Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹರೇಕಳ, ಇನೋಳಿ ನದಿ ತಟದ ಪ್ರದೇಶಗಳು...

ಹರೇಕಳ, ಇನೋಳಿ ನದಿ ತಟದ ಪ್ರದೇಶಗಳು ಜಲಾವೃತ

ಸುರಕ್ಷಿತ ಪ್ರದೇಶಗಳಿಗೆ ಜನರ ಸ್ಥಳಾಂತರ; ಇನೋಳಿಯಲ್ಲಿ 45 ಮನೆ ಜಲಾವೃತ

ವಾರ್ತಾಭಾರತಿವಾರ್ತಾಭಾರತಿ10 Aug 2019 12:48 PM IST
share
ಹರೇಕಳ, ಇನೋಳಿ ನದಿ ತಟದ ಪ್ರದೇಶಗಳು ಜಲಾವೃತ

ಕೊಣಾಜೆ, ಆ.10: ಕಳೆದ ಹಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹರೇಕಳ, ಇನೋಳಿನ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ನೀರು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ಈ ಭಾಗದ ನದಿ ಸಮೀಪದ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿದ್ದು, ಜನರು ಆತಂಕಗೊಂಡಿದ್ದಾರೆ.

ಪ್ರಮುಖವಾಗಿ ಹರೇಕಳ ಸಮೀಪದ ಬೈತಾರ್, ಉಳಿಯ, ಕಡವಿನ ಬಳಿಯ ಪ್ರದೇಶಗಳು ಸೇರಿದಂತೆ ಇನೋಳಿಯ ನದಿ ತಟದ ತಗ್ಗು ಪ್ರದೇಶಗಳಲ್ಲಿ ನೇತ್ರಾವತಿ ನೀರಿನ ಹರಿವು ಅಪಾಯಮಟ್ಟದಲ್ಲಿ ಏರುತ್ತಿದೆ. ಹರೇಕಳದ ಬೈತಾರ್, ಉಳಿಯ ಪ್ರದೇಶ ವ್ಯಾಪ್ತಿಯ ರಾಕೇಶ್, ಸಿಫ್ರಿ, ಥಾಮಸ್, ಫ್ರಾಂಕ್ಲಿಯನ್, ರಾಬರ್ಟ ಎಂಬವರ ಕುಟುಂಬಗಳ ಸದಸ್ಯರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳೀಯರು ಸ್ಥಳಾಂತರಿಸಿ ರಕ್ಷಿಸಿದ್ದಾರೆ. ಅಲ್ಲದೆ ಜಲಾವೃತ ಮನೆಗಳ ಸಾಕು ಪ್ರಾಣಿಗಳನ್ನು ಕೂಡಾ ದೋಣಿಯ ಮೂಲಕ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗಿದೆ.

ರಕ್ಷಣಾ ಕಾರ್ಯದಲ್ಲಿ ಸ್ಥಳೀಯ ಯುವಕರಾದ ಲತೀಫ್, ಆಸಿಫ್, ಅನ್ವರ್, ಮಹಮ್ಮದ್, ಬಶೀರ್ ಎಸ್.ಎಂ. ಸೇರಿಂದತೆ ವಿವಿಧ ಸಂಘಟನೆಯ ಕಾರ್ಯಕರ್ತರು, ಸಾರ್ವಜನಿಕರು ಸಹಕರಿಸುತ್ತಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಶುಕ್ರವಾರ ಸಂಜೆ ಈ ಪ್ರದೇಶಕ್ಕೆ ಬಂದು ತೆರಳಿದ್ದರು.

ಮುನ್ನೂರು ಗ್ರಾಮದಲ್ಲಿ ರಕ್ಷಣೆ: ಮುನ್ನೂರು ಗ್ರಾಮದ ಸೋಮನಾಥ ಉಳಿಯದ ಹಿರಿಯರು, 12 ದಿನದ ಮಗು, ಬಾಣಂತಿ ಸೇರಿದಂತೆ ಈ ಭಾಗದ ನೆರೆ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಈ ಸಂದರ್ಭ ಜಿಪಂ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮುನ್ನೂರು ಗ್ರಾಪಂ ಉಪಾಧ್ಯಕ್ಷ ಹರೀಶ್, ರವೀಂದ್ರ ಶೆಟ್ಟಿ, ಪ್ರಕಾಶ್ ಸಿಂಪೋಣಿ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಸಹಕರಿಸಿದ್ದಾರೆ.

ಇನೋಳಿಯಲ್ಲಿ 45 ಮನೆಗಳು ಜಲಾವೃತ:

ಇನೋಳಿ ಪ್ರದೇಶದ ಕೆಳಗಿನ ಕರೆ ಹಾಗೂ ಇತರ ಪ್ರದೇಶಗಳಲ್ಲಿ ಇಲ್ಲಿಯವರೆಗೆ ಸುಮಾರು 45 ಮನೆಗಳು ಜಲಾವೃತಗೊಂಡಿವೆ. ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದೊಳಗೂ ನೀರು ನುಗ್ಗಿದೆ. ಅಲ್ಲದೆ ಈ ಭಾಗದ ಜನರನ್ನು ಶುಕ್ರವಾರ ರಾತ್ರಿಯೇ ಸ್ಥಳಾಂತರಗೊಳಿಸಲಾಗಿದೆ. ಮಂಗಳೂರು ತಾಲೂಕು ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಶುಕ್ರವಾರ ರಾತ್ರಿಯೇ ಭೇಟಿ ನೀಡಿದ್ದರು. ಗುರುವಾರದಿಂದ ತುಂಬೆ ಡ್ಯಾಂನಿಂದ ನೀರು