Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಸತಿಗಾಗಿ ಆ.14ರ ರಾತ್ರಿ...

ವಸತಿಗಾಗಿ ಆ.14ರ ರಾತ್ರಿ ಸ್ವಾತಂತ್ರೋತ್ಸವ ಆಚರಣೆ: ಎಚ್.ಎಸ್.ದೊರೆಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ6 Aug 2019 11:24 PM IST
share
ವಸತಿಗಾಗಿ ಆ.14ರ ರಾತ್ರಿ ಸ್ವಾತಂತ್ರೋತ್ಸವ ಆಚರಣೆ: ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ಆ.6: ಭೂಮಿ ಮತ್ತು ವಸತಿಯ ಹಕ್ಕನ್ನು ಪ್ರತಿಪಾದಿಸಲು ಆ.14ರ ರಾತ್ರಿ ಸ್ವಾತಂತ್ರ ಉದ್ಯಾನವನದಲ್ಲಿ ಸ್ವಾತಂತ್ರೋತ್ಸವ ಆಚರಿಸಲು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನಿರ್ಧರಿಸಿದೆ ಎಂದು ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಭೂ ರಹಿತರಿಗೆ ಇಲ್ಲಿಯವರೆಗೂ ಯಾವುದೇ ರೀತಿಯ ಭೂಮಿಯನ್ನು ಮಂಜೂರಾತಿ ಮಾಡದೆ ನಿರ್ಲಕ್ಷ ತಾಳಿದೆ. ಬಡ ಜನರು ಸರಕಾರಿ ಹಾಗೂ ಖಾಸಗಿ ಜಾಗದಲ್ಲಿ ಕಟ್ಟಿಕೊಂಡಿರುವ ಮನೆ, ಗುಡಿಸಲುಗಳನ್ನು 94 ಸಿ ಯೋಜನೆಯಡಿ ಸಕ್ರಮಗೊಳಿಸಿ ಹಕ್ಕುಪತ್ರಗಳನ್ನು ನೀಡದೆ ವಂಚಿಸುತ್ತಿದೆ ಎಂದು ಆರೋಪಿಸಿದರು.

ಜನರನ್ನು ಒಕ್ಕಲೆಬ್ಬಿಸುವ ಕಿರುಕುಳ ಮಾತ್ರ ಎಲ್ಲ ಕಡೆ ಆರಂಭವಾಗಿದೆ. ವಿಶೇಷವಾಗಿ ಅರಣ್ಯ ಇಲಾಖೆ ಸಾವಿರಾರು ಭೂಮಿ ಕಬಳಿಸಿರುವ ಬಲಾಢ್ಯರನ್ನು ಬಿಟ್ಟು, ಬದುಕಿಗೆ ಗೂಡು ಕಟ್ಟಿಕೊಂಡಿರುವ ಬಡಜನರ ಮೇಲೆ ಬುಲ್ಡೋಜರ್ ಮೂಲಕ ಯುದ್ಧ ಸಾರಿದೆ. ದೇಶವು 73ನೇ ಸ್ವಾತಂತ್ರ ದಿನಾಚರಣೆಯನ್ನು ಆಚರಿಸುತ್ತಿದೆ. ಆದರೆ ಬಡವರಿಗೆ ಇಂದಿಗೂ ಸ್ವಾತಂತ್ರ ಸಿಕ್ಕಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಭೂಮಿ ಮತ್ತು ನಿವೇಶನಗಳ ಮಂಜೂರಾತಿಗಾಗಿ ಬಡಜನರು ನಡೆಸಿದ ನಿರಂತರ ಹೋರಾಟಗಳ ಹಿನ್ನೆಲೆಯಲ್ಲಿ ಅಕ್ರಮ ಅಕ್ರಮದ ಹೆಸರಿನಲ್ಲಿ ಸರಕಾರದ ಫಾರಂ 50-53 ಹಾಗೂ 94ಸಿ, 94ಸಿಸಿ ಯೋಜನೆಗಳಡಿ ಅರ್ಜಿಗಳನ್ನು ಕರೆದು ಮೂರು ದಶಕಕ್ಕೂ ಹೆಚ್ಚು ಕಾಲವಾಯಿತು. ಲಕ್ಷಾಂತರ ಅರ್ಜಿಗಳು ಅಧಿಕಾರಿಗಳ ಟೇಬಲ್ ಮೇಲೆ ಇವೆ. ಉಳ್ಳವರ ಅಕ್ರಮ ಒತ್ತುವರಿಗಳು ಸಕ್ರಮವಾಗಿದ್ದು, ಬಡವರ ಸಕ್ರಮ ಉತ್ತುವರಿಗಳು ಅಕ್ರಮ ಎನಿಸಿಕೊಂಡು ತಿರಸ್ಕೃತವಾಗಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಫಾರಂ ನಂ 57ರ ಅರ್ಜಿ ಸಲ್ಲಿಸಲು ನೀಡಿದ್ದ 1 ವರ್ಷ ಅವಧಿಯಲ್ಲಿ ಹೆಚ್ಚು ಭಾಗ ವ್ಯರ್ಥವಾಗಿ, ಬಹಳಷ್ಟು ಬಗರ್‌ಹುಕುಂ ರೈತರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಅಲ್ಲದೆ, ತ್ವರಿತ ಗತಿಯಲ್ಲಿ ಬಡವರ ಭೂ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ರಚಿಸಲಾಗಿರುವ ‘ಹೈ ಲೆವೆಲ್ ಸಮಿತಿ’ಯನ್ನು ‘ಹೈ ಪವರ್ ಸಮಿತಿ’ಯನ್ನಾಗಿ ಮಾರ್ಪಡಿಸಿ, ಅದು ನಿಯಮಿತವಾಗಿ ಕೆಲಸ ಮಾಡುವಂತೆ ಆದೇಶಿಸಬೇಕು ಎಂದು ಅವರು ಆಗ್ರಹಿಸಿದರು.

