ಹುಬ್ಬಳ್ಳಿ: ಧಾರಾಕಾರ ಮಳೆಯಿಂದ 300 ಮನೆಗಳಿಗೆ ಹಾನಿ
ಹುಬ್ಬಳ್ಳಿ, ಆ.7: ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸುಮಾರು 300 ಮನೆಗಳಿಗೆ ಹಾನಿಯಾಗಿರುವುದು ವರದಿಯಾಗಿದೆ.
ಇಂದು ಬೆಳಗ್ಗೆ 7 ಮನೆಗಳಿಗೆ ಹಾನಿಯಾಗಿದೆ.ಕಮರಿಪೇಟೆಯಲ್ಲಿ ನಾಲೆ ಕುಸಿತದಿಂದ 240 ಕೆ.ವಿ.ಸಾಮರ್ಥ್ಯದ ವಿದ್ಯುತ್ ಪರಿವರ್ತಕ ಸ್ಥಳಾಂತರ ಕಾರ್ಯವನ್ನು ಹೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿ ಕೈಗೊಂಡಿದ್ದಾರೆ. ಉಣಕಲ್ ಕೆರೆ ಕೋಡಿ ಬಿದ್ದಿರುವುದರಿಂದ ಕೆಳಭಾಗದ ಜನರನ್ನು ಮುಂಚಿತವಾಗಿಯೇ ಜಾಗರೂಕರನ್ನಾಗಿಸಿದ್ದರಿಂದ ಯಾವುದೇ ತೊಂದರೆ ಉಂಟಾಗಿಲ್ಲ. ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕರಾದ ಪ್ರಸಾದ ಅಬ್ಬಯ್ಯ ಅವರು ಹಳೆ ಹುಬ್ಬಳ್ಳಿ ಇಸ್ಲಾಂಪುರ ಪ್ರದೇಶದಲ್ಲಿ ಮನೆಗಳಿಗೆ ಹಾನಿಯಾದ ಸುಮಾರು 12ಕ್ಕೂ ಹೆಚ್ಚು ಕುಟುಂಬಗಳಿಗೆ ಪರಿಹಾರದ ಚೆಕ್ ಗಳನ್ನು ವಿತರಿಸಿದರು ಎಂದು ಅತಿವೃಷ್ಟಿ ಪರಿಹಾರದ ನೋಡಲ್ ಅಧಿಕಾರಿ, ಹೆಸ್ಕಾಂ ಜನರಲ್ ಮ್ಯಾನೇಜರ್ ರಮೇಶ ದೇಸಾಯಿ ತಿಳಿಸಿದ್ದಾರೆ.
Next Story