Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ...

ಉಡುಪಿ ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ9 Aug 2019 9:46 PM IST
share
ಉಡುಪಿ ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಮನೆಗಳಿಗೆ ಹಾನಿ

ಉಡುಪಿ, ಆ.9: ಮಳೆಯ ಪ್ರಮಾಣ ಎರಡು ದಿನಗಳಿಂದ ತಗ್ಗಿದ್ದರೂ, ಬೀಸುತ್ತಿರುವ ಗಾಳಿಯಿಂದಾಗಿ ಜಿಲ್ಲೆಯಾದ್ಯಂತ ಮನೆ ಹಾಗೂ ಇತರ ಸೊತ್ತು ಗಳಿಗಾಗುತ್ತಿರುವ ಹಾನಿಯ ಪ್ರಮಾಣದಲ್ಲಿ ಮಾತ್ರ ಇಳಿತ ಕಂಡುಬಂದಿಲ್ಲ. ಜಿಲ್ಲಾಧಿಕಾರಿ ಕಚೇರಿ ಹಾಗೂ ಪ್ರತಿ ತಾಲೂಕು ಕಚೇರಿ ಗಳಲ್ಲಿರುವ ಪ್ರಾಕೃತಿಕ ವಿಕೋಪ ನಿಯಂತ್ರಣ ಕಚೇರಿಗಳಿಂದ ಸಿಕ್ಕಿದ ಮಾಹಿತಿಯಂತೆ ಇಂದು ಜಿಲ್ಲೆಯಲ್ಲಿ ಇಂದು 60ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, ಲಕ್ಷಾಂತರ ರೂ. ಆಸ್ತಿಪಾಸ್ತಿ ನಷ್ಟವಾಗಿದೆ.

ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಗುಲಾಬಿ, ಬಳ್ಕೂರು ಗ್ರಾಮದ ಲಕ್ಷ್ಮೀ ಹಾಗೂ ಹಾಲಾಡಿ ಗ್ರಾಮದ ಗೋಪಾಲ ಎಂಬವರ ಮನೆಯ ತೋಟಗಾರಿಕಾ ಬೆಳೆಗಳಿಗೆ ಒಟ್ಟು ಅಂದಾಜು ಸುಮಾರು 50,000ರೂ.ಗಳ ನಷ್ಟ ಸಂಭವಿಸಿದೆ.

ಉಳಿದಂತೆ ಕಾರ್ಕಳ ತಾಲೂಕಿನಲ್ಲಿ 14 ಮನೆಗಳಿಗೆ, ಬೈಂದೂರಿನ 4, ಕುಂದಾಪುರದ 24 ಬ್ರಹ್ಮಾವರದ 11 ಹಾಗೂ ಕಾಪು ತಾಲೂಕಿನ 7 ಮನೆಗಳಿಗೆ ಸಂಪೂರ್ಣ ಅಥವಾ ಭಾಗಶ: ಹಾನಿಯಾದ ಬಗ್ಗೆ ವರದಿಗಳು ಬಂದಿವೆ.

ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ಶೀನ ಮೊಯ್ಲಿ ಅವರ ಮನೆಗೆ 50 ಸಾವಿರ ರೂ., ನಂದಳಿಕೆ ಗ್ರಾಮದ ಮುತ್ತಯ್ಯ ಮೇರ ಮನೆಗೆ 25 ಸಾವಿರ ರೂ., ಬೈಂದೂರು ತಾಲೂಕು ಶಿರೂರು ಗ್ರಾಮದ ಶಮಿಮಾ ಇವರ ಮನೆಯ ಗೋಡೆ ಕುಸಿದು 50 ಸಾವಿರ ರೂ., ಬಡಾಕೆರೆ ಗ್ರಾಮದ ನಾಗವೇಣಿ ಎಂಬವರ ಮನೆ ಗಾಳಿಮಳೆಗೆ ಸಂಪೂರ್ಣ ಹಾನಿಗೊಂಡು 1.85 ಲಕ್ಷ ರೂ.ನಷ್ಟದ ಅಂದಾಜು ಮಾಡಲಾಗಿದೆ.

ಕುಂದಾಪುರ ತಾಲೂಕು ಹೆಂಗವಳ್ಳಿ ಗ್ರಾಮದ ಸಂತು ಎಂಬವರ ಮನೆಗೆ 70 ಸಾವಿರ ರೂ., ಮೊಳ್ಳಿ ಗ್ರಾಮದ ಬುಡ್ಡಿ ಎಂಬವರ ವಾಸ್ತವ್ಯದ ಮನೆಗೆ 1.50 ಲಕ್ಷ ರೂ., ಹಾಲಾಡಿ ಗ್ರಾಮದ ಶಂಕರನಾರಾಯಣ ಎಂಬವರ ಮನೆಗೆ 70 ಸಾವಿರ ರೂ., ಹೆಮ್ಮಾಡಿ ಗ್ರಾಮದ ಲಚ್ಚು ಎಂಬವರ ಮನೆಗೆ 75 ಸಾವಿರ ರೂ., ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾಮದ ಸೋಮ ಮರಕಾಲರ ಮನೆಗೆ 30 ಸಾವಿರ, ಯಡ್ತಾಡಿ ಗ್ರಾಮದ ನರಸಿಂಹ ಮೂರ್ತಿಯವರ ಮನೆಗೆ 25 ಸಾವಿರ ರೂ., ಹಾವಂಜೆ ಗ್ರಾಮದ ಗ್ಲೋರಿನ್ ಡಿಸೋಜರ ಮನೆಗೆ 30,000ರೂ. ಹಾನಿ ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಕುಂದಾಪುರದ ರಾಮ ಮಂದಿರ ರಸ್ತೆಯಲ್ಲಿ ಇಂದು ಅಪರಾಹ್ನ ತೆಂಗಿನ ಮರವೊಂದು ಉರುಳಿ ಬಿದ್ದ ಪರಿಣಾಮ, ವಿದ್ಯುತ್ ತಂತಿ ಮುರಿದು ಬಿದ್ದು, ಸುತ್ತಮುತ್ತಲಿನ ಪರಿಸರದಲ್ಲಿ ಆರು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಬೈಂದೂರಿನ ಶೀರೂರಿನ ಕೋಣಿಮನೆಯಲ್ಲಿ ಇಂದು ಗಾಳಿಮಳೆಗೆ ತಿಮ್ಮಪ್ಪ ಆಚಾರಿ ಎಂಬವರ ದನದ ಕೊಟ್ಟಿಗೆಗೆ 50,000ರೂ., ಅದೇ ಊರಿನ ನಾಗಪ್ಪ ಆಚಾರಿಯವರ ಮನೆ ಸಂಪೂರ್ಣ ಹಾನಿಗೊಂಡು 50,000 ರೂ. ನಷ್ಚ ಸಂಭವಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X