ಈ ನಿಟ್ಟಿನಲ್ಲಿ ಆಗಸ್ಟ್ 14ರಂದು ನಡುರಾತ್ರಿ ಸ್ವಾತಂತ್ರ ಉದ್ಯಾನವನದಲ್ಲಿ ಮಧ್ಯೆರಾತ್ರಿ ಸ್ವಾತಂತ್ರೋತ್ಸವ ಆಚರಿಸಲಾಗುತ್ತದೆ. ಆ.14ರ ಸೂರ್ಯಾಸ್ತದೊಂದಿಗೆ ಹಣತೆಯ ಮೆರವಣಿಗೆ, ರೈಲು ನಿಲ್ದಾಣದಿಂದ ಸ್ವಾತಂತ್ರ ಉದ್ಯಾನವನದ ವರೆಗೆ ತೆರಳಲಿದೆ. ಇಡೀ ರಾತ್ರಿ ಪ್ರತಿರೋಧ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಂದ್ರಶೇಖರ ಆಝಾದ ಆಗಮಿಸಲಿದ್ದಾರೆ ಎಂದು ಹೇಳಿದರು.

ಸಮಿತಿ ಹಕ್ಕೊತ್ತಾಯಗಳು

* ಭೂ ಮಂಜೂರಾತಿ ಸಮಿತಿ ಪುನರ್ ರಚನೆ.

* ಹಕ್ಕುಪತ್ರ ನೀಡುವ ಪ್ರಕ್ರಿಯೆ ಪೂರ್ಣಗೊಳಿಸುವುದು.

* ಬಾಲಸುಬ್ರಮಣ್ಯಂ ವರದಿ ಜಾರಿ

* ಭೂ ಸ್ವಾಧೀನ ಕಾಯ್ದೆಯ ಇತ್ತೀಚಿನ ತಿದ್ದುಪಡಿ ರದ್ದು.

* ಕಸ್ತೂರಿ ರಂಗನ್ ವರದಿ ರದ್ದು.

* ಜಿಂದಾಲ್ ಕಂಪನಿಗೆ ಭೂಮಿ ನೀಡಬಾರದು.

* ಬಡವರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ ನಿಲ್ಲಲಿ.

* ಹೆಚ್ಚುವರಿ ಭೂಮಿಗಳ ಪಟ್ಟಿ ಮಾಡಿ, ಬಡವರ ವಾಸಕ್ಕೆ ಶರತ್ತುಬದ್ಧ ಉಳುಮೆಗೆ ಮಂಜೂರು.

ಬಡವರ ಕೆಲಸ ಎಂದರೆ ಸರಕಾರ ಹಾಗೂ ಅಧಿಕಾರಿಗಳಿಗೆ ತಾತ್ಸಾರ. ಸ್ವಾತಂತ್ರವು ದೇಶದ ಶ್ರೀಮಂತರಿಗೆ, ಬಂಡವಾಳಶಾಹಿಗಳಿಗೆ ಬಂದಿದೆ. ಇನ್ನೂ ಕಡು ಬಡವರಿಗೆ ಬಂದಿಲ್ಲ.

-ಎಚ್.ಎಸ್.ದೊರೆಸ್ವಾಮಿ, ಸ್ವಾತಂತ್ರ ಹೋರಾಟಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X