವಲ್ಲಿ ಮಹತ್ವ ಪಾತ್ರವಹಿಸುತ್ತಿರುವ ಪತ್ರಿಕಾರಂಗ ಸಂವಿಧಾನದ ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸುತ್ತದೆ. ಪತ್ರಿಕೋದ್ಯಮ ಉದ್ದಿಮೆಯಾಗಿ ಪರಿವರ್ತಿತವಾಗದೆ ಸೇವಾ ಮಾಧ್ಯಮವಾಗಿಯೇ ಉಳಿಯಬೇಕಾದದ್ದು ಇಂದಿನ ಅನಿವಾರ್ಯತೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. 

ಅವರು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಸಂಪ್ಯದ ಆರ್ಯಾಪು ಸಿಎ ಬ್ಯಾಂಕ್ ಸಭಾ ಭವನದಲ್ಲಿ ಮಂಗಳವಾರ ನಡೆದ ಆರ್ಯಾಪು ಗ್ರಾ.ಪಂ. ಮತ್ತು ಆರ್ಯಾಪು ಸಹಕಾರಿ ಸಂಘದ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ - 2019, `ಮೀಡಿಯಾ ಎಟ್ ವಿಲೇಜ್' ಅಭಿಯಾನ ಉದ್ಘಾಟನೆ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಜನತೆಗೆ ಮಾಧ್ಯಮ ವ್ಯವಸ್ಥೆಯ ಕುರಿತು ಒಂದಷ್ಟು ವಿಚಾರಗಳನ್ನು ತಿಳಿಸಿಕೊಡುವ ಯೋಚನೆಯೊಂದಿಗೆ ಪುತ್ತೂರು ಪತ್ರಕರ್ತರ ಸಂಘ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಪುತ್ತೂರಿನ ಪತ್ರಕರ್ತರು ತಮ್ಮತನ ಉಳಿಸಿ ಕೊಂಡಿದ್ದಾರೆ. ವೃತ್ತಿಧರ್ಮ ಮಾತ್ರವಾಗಿರದೆ ಸಮಾಜ ಧರ್ಮವೂ ಉಳಿಯಬೇಕು ಎನ್ನುವ ಅನುಕರಣೀಯ ಯೋಜನೆಯ ಮೂಲಕದ ಕಾಳಜಿ ಶ್ಲಾಘನೀಯ ಎಂದರು.

ಭಾರತದ ಆತ್ಮ ಗ್ರಾಮದಲ್ಲಿದೆ- ಕೃಷ್ಣಭಟ್

ಪ್ರಧಾನ ಉಪನ್ಯಾಸಕರಾಗಿ ಭಾಗವಹಿಸಿ ಮೀಡಿಯಾ ಎಟ್ ವಿಲೇಜ್ ಅಭಿಯಾನ ಉದ್ಘಾಟಿಸಿದ ಬೆಂಗಳೂರಿನ ಹಿರಿಯ ಪತ್ರಕರ್ತ ಕೃಷ್ಣ ಭಟ್, ಭಾರತದ ನಿಜವಾದ ಆತ್ಮ ಗ್ರಾಮಗಳಲ್ಲಿದೆ. ಗ್ರಾಮೀಣ ಭಾಗದ ಕಥೆಗಳು ಹೊಸ ಭರವಸೆ ಹುಟ್ಟಿಸುತ್ತವೆ. ಪುತ್ತೂರಿನ ಪತ್ರಕರ್ತರು ಸಮಾಜದ ಜತೆ ಬೆರೆತುಕೊಂಡು ದೇಶಕ್ಕೆ ಮಾದರಿಯಾಗುವ ಹೊಸ ಪರಿಕಲ್ಪನೆಯಯನ್ನು ಆರಂಭಿಸಿದ್ದಾರೆ. ಇಂದು ಮಾಧ್ಯಮಗಳು ಜನರ ಬದುಕನ್ನು ತುಂಬಾ ಪ್ರಭಾವಿಸಿವೆ. ಬದುಕಿನ ಅವಿಭಾಜ್ಯ ಅಂಗವಾಗಿ ಮಾಧ್ಯಮ ಗುರುತಿಸಿಕೊಂಡಿದೆ. ಪತ್ರಕರ್ತರು ಸ್ವಾರ್ಥಕ್ಕಾಗಿ ಏನು ಮಾಡದಿದ್ದರೂ ಸಮಾಜಕ್ಕಾಗಿ ಮಾಡಿದ್ದಾರೆ. ಒಬ್ಬರನ್ನೊಬ್ಬರು ಬೆಸೆಯುವ ಕೆಲಸ ಮಾಧ್ಯಮದ ಮೂಲಕ ಆಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಪ್ಯದ ಹಿರಿಯ ನಾಟಿವೈದ್ಯೆ ಪದ್ಮಾವತಿ ಪೂಜಾರಿ ಹಾಗೂ ಡಾಕ್ಟರೇಟ್ ಪದವಿ ಪಡೆದ ದೈವನರ್ತಕ ರವೀಶ್ ಪಡುಮಲೆ ಅವರನ್ನು ಸನ್ಮಾನಿಸಲಾಯಿತು ಹಾಗೂ ಸಂಪನ್ಮೂಲ ವ್ಯಕ್ತಿಯಾದ ಹಿರಿಯ ಪತ್ರಕರ್ತ ಕೃಷ್ಣ ಭಟ್ ಅವರನ್ನು ಗೌರವಿಸಲಾಯಿತು. ಸದಸ್ಯರಾದ ಶ್ರವಣ್ ಕುಮಾರ್ ನಾಳ ಹಾಗೂ ರಾಜೇಶ್ ಪಟ್ಟೆ ಸನ್ಮಾನ ಪತ್ರ ವಾಚಿಸಿದರು. ಸದಸ್ಯ ಕುಮಾರ್ ಕಲ್ಲಾರೆ ಸನ್ಮಾನಿತರ ಪರಿಚಯ ಮಾಡಿದರು.

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ತಿಂಗಳಾಡಿ ಅಧ್ಯಕ್ಷತೆ ವಹಿಸಿದ್ದರು. ಆರ್ಯಾಪು ಗ್ರಾ. ಪಂ. ಅಧ್ಯಕ್ಷೆ ಗೀತಾ ಚೆನ್ನಪ್ಪ ಮರಿಕೆ, ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಸಕ್ತಿವೇಲು, ಗ್ರಾ.ಪಂ. ಉಪಾಧ್ಯಕ್ಷ ವಸಂತ ಶ್ರೀದುರ್ಗ ಮಾತನಾಡಿದರು.  

ಸಂಘದ ಕಾರ್ಯದರ್ಶಿ ಅನೀಶ್ ಮರೀಲ್ ಸ್ವಾಗತಿಸಿ, ಸದಸ್ಯರಾದ ಸಿದ್ದೀಕ್ ನೀರಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.  ಶಶಿಧರ್ ರೈ ಕುತ್ಯಾಳ ವಂದಿಸಿದರು. ಸಂಶುದ್ದೀನ್ ಸಂಪ್ಯ ಕಾರ್ಯಕ್ರಮ ನಿರೂಪಿಸಿದರು.

ಸಂವಾದ ಕಾರ್ಯಕ್ರಮ

ಸಭಾ ಕಾರ್ಯಕ್ರಮದ ಬಳಿಕ ಸಾಮಾಜಿಕ ಸ್ವಾಸ್ಥ್ಯ - ಮಾಧ್ಯಮಗಳ ಪಾತ್ರ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು.  ಪತ್ರಕರ್ತ ಮೇಘಾ ಪಾಲೆತ್ತಾಡಿ ಸಂವಾದ ನಿರ್ವಹಿಸಿದರು. ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು, ನವೋದಯ ಸ್ವಸಹಾಯ ಸಂಘದ ಸದಸ್ಯರು, ಗ್ರಾಪಂ ಸದಸ್ಯರು ಮತ್ತು ಸಾರ್ವಜನಿಕರು ಸಂವಾದದಲ್ಲಿ ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X