ಪ್ರವಾಹ ಹಿನ್ನೆಲೆ: ಕಾಲೇಜು ಪ್ರವೇಶ ಅವಧಿ ವಿಸ್ತರಿಸಿದ ರಾಜ್ಯ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು, ಆ.8: ರಾಜ್ಯದ ವಿವಿಧ ಕಡೆಗಳಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ, ಸಿಇಟಿ-2019ನೇ ಸಾಲಿನ ಇಂಜಿನಿಯರಿಂಗ್, ಟೆಕ್ನಾಲಜಿ, ಆರ್ಕಿಟೆಕ್ಚರ್ ಹಾಗೂ ಕೃಷಿ ವಿಜ್ಞಾನ, ತೋಟಗಾರಿಕೆ, ಪಶುಸಂಗೋಪನೆ, ಬಿ.ಫಾರ್ಮ್ ಇತ್ಯಾದಿ ಕೋರ್ಸುಗಳ ಪ್ರವೇಶಾತಿಗೆ ಎರಡನೇ ಮುಂದುವರಿದ ಸುತ್ತಿನಲ್ಲಿ ಹಂಚಿಕೆಯಾದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಹಾಗೂ ಕಾಲೇಜಿನಲ್ಲಿ ಪ್ರವೇಶ ಪಡೆಯುವ ದಿನಾಂಕವನ್ನು ಆ.13ರವರೆಗೆ ವಿಸ್ತರಿಸಲಾಗಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story