Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಎರಡು ದಿನಗಳ ಮಳೆಗೆ ಹೆಸ್ಕಾಂ...

ಭಟ್ಕಳ: ಎರಡು ದಿನಗಳ ಮಳೆಗೆ ಹೆಸ್ಕಾಂ ಇಲಾಖೆ 12 ಲಕ್ಷ ರೂ. ಹಾನಿ

ಮುನ್ನೆಚ್ಚರಿಕೆ ಕ್ರಮವಾಗಿ ಗುರುವಾರವೂ ಶಾಲೆಗಳಿಗೆ ರಜೆ

ವಾರ್ತಾಭಾರತಿವಾರ್ತಾಭಾರತಿ7 Aug 2019 10:45 PM IST
share
ಭಟ್ಕಳ: ಎರಡು ದಿನಗಳ ಮಳೆಗೆ ಹೆಸ್ಕಾಂ ಇಲಾಖೆ 12 ಲಕ್ಷ ರೂ. ಹಾನಿ

ಭಟ್ಕಳ: ಕಳೆದ ಮೂರ್ನಾಲ್ಕು ದಿನಗಳಿಂದ ಬಿರುಗಾಳಿಯಿಂದ ಕೂಡಿದ ಮಳೆಯಿಂದಾಗಿ ಭಟ್ಕಳ ತಾಲೂಕಿನಾದ್ಯಂತ ಸುಮಾರು 44 ವಿದ್ಯುತ್ ಕಂಬ ಹಾಗೂ ಪರಿವರ್ತಕಗಳು ಹಾನಿಗೊಳಗಾಗಿದ್ದು ಅಂದಾಜು 12 ಲಕ್ಷ ರೂ. ಹಾನಿ ಸಂಭವಿಸಿದೆ ಎಂದು ಹೆಸ್ಕಾಂ ಇಲಾಖೆಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಆ. 6 ರಂದು ಮಧ್ಯಾಹ್ನದಿಂದ ಆ.7ರ ಬೆಳಗ್ಗೆ 10.30ರವರೆಗೆ  ಸುಮಾರು 21ಕಂಬಗಳು (ಎಸ್ ಎಸ್ ಕಾಮತ್ 1, ಗಂಜಿಗೇರಿ 1, ಗೊರಿಕಲ್ 3, ಮುಂಡಳ್ಳಿ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪ 2, ಕಟಗಾರಕೊಪ್ಪ 4, ಬೆದ್ರಮಣಿ 2, ಅಗ್ಗಾ 4, ಕಾಮೇಶ್ವರಿ 4 ಹಾಗೂ 3 ಪರಿವರ್ತಕ, ಹಾನಿಗೊಳಗಾಗಿದ್ದು, ಒಟ್ಟೂ 5.3ಲಕ್ಷಗಳು ಹಾನಿ ಉಂಟಾಗಿದೆ. ಎರಡು ದಿನದಲ್ಲಿ 44 ಸಂಖ್ಯೆಯ ಕಂಬ ಹಾಗೂ ಪರಿವರ್ತಕಗಳು ಸೇರಿ ಸುಮಾರು 12 ಲಕ್ಷ ಹಾನಿ ಆಗಿರುತ್ತದೆ. ವಿದ್ಯುತ್ ಪುನರ್ ಸಂಪರ್ಕ ನೀಡುವ ಕಾರ್ಯವೂ ಚಾಲ್ತಿಯಲ್ಲಿರುತ್ತದೆ. ಎಂದು ಹೆಸ್ಕಾಂ ಇಲಾಖೆಯ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಟ್ಕಳ ತಾಲೂಕಿನ ತಲಗೋಡ ಗ್ರಾಮದಲ್ಲಿ  ಸುರಿದ ಭಾರಿ ಮಳೆ ಗಾಳಿಗೆ ತಲಗೋಡ ಗ್ರಾಮದ ನಿವಾಸಿಯಾದ ಮಂಜುನಾಥ ಗಣಪತಿ ಆಚಾರಿ ಇವರ ವಾಸ್ತವದ ಮನೆಯ ಮೇಲೆ ಕಾಡು ಜಾತಿಯಾ ಮರ ಬಿದ್ದು 5000 ರೂ. ಹಾನಿ ಆಗಿರುತ್ತದೆ. ಯಾವುದೇ ಜನ ಜಾನುವಾರುಗಳಿಗೆ ತೊಂದರೆ ಆಗಿರುವುದಿಲ್ಲ. ತಾಲ್ಲೂಕಿನ ಹೆಬಳೆ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಸುರಿದ ಭಾರಿ ಮಳೆ ಗಾಳಿಗೆ ಸೈಯದ್ ರಪಿಕ್ ಸೈಯದ್ ಹುಸೇನ್ ಇವರ ಮನೆಯ ಮೇಲೆ ಮರ ಬಿದ್ದು 3000 ರೂ. ಹಾನಿಯಾಗಿರುತ್ತದೆ. ಮತ್ತು ದೇವಿದಾಸ ರಾಮ ನಾಯ್ಕ್ ಇವರ ಮನೆಯ ಹಂಚು ಮತ್ತು ಸಿಮೆಂಟ್ ಸಿಟು ಹಾರಿ ಹೊಗಿದ್ದು ಅಂದಾಜು 3000 ರೂ. ಹಾನಿಯಾಗಿರುತ್ತದೆ. 

ಕೈಕಿಣಿ ಗ್ರಾಮದ ಮಠದಹಿತ್ಲು ಮಜರೇಯ ನಿವಾಸಿ ತಿಮ್ಮು ಗೊಯ್ಡಾ ಮೊಗರ್  ಇವರಾ ವಾಸ್ತವ್ಯದ ಮನೆಯು ಗಾಳಿ ಮಳೆಗೆ ಪೂರ್ತಿ ಕುಸಿದು ಬಿದ್ದಿದ್ದು ಹಾನಿಯಾ ಅಂದಾಜು ಮೊತ್ತ 81000 ರೂ. ಎಂದು ಅಂದಾಜಿಸಲಾಗಿದೆ. ಇದೇ ಗ್ರಾಮದ ನಾಗಮ್ಮ ಧರ್ಮ ಮೊಗರ್ ಇವರ ಮನೆ ಮೆಲೆ ಮಾರ ಬಿದ್ದು 8000 ರೂ ಹಾನಿಯಾಗಿದೆ. ಕಂಬ್ಲೂರ್ ಮಜರೆಯ ನಾರಾಯಣ್ ಮಾಸ್ತಿ ದೇವಾಡಿಗ ಇವರ ಮನೆ ಗೋಡೆ ಕುಸಿದು 20000  ರೂ ಹಾನಿಯಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

ಗುರುವಾರವೂ ಶಾಲೆಗಳಿಗೆ ರಜೆ

ಮಳೆಯಿಂದಾಗಿ ತಾಲೂಕಿನಾದ್ಯಂತ ಹಲವು ಗ್ರಾಮಗಳು ಸಂಪರ್ಕವನ್ನು ಕಡಿದುಕೊಂಡಿದ್ದು ಆ.6 ಮತ್ತು 7 ರಂದು ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿತ್ತು. ಬುಧವಾರವೂ ಮಳೆ ಹಾಗೂ ಬಿರುಗಾಳಿ ಉಂಟಾಗಿರುವ ಪರಿಣಾಮ ಅತಿವೃಷ್ಟಿಯಿಂದಾಗಿ ಹಲವು ಕಡೆ ನೀರಿನ ಪ್ರವಾಹ ಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಕೆ.ಹರೀಶ್ ಕುಮಾರ್ ಉತ್ತರಕನ್ನಡ ಕಾರವಾರ ಶೈಕ್ಷಣಿಕ ಜಿಲ್ಲೆಯ  ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಗುರುವಾರವೂ ರಜೆಯನ್ನು ಘೋಷಿಸಿರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X