Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜತಾಂತ್ರಿಕ ವ್ಯಾಪಾರ ಸಂಬಂಧ...

ರಾಜತಾಂತ್ರಿಕ ವ್ಯಾಪಾರ ಸಂಬಂಧ ಕಡಿತಗೊಳಿಸುವ ನಿರ್ಧಾರ ಮರುಪರಿಶೀಲಿಸಿ: ಪಾಕ್‌ಗೆ ಭಾರತ ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 Aug 2019 8:27 PM IST
share
ರಾಜತಾಂತ್ರಿಕ ವ್ಯಾಪಾರ ಸಂಬಂಧ ಕಡಿತಗೊಳಿಸುವ ನಿರ್ಧಾರ ಮರುಪರಿಶೀಲಿಸಿ: ಪಾಕ್‌ಗೆ ಭಾರತ ಸೂಚನೆ

ಹೊಸದಿಲ್ಲಿ, ಆ.8: ಕಾಶ್ಮೀರ ಕುರಿತು ತನ್ನ ನಿರ್ಧಾರದ ಹಿನ್ನೆಲೆಯಲ್ಲಿ ತನ್ನೊಂದಿಗೆ ರಾಜತಾಂತ್ರಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಕಡಿತಗೊಳಿಸುವ ಏಕಪಕ್ಷೀಯ ನಿರ್ಧಾರವನ್ನು ಪುನರ್‌ಪರಿಶೀಲಿಸುವಂತೆ ಭಾರತವು ಗುರುವಾರ ಪಾಕಿಸ್ತಾನಕ್ಕೆ ಸೂಚಿಸಿದೆ. ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೆಯ ಸಂಬಂಧಗಳು ಆತಂಕಕಾರಿ ಸ್ಥಿತಿಯಲ್ಲಿವೆ ಎನ್ನುವುದನ್ನು ವಿಶ್ವಕ್ಕೆ ಸಾರುವುದು ಪಾಕಿಸ್ತಾನದ ಈ ಕ್ರಮದ ಹಿಂದಿನ ಉದ್ದೇಶವಾಗಿರುವುದು ಸ್ಪಷ್ಟವಾಗಿದೆ ಎಂದು ಅದು ಹೇಳಿದೆ.

ಭಾರತದೊಂದಿಗೆ ಸಂಬಂಧಗಳನ್ನು ಕಡಿದುಕೊಳ್ಳಲು ಪಾಕಿಸ್ತಾನವು ಉಲ್ಲೇಖಿಸಿರುವ ಕಾರಣಗಳನ್ನು ವಾಸ್ತವಾಂಶಗಳು ಬೆಂಬಲಿಸುತ್ತಿಲ್ಲ ಎಂದು ಸರಕಾರವು ತನ್ನ ಪ್ರತಿಕ್ರಿಯೆಯಲ್ಲಿ ತಿಳಿಸಿದೆ.

ಸಂವಿಧಾನದಲ್ಲಿಯ ತಾತ್ಕಾಲಿಕ ಷರತ್ತಿನಿಂದಾಗಿ ಈ ಹಿಂದೆ ಜಮ್ಮು-ಕಾಶ್ಮೀರಕ್ಕೆ ನಿರಾಕರಿಸಲ್ಪಟ್ಟಿದ್ದ ಅಭಿವೃದ್ಧಿ ಅವಕಾಶಗಳನ್ನು ಒದಗಿಸುವ ಬದ್ಧತೆಯು ಭಾರತ ಸರಕಾರ ಮತ್ತು ಸಂಸತ್‌ನ ಇತ್ತೀಚಿನ ನಿರ್ಧಾರಗಳ ಹಿಂದಿದೆ. ಈ ನಿರ್ಧಾರಗಳ ಪರಿಣಾಮಗಳು ಲಿಂಗ ಮತ್ತು ಸಾಮಾಜಿಕ-ಆರ್ಥಿಕ ತಾರತಮ್ಯಗಳನ್ನೂ ನಿವಾರಿಸಲಿವೆ. ಜಮ್ಮು-ಕಾಶ್ಮೀರದ ಎಲ್ಲ ಜನರ ಆರ್ಥಿಕ ಚಟುವಟಿಕೆಗಳು ಮತ್ತು ಜೀವನೋಪಾಯಗಳಲ್ಲಿ ಸುಧಾರಣೆಯನ್ನೂ ಈ ನಿರ್ಧಾರಗಳು ತರುವ ನಿರೀಕ್ಷೆಯಿದೆ ಎಂದು ಸರಕಾರವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜಮ್ಮು-ಕಾಶ್ಮೀರದಲ್ಲಿಯ ಅಸಮಾಧಾನವನ್ನು ನಿವಾರಿಸಲು ಇಂತಹ ಅಭಿವೃದ್ಧಿ ಉಪಕ್ರಮಗಳನ್ನು ಪಾಕಿಸ್ತಾನವು ನಕಾರಾತ್ಮಕ ದೃಷ್ಟಿಯಿಂದ ನೋಡುತ್ತಿರುವುದು ಅಚ್ಚರಿಯನ್ನೇನೂ ಉಂಟು ಮಾಡಿಲ್ಲ,ಅದು ಹಿಂದೆಯೂ ತನ್ನ ಗಡಿಯಾಚೆಯ ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳಲು ಇಂತಹ ಭಾವನೆಗಳನ್ನು ಬಳಸಿಕೊಂಡಿದೆ ಎಂದು ಹೇಳಿರುವ ಸರಕಾರವು,ವಿಧಿ 320ಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು ಸಂಪೂರ್ಣವಾಗಿ ಭಾರತದ ಆಂತರಿಕ ವ್ಯವಹಾರಗಳಾಗಿವೆ. ಭಾರತೀಯ ಸಂವಿಧಾನವು ಹಿಂದೆ,ಈಗಲೂ ಮತ್ತು ಮುಂದಕ್ಕೂ ಸದಾ ಸಾರ್ವಭೌಮ ವಿಷಯವಾಗಿದೆ. ಪ್ರದೇಶದಲ್ಲಿ ಆತಂಕಕಾರಿ ಸ್ಥಿತಿಯನ್ನು ಕಲ್ಪಿಸಿ ಅದರಲ್ಲಿ ಹಸ್ತಕ್ಷೇಪ ಮಾಡುವ ಪ್ರಯತ್ನ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಹೇಳಿದೆ.

ಪಾಕಿಸ್ತಾನವು ಬುಧವಾರ ಪ್ರಕಟಿಸಿರುವ ಕ್ರಮಗಳ ಬಗ್ಗೆ ಭಾರತ ಸರಕಾರಕ್ಕೆ ವಿಷಾದವಿದೆ ಮತ್ತು ರಾಜತಾಂತ್ರಿಕ ಸಂವಹನದ ಸಾಮಾನ್ಯ ಮಾರ್ಗಗಳನ್ನು ರಕ್ಷಿಸಿಕೊಳ್ಳಲು ಆ ರಾಷ್ಟ್ರವು ತನ್ನ ನಿರ್ಧಾರವನ್ನು ಪುನರ್‌ಪರಿಶೀಲಿಸಬೇಕೆಂದು ಆಗ್ರಹಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X