Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶುಕ್ರವಾರ ಹಜ್ ಯಾತ್ರೆ ಆರಂಭ: 18...

ಶುಕ್ರವಾರ ಹಜ್ ಯಾತ್ರೆ ಆರಂಭ: 18 ಲಕ್ಷಕ್ಕೂ ಅಧಿಕ ಯಾತ್ರಿಗಳು ಸೌದಿಗೆ ಆಗಮನ

ವಾರ್ತಾಭಾರತಿವಾರ್ತಾಭಾರತಿ8 Aug 2019 9:14 PM IST
share
ಶುಕ್ರವಾರ ಹಜ್ ಯಾತ್ರೆ ಆರಂಭ: 18 ಲಕ್ಷಕ್ಕೂ ಅಧಿಕ ಯಾತ್ರಿಗಳು ಸೌದಿಗೆ ಆಗಮನ

ಜಿದ್ದಾ (ಸೌದಿ ಅರೇಬಿಯ), ಆ. 8: ಜಗತ್ತಿನಾದ್ಯಂತದ ಮುಸ್ಲಿಮರು ಅತ್ಯಂತ ಭಯ ಭಕ್ತಿಯಿಂದ ನಿರ್ವಹಿಸುವ ಹಜ್ ಯಾತ್ರೆ ಶುಕ್ರವಾರ ಆರಂಭಗೊಳ್ಳಲಿದೆ.

ಶುಕ್ರವಾರ ಯಾತ್ರಿಗಳು ಮಿನಾದಲ್ಲಿ ನೆಲೆಸುತ್ತಾರೆ ಹಾಗೂ ಶನಿವಾರ ಅರಫಾತ್‌ನತ್ತ ಪ್ರಯಾಣಿಸಲಿದ್ದಾರೆ. ಯಾತ್ರೆಯು ಬುಧವಾರ ಕೊನೆಗೊಳ್ಳಲಿದೆ.

ಇಸ್ಲಾಮಿಕ್ ಕ್ಯಾಲೆಂಡರ್‌ನ ಅತ್ಯಂತ ಪವಿತ್ರ ವಾರದ ಅಂತಿಮ ಸಿದ್ಧತೆಗಳು ಆರಂಭಗೊಂಡಿರುವಂತೆಯೇ, 18 ಲಕ್ಷಕ್ಕೂ ಅಧಿಕ ಹಜ್ ಯಾತ್ರಿಗಳು ಸೌದಿ ಅರೇಬಿಯಕ್ಕೆ ಆಗಮಿಸಿದ್ದಾರೆ.

ಹಜ್ ಯಾತ್ರಿಗಳನ್ನು ಹೊತ್ತ ಅಂತರ್‌ರಾಷ್ಟ್ರೀಯ ವಿಮಾನಗಳು ಸೌದಿ ಅರೇಬಿಯಕ್ಕೆ ಬರುವುದು ಸೋಮವಾರ ಕೊನೆಗೊಂಡಿದೆ. ‘ಮಕ್ಕಾ ರೂಟ್ ಇನಿಶಿಯೇಟಿವ್’ ಅಡಿಯಲ್ಲಿ ಹಜ್ ಯಾತ್ರಿಗಳ ಅಂತಿಮ ತಂಡವನ್ನು ಹೊತ್ತ ವಿಮಾನವು ಬುಧವಾರ ಟ್ಯುನೀಶಿಯದಿಂದ ಸೌದಿ ಅರೇಬಿಯಕ್ಕೆ ಬಂದಿದೆ.

ಈ ಬಾರಿ ವಿಮಾನದ ಮೂಲಕ 17,25,455 ಹಜ್ ಯಾತ್ರಿಕರು, ರಸ್ತೆ ಮೂಲಕ 95,634 ಯಾತ್ರಿಗಳು ಮತ್ತು ಸಮುದ್ರ ಮಾರ್ಗದ ಮೂಲಕ 17,250 ಯಾತ್ರಿಗಳು ಆಗಮಿಸಿದ್ದಾರೆ ಎಂದು ಪಾಸ್‌ಪೋರ್ಟ್ ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ಒಟ್ಟಿಗೆ 25 ಲಕ್ಷಕ್ಕೂ ಅಧಿಕ ಹಜ್ ಯಾತ್ರಿಕರ ಆತಿಥ್ಯಕ್ಕಾಗಿ ಪವಿತ್ರ ನಗರ ಮಕ್ಕಾವು ಸಿದ್ಧತೆಗಳನ್ನು ನಡೆಸುತ್ತಿದೆ. 16 ಸರಕಾರಿ ಸಂಸ್ಥೆಗಳು ಯಾತ್ರಿಕರಿಗೆ 50 ವಿಧಗಳ ಸೇವೆಗಳನ್ನು ನೀಡುತ್ತಿವೆ.

► ಯಾತ್ರಿಕರ ನೆರವಿಗೆ 3.5 ಲಕ್ಷ ಮಂದಿ

ಯಾತ್ರಿಕರು ಹಜ್ ವಿಧಿವಿಧಾನಗಳನ್ನು ಸಮರ್ಪಕವಾಗಿ ನಡೆಸುವಂತಾಗಲು ಮಕ್ಕಾ ಮತ್ತು ಮದೀನಾ ನಗರಗಳ ಅಧಿಕಾರಿಗಳು ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ.

ಯಾತ್ರಿಕರಿಗೆ ನೆರವು ನೀಡಲು ಸರಕಾರವು 3.50 ಲಕ್ಷ ಜನರನ್ನು ನಿಯೋಜಿಸಿದೆ ಎಂದು ಮಕ್ಕಾ ಗವರ್ನರ್ ರಾಜಕುಮಾರ ಖಾಲಿದ್ ಅಲ್ ಫೈಝಲ್ ತಿಳಿಸಿದರು. ಅವರು ರವಿವಾರ ಮಕ್ಕಾ ಮತ್ತು ಇತರ ಪವಿತ್ರ ಸ್ಥಳಗಳಿಗೆ ರವಿವಾರ ಭೇಟಿ ನೀಡಿದರು.

 ಹಜ್ ಭದ್ರತಾ ಪಡೆಗಳು ರವಿವಾರ ಆಂತರಿಕ ಸಚಿವ ರಾಜಕುಮಾರ ಅಬ್ದುಲ್ ಅಝೀಝ್ ಬಿನ್ ಸೌದ್ ಬಿನ್ ನಯೀಫ್ ಸಮ್ಮುಖದಲ್ಲಿ ಸೇನಾ ಕವಾಯತು ನಡೆಸಿದವು.

► ಮಕ್ಕಾ ರೂಟ್ ಇನಿಶಿಯೇಟಿವ್

ಮಕ್ಕಾ ರೂಟ್ ಇನಿಶಿಯೇಟಿವ್ ಯೋಜನೆಯಲ್ಲಿ ಹಜ್ ಯಾತ್ರಿಗಳ ಆರೋಗ್ಯ, ವೀಸಾ ಮತ್ತು ವಲಸೆ ತಪಾಸಣೆ ವಿಧಿವಿಧಾನಗಳು ಅವರ ಸ್ವದೇಶಗಳಲ್ಲಿಯೇ ನಡೆಯುತ್ತವೆ ಹಾಗೂ ಸೌದಿ ಅರೇಬಿಯಕ್ಕೆ ಕಾಲಿಡುತ್ತಿದ್ದಂತೆಯೇ ಅವರು ತಮ್ಮ ಬ್ಯಾಗ್‌ಗಳೊಂದಿಗೆ ಮಕ್ಕಾ ಮತ್ತು ಮದೀನಾಗಳಿಗೆ ನೇರವಾಗಿ ತೆರಳಬಹುದಾಗಿದೆ.

ಈ ಕಾರ್ಯಕ್ರಮದ ಪ್ರಯೋಜನವನ್ನು ಈ ವರ್ಷ ಟ್ಯುನೀಶಿಯ, ಮಲೇಶ್ಯ, ಇಂಡೋನೇಶ್ಯ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ 1.71 ಲಕ್ಷಕ್ಕೂ ಅಧಿಕ ಯಾತ್ರಿಗಳು ಪಡೆದುಕೊಂಡಿದ್ದಾರೆ.

ಇದು ಸೌದಿ ಅಧಿಕಾರಿಗಳ ಮೇಲಿನ ಹೊರೆಯನ್ನು ತಗ್ಗಿಸುತ್ತದೆ ಹಾಗೂ ಯಾತ್ರಿಗಳಿಗೆ ಸುಖಕರವಾದ ಅನುಭವವನ್ನು ಒದಗಿಸುತ್ತದೆ ಎಂದು ವಿಶ್ಲೇಷಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X