Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಷ್ಮಾ ಸ್ವರಾಜ್ ನಿಧನ: ದೇವೇಗೌಡ,...

ಸುಷ್ಮಾ ಸ್ವರಾಜ್ ನಿಧನ: ದೇವೇಗೌಡ, ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ವಾರ್ತಾಭಾರತಿವಾರ್ತಾಭಾರತಿ7 Aug 2019 6:00 PM IST
share
ಸುಷ್ಮಾ ಸ್ವರಾಜ್ ನಿಧನ: ದೇವೇಗೌಡ, ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಬೆಂಗಳೂರು, ಆ. 7: ಕೇಂದ್ರದ ಮಾಜಿ ಸಚಿವೆ ಹಾಗೂ ಹಿರಿಯ ರಾಜಕೀಯ ನಾಯಕ ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾತೃ ಹೃದಯಿ ಮಹಿಳೆ: ಸಹೋದರಿ ಸುಷ್ಮಾ ಸ್ವರಾಜ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ತೀವ್ರ ನೋವುಂಟಾಗಿದೆ. ಅವರನ್ನು ನೋಡಿದ ತಕ್ಷಣ ಎಲ್ಲರಲ್ಲೂ ತಾಯಿ ಮನೋಭಾವ ಮೂಡುತಿತ್ತು. ಆಕೆ ಅತೀ ಚಿಕ್ಕ ವಯಸ್ಸಿನಲ್ಲೇ ಹರಿಯಾಣ ರಾಜ್ಯದಲ್ಲಿ ಸಂಪುಟ ದರ್ಜೆ ಸಚಿವೆ ಆಗಿ ಉತ್ತಮ ಕಾರ್ಯ ನಿರ್ವಹಿಸಿದ್ದರು ಎಂದು ಮಾಜಿ ಪ್ರಧಾನಿ ದೇವೇಗೌಡ ಸ್ಮರಿಸಿದ್ದಾರೆ.

ಈ ದೇಶದ ಎರಡನೇ ಮಹಿಳಾ ವಿದೇಶಾಂಗ ಸಚಿವೆಯಾಗಿಯೂ ಉತ್ತಮ ಕಾರ್ಯ ನಿರ್ವಹಿಸಿದ್ದರು. ಸುಷ್ಮಾ ನಿಧನದಿಂದ ನಮ್ಮ ದೇಶ ಒಬ್ಬ ಧೈರ್ಯವಂತೆ ಹಾಗೂ ಮಾತೃ ಹೃದಯಿ ಹೆಣ್ಣು ಮಗಳನ್ನ ಕಳೆದು ಕೊಂಡಿದ್ದೀವಿ. ಅವರ ನಿದನದಿಂದ ರಾಷ್ಟ್ರಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ದೇವೇಗೌಡ ಪ್ರಾರ್ಥಿಸಿದ್ದಾರೆ.

ತುಂಬಲಾರದ ನಷ್ಟ: ಅಪ್ರತಿಮ ವಾಗ್ಮಿ, ಅಸಾಧಾರಣ ರಾಜಕಾರಣಿ, ಅದ್ಭುತ ಸಂಸದೀಯ ಪಟು, ವಿನಯ, ಧೈರ್ಯ, ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದ ಹಿರಿಯರಾಜಕಾರಣಿ ಸುಷ್ಮಾ ಸ್ವರಾಜ್‌ಅವರು ಅಕಾಲಿಕ ನಿಧನ ಆಘಾತವಾಗಿದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

1980ರಲ್ಲಿ ನಾನು ಜನತಾಪಕ್ಷದಿಂದ ಲೋಕಸಭೆಗೆ ಸ್ಪರ್ಧಿಸಿರುವ ಸಂದರ್ಭದಲ್ಲಿ ಸುಷ್ಮಾ ಸ್ವರಾಜ್ ಹಳಿಯಾಳ, ದಾಂಡೇಲಿ ಹಾಗೂ ಯಲ್ಲಾಪುರಗಳಲ್ಲಿ ನನ್ನ ಪರವಾಗಿ ಪ್ರಚಾರ ಸಭೆಗಳಲ್ಲಿ ಭಾಷಣ ಮಾಡಿದ್ದು ನನ್ನ ಸ್ಮತಿಪಟಲದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಸ್ಮರಿಸಿದ್ದಾರೆ.

ಯುವ ಸಮುದಾಯಕ್ಕೆ ಮಾದರಿ: ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ತಮ್ಮ ಹೋರಾಟ ಹಾಗೂ ಬದುಕಿನ ಮೂಲಕ ದೇಶದ ಯುವ ಸಮುದಾಯಕ್ಕೆ ಮಾದರಿಯಾಗಿದ್ದರು ಎಂದು ಬಣ್ಣಿಸಿದ್ದಾರೆ.

ಮಾತೃ ಹೃದಯ, ದಿಟ್ಟತನ ಎರಡೂ ಮೇಳೈಸಿದ್ದ ಸುಷ್ಮಾ ಅವರು ಚುರುಕುಮತಿ ಹಾಗೂ ಧೀರೋದಾತ್ತ ರಾಜಕಾರಣಿ ಆಗಿದ್ದರು. ಹೀಗಾಗಿಯೇ ಸಣ್ಣ ವಯಸ್ಸಿನಲ್ಲೇ ಶಾಸನಸಭೆ ಪ್ರವೇಶಿಸಿದರು. ಪಕ್ಷ, ತತ್ವ-ಸಿದ್ಧಾಂತ ಮೀರಿ ಸರ್ವರನ್ನೂ ಒಳಗೊಳ್ಳುವ ಅವರ ಹೃದಯ ವೈಶಾಲ್ಯ, ಸಮನ್ವಯ ಭಾವ ಎಲ್ಲರ ಮನಗೆದ್ದಿತ್ತು.

ನೇರ ನಡೆ-ನುಡಿಗೆ ಹೆಸರಾಗಿದ್ದ ಅವರು ಉತ್ತಮ ಸಂಸದೀಯ ಪಟುವಾಗಿದ್ದರು. ಅವರ ವಾಗ್ಝರಿ ದೇಶ-ವಿದೇಶಗಳ ಮನಗೆದ್ದಿತ್ತು. ಕೇಂದ್ರ ಸಚಿವ ಸ್ಥಾನ, ದಿಲ್ಲಿ ಸಿಎಂ ಪದವಿ ಸೇರಿದಂತೆ ತಾವು ವಹಿಸಿಕೊಂಡ ಎಲ್ಲ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು. ಅಂಥ ಸುಷ್ಮಾ ಸ್ವರಾಜ್ ಅವರ ಅಗಲಿಕೆ ಅತೀವ ನೋವು ತಂದಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಸುಷ್ಮಾ ಸ್ವರಾಜ್ ಅವರ ನಿಧನ ಇಡೀ ದೇಶಕ್ಕೆ ಭರಿಸಲಾರದ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಬಂಧುಗಳು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

‘ಕೇಂದ್ರದ ಮಾಜಿ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಸ್ವ ಸಾಮರ್ಥ್ಯದಿಂದ ರಾಜಕೀಯವಾಗಿ ಎತ್ತರೆತ್ತರಕ್ಕೆ ಬೆಳೆಯುತ್ತಿದ್ದಾಗಲೇ ಅವರ ಬದುಕಿನ ಪಯಣ ಹಠಾತ್ತನೆ ಕೊನೆಗೊಂಡಿದ್ದು ವಿಷಾದನೀಯ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು’

-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X