Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಳೆ ಮುನ್ಸೂಚನೆ: ತಗ್ಗು ಪ್ರದೇಶಗಳಿಗೆ...

ಮಳೆ ಮುನ್ಸೂಚನೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗದಂತೆ ಬಿಬಿಎಂಪಿ ಅಗತ್ಯ ಮುನ್ನೆಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 Aug 2019 9:36 PM IST
share
ಮಳೆ ಮುನ್ಸೂಚನೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗದಂತೆ ಬಿಬಿಎಂಪಿ ಅಗತ್ಯ ಮುನ್ನೆಚ್ಚರಿಕೆ

ಬೆಂಗಳೂರು, ಆ. 9: ನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ, ಬಿಬಿಎಂಪಿಯು ಮಳೆಗಾಲದಲ್ಲಿ ಸಂಭವಿಸುವ ಅವಾಂತರಗಳನ್ನು ತಪ್ಪಿಸಲು ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮೇಯರ್ ಗಂಗಾಬಿಕೆ ತಿಳಿಸಿದ್ದಾರೆ

ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜಕಾಲುವೆ ವಿಭಾಗದ ಮುಖ್ಯ ಅಭಿಯಂತರರನ್ನು ಕರೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು.

ನಗರದಲ್ಲಿ ಭಾರಿ ಮಳೆ ಬಂದು ಪ್ರವಾಹ ಉಂಟಾದರೆ ಏನೆಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಈ ಹಿಂದೆ ಸಿಎಂ ಯಡಿಯೂರಪ್ಪ ಜೊತೆ ಸಭೆ ನಡೆಸಲಾಗಿದೆ. ಆ ಬಳಿಕ ರಾಜಕಾಲುವೆ ವಿಭಾಗದ ಅಧಿಕಾರಿಗಳು ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಉಂಟಾಗುವ 1ಸಾವಿರಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿ ಮಳೆಗಾಲದಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಿದ್ದಾರೆ ಎಂದರು.

ಸದ್ಯ ನಗರದ 182 ಸೂಕ್ಷ್ಮ ಪ್ರದೇಶಗಳಲ್ಲಿ ಮಾತ್ರ ಪ್ರವಾಹ ಉಂಟಾಗುವ ಪರಿಸ್ಥಿತಿ ಇದ್ದು, 80ರಿಂದ 120ಮಿ.ಮೀ ಮಳೆಯಾದರೆ ಯಾವುದೇ ಸಮಸ್ಯೆ ಎದುರಾಗುವುದುದಿಲ್ಲ. 120 ಮಿ.ಮೀ ಮೇಲ್ಪಟ್ಟು ಮಳೆ ಬಂದರೆ ಮಾತ್ರ ಪ್ರವಾಹದ ಸಮಸ್ಯೆ ಎದುರಾಗಲಿದೆ. 182ರ ಪೈಕಿ 28 ಅತಿಸೂಕ್ಷ್ಮ ಪ್ರದೇಶಗಳಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ಕೆಎಸ್‌ಎನ್‌ಎಂಡಿಸಿ)ದ ಸಹಯೋಗದಲ್ಲಿ 18 ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ನೀರಿನ ಮಟ್ಟ ಅಳೆಯುವ ಸಂವೇದಕಗಳನ್ನು ಅಳವಡಿಸಲಾಗಿದೆ. ಕೆಎಸ್‌ಎನ್‌ಎಂಡಿಸಿ ಉಚಿತವಾಗಿ ಸೆನ್ಸಾರ್‌ಗಳನ್ನು ಅಳವಡಿಸಿದ್ದು, ಪಾಲಿಕೆಯಿಂದ ಯಾವುದೇ ಹಣ ವ್ಯಯಿಸಿಲ್ಲ. ಉಳಿದ 10 ಅತಿಸೂಕ್ಷ್ಮ ಪ್ರದೇಶಗಳಲ್ಲಿಯೂ ಶೀಘ್ರ ಸೆನ್ಸಾರ್ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಒಂದು ಸೆನ್ಸಾರ್ ಅಳವಡಿಸಲು 35 ಸಾವಿರ ರೂ.ವೆಚ್ಚ ತಗಲುತ್ತದೆ. ಪ್ರತಿಯೊಂದು ಸೆನ್ಸಾರ್ ಯಂತ್ರಕ್ಕೂ ಸೋಲಾರ್ ಅಳವಡಿಕೆ ಮಾಡಲಾಗಿದೆ. ಅದರಿಂದ ನಿತ್ಯ ಅಂತರ್ಜಲದ ಮೂಲಕ ಕೆಎಸ್‌ಎನ್‌ಡಿಎಂಸಿ ನಿಯಂತ್ರಣ ಕೊಠಡಿಗೆ ಕೂಡಲೆ ಮಾಹಿತಿ ತಿಳಿಯಲಿದೆ.

ಪಾಲಿಕೆ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನೆ ಮಾಡಲಿದ್ದಾರೆ. ಸೆನ್ಸಾರ್ ಅಳವಡಿಸಿರುವ ಕಡೆ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯಬಹುದಾಗಿದೆ. ಅದರಂತೆ ಹಸಿರು, ನೀಲಿ, ಕೆಂಪು ಹಾಗೂ ಕಪ್ಪುಬಣ್ಣದಲ್ಲಿ ಗುರುತಿಸಲಾಗುತ್ತದೆ.

ಹಸಿರು ಹಾಗೂ ನೀಲಿ ಬಣ್ಣವಿದ್ದರೆ ಯಾವುದೇ ಅಪಾಯವಿರುವುದಿಲ್ಲ. ಕೆಂಪು ಬಣ್ಣವಿದ್ದರೆ ಅಪಾಯ ಎಂದರ್ಥ ಹಾಗೂ ಕಪ್ಪುಬಣ್ಣಕ್ಕೆ ತಿರುಗಿದರೆ ಪ್ರವಾಹ ಉಂಟಾಗಲಿದೆ ಎಂಬ ಮಾಹಿತಿ ತಿಳಿಯಲಿದೆ. ಆ ಮಾಹಿತಿಗನುಗುಣವಾಗಿ ಪ್ರವಾಹ ಉಂಟಾಗುವ ಸ್ಥಳದ ಸುತ್ತಮುತ್ತಲಿನ ನಿವಾಸಿಗಳನ್ನು ಬೇರೆಡೆ ತೆರಳುವಂತೆ ಸೂಚನೆ ನೀಡಬಹುದು ಎಂದರು.

ತಾತ್ಕಾಲಿಕ ಕೊಠಡಿ ಸ್ಥಾಪನೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಅನಾಹುತಗಳ ನಿವಾರಣೆಗೆ ಈಗಾಗಲೇ 9 ಕಡೆ ಶಾಶ್ವತ ನಿಯಂತ್ರಣಾ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಇದೀಗ ಆಯಾ ವಲಯದ ಪ್ರತಿ ಉಪವಿಭಾಗ ಕಚೇರಿಗಳಲ್ಲಿ 63 ಕಡೆ ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.

ತಾತ್ಕಾಲಿಕ ನಿಯಂತ್ರಣಾ ಕೊಠಡಿಗಳಲ್ಲಿ ತುರ್ತು ಪರಿಹಾರ ಕಾರ್ಯಕ್ಕೆ ಅಗತ್ಯವಿರುವ ಯಂತ್ರಗಳು, ಸಲಕರಣೆಗಳು, ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿದ್ದು, ಸಮಸ್ಯೆ ಇರುವ ಕಡೆ ಸಿಬ್ಬಂದಿ ತೆರಳಿ ನಿವಾರಣೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಮರ ತೆರವಿಗೆ 28 ತಂಡ: ಮಳೆಗಾಲದಲ್ಲಿ ಧರೆಗುರುಳುವ ಮರಗಳನ್ನು ತೆರವುಗೊಳಿಲು ಈಗಾಗಲೇ 21ತಂಡಗಳಿವೆ. ಇದೀಗ ಹೆಚ್ಚುವರಿಯಾಗಿ 7 ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಪ್ರತಿ ತಂಡದಲ್ಲೂ ಏಳು ಕಾರ್ಮಿಕರು, ಒಬ್ಬರು ಮೇಲ್ವಿಚಾರಕರು ಇರುತ್ತಾರೆ.

ಮರಗಳನ್ನು ತೆರವುಗೊಳಿಸುವ ಅವಶ್ಯಕತೆಯಿರುವ ಗರಗಸ, ಕೊಂಬೆಗಳನ್ನು ತುಂಡರಿಸುವ ಯಂತ್ರ, ಹಾರೆ, ಹಗ್ಗ ಸೇರಿದಂತೆ ಇನ್ನಿತರ ಸಲಕರಣೆಗಳನ್ನು ನೀಡುವುದರ ಜತೆಗೆ ಕಟಾವು ಮಾಡಿದ ಮರದ ತುಂಡುಗಳ ಸಾಗಣೆಗೆ ವಾಹನಗಳನ್ನು ಕೂಡಾ ನಿಗದಿ ಮಾಡಲಾಗಿದೆ ಎಂದು ಮೇಯರ್ ತಿಳಿಸಿದರು.

ಟ್ರಾಶ್ ಬ್ಯಾರಿಯರ್ ಅಳವಡಿಕೆ: ರಾಜಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಅಡ್ಡಿಯಾಗುತ್ತಿದ್ದ ಕಸವನ್ನು ತೆರವುಗೊಳಿಸಲು ಈಗಾಗಲೇ ಐದು ಕಡೆ ಟ್ರಾಶ್ ಬ್ಯಾರಿಯರ್(ಕಸ ತಡೆಯುವ ಹಗುರ ಅಲ್ಯೂಮಿನಿಯಂ ಬಲೆ) ಅಳವಡಿಸಲಾಗಿದೆ. ಉಳಿದ ಕಡೆ ಟ್ರಾಶ್ ಬ್ಯಾರಿಯರ್ ಅಳವಡಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X