Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವರ ಜನ್ಮಸ್ಥಾನವನ್ನು ಕಕ್ಷಿಗಾರ ಎಂದು...

ದೇವರ ಜನ್ಮಸ್ಥಾನವನ್ನು ಕಕ್ಷಿಗಾರ ಎಂದು ಪರಿಗಣಿಸಲು ಸಾಧ್ಯವೇ: ಸುಪ್ರೀಂ ಪ್ರಶ್ನೆ

ಅಯೋಧ್ಯೆ ಜಮೀನು ವಿವಾದ

ವಾರ್ತಾಭಾರತಿವಾರ್ತಾಭಾರತಿ8 Aug 2019 9:28 PM IST
share
ದೇವರ ಜನ್ಮಸ್ಥಾನವನ್ನು  ಕಕ್ಷಿಗಾರ ಎಂದು ಪರಿಗಣಿಸಲು ಸಾಧ್ಯವೇ: ಸುಪ್ರೀಂ ಪ್ರಶ್ನೆ

ಹೊಸದಿಲ್ಲಿ, ಆ.8: ದೇವರ ಜನ್ಮಸ್ಥಳವನ್ನು ನ್ಯಾಯಾಲಯದಲ್ಲಿರುವ ಪ್ರಕರಣದ ಕಕ್ಷಿಗಾರ ಎಂದು ಪರಿಗಣಿಸಲು ಹೇಗೆ ಸಾಧ್ಯ ಎಂದು ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ.

ಅಯೋಧ್ಯೆಯ ವಿವಾದಾತ್ಮಕ ಜಮೀನಿನ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಈ ಪ್ರಕರಣದ ಒಂದು ಕಕ್ಷಿಗಾರನಾಗಿರುವ ‘ರಾಮಲಲ್ಲ ವಿರಾಜಮಾನ್’ ಟ್ರಸ್ಟ್‌ಗೆ ಈ ಪ್ರಶ್ನೆ ಕೇಳಿತು. ಹಿಂದು ಧರ್ಮದಲ್ಲಿ ದೇವರ ಪ್ರಾರ್ಥನಾ ಸ್ಥಳದಲ್ಲಿ ವಿಗ್ರಹಗಳು ಇರಲೇಬೇಕೆಂಬ ಅಗತ್ಯವಿಲ್ಲ. ಹಿಂದೂ ಧರ್ಮದಲ್ಲಿ ನದಿ, ಸೂರ್ಯನನ್ನೂ ಪೂಜಿಸಲಾಗುತ್ತದೆ. ಆದ್ದರಿಂದ ಜನ್ಮಸ್ಥಳವನ್ನು ನ್ಯಾಯಶಾಸ್ತ್ರದ ವ್ಯಕ್ತಿ ಎಂದು ಪರಿಗಣಿಸಬಹುದು ಎಂದು ರಾಮಲಲ್ಲ ಟ್ರಸ್ಟ್‌ನ ವಕೀಲ ಕೆ ಪರಾಶರನ್ ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನ್ಯಾಯಾಲಯದಲ್ಲಿ ಹಿಂದು ದೇವರನ್ನು ನ್ಯಾಯಶಾಸ್ತ್ರದ ವ್ಯಕ್ತಿ ಎಂದು ಪರಿಗಣಿಸಲಾಗಿದೆ. ದೇವರ ಹೆಸರಲ್ಲಿ ಆಸ್ತಿ, ಸಂಸ್ಥೆಗಳು ಇರಬಹುದು ಮತ್ತು ದೇವರ ಹೆಸರಲ್ಲಿ ದಾವೆ ಹೂಡಬಹುದು. ಇದನ್ನು ಉತ್ತರಾಖಂಡದ ಹೈಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಗಂಗಾ ನದಿಯನ್ನೂ ಕಕ್ಷಿಗಾರ ಎಂದು ಪರಿಗಣಿಸಿದೆ ಎಂದು ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯಿ, ನ್ಯಾಯಾಧೀಶರಾದ ಎಸ್‌ಎ ಬೊಬ್ಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್‌ಎ ನಝೀರ್ ಅವರಿದ್ದ ನ್ಯಾಯಪೀಠ ತಿಳಿಸಿತು. ಓರ್ವ ವ್ಯಕ್ತಿಗೆ ಪ್ರಾರ್ಥನೆ ಸಲ್ಲಿಸುವ ಹಕ್ಕನ್ನು ನಿರಾಕರಿಸುವುದು ಸರಿಯಲ್ಲ ಮತ್ತು ಹೀಗೆ ಮಾಡುವುದರಿಂದ ಪದೇ ಪದೇ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು ಪರಾಶರನ್ ಹೇಳಿದರು.

1949ರ ಡಿಸೆಂಬರ್ 16ರಂದು ಕಡೆಯ ನಮಾಝ್ ಸಲ್ಲಿಸಲಾಗಿದೆ. ಅಲ್ಲಿ ವಿಗ್ರಹವನ್ನು ಇರಿಸಿದ್ದ ಕಾರಣ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಲು ಅಡ್ಡಿಯಾಯಿತೇ ಎಂದು ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಮತ್ತೊಬ್ಬ ವಕೀಲ ಸಿಎಸ್ ವೈದ್ಯನಾಥನ್, “ಇಲ್ಲ, ಮುಸ್ಲಿಮರಿಗೆ ಅಲ್ಲಿ ಪ್ರವೇಶವೇ ಇರಲಿಲ್ಲ” ಎಂದುತ್ತರಿಸಿದರು. ಬಳಿಕ ನ್ಯಾಯಾಲಯದ ಹೊರಗೆ ಸುದ್ದಿಗಾರರ ಜೊತೆ ಮಾತನಾಡಿದ ಮುಸ್ಲಿಮ್ ಕಕ್ಷಿಗಾರರ ವಕೀಲ ರಾಜೀವ್ ಧವನ್, ರಾಮಲಲ್ಲ ವಿರಾಜಮಾನ್ ಮತ್ತು ನಿರ್ಮೋಹಿ ಅಖಾಡ ದಾಖಲಿಸಿರುವ ಎರಡು ಪ್ರತ್ಯೇಕ ದಾವೆಗಳು ಮೂರ್ಖತನದ ಕಾರ್ಯವಾಗಿದೆ. ಏಕೆಂದರೆ ಒಂದು ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡರೆ ಮತ್ತೊಂದು ಸ್ವಯಂ ಅಸ್ತಿತ್ವ ಕಳೆದುಕೊಳ್ಳುತ್ತದೆ. ಆದ್ದರಿಂದ ಯಾವುದಾದರು ಒಂದು ಅರ್ಜಿಯನ್ನು ಮಾತ್ರ ವಿಚಾರಣೆಗೆ ಪರಿಗಣಿಸುವಂತೆ ಮುಸ್ಲಿಮ್ ಪಕ್ಷಗಳು ನ್ಯಾಯಾಲಯವನ್ನು ಕೋರಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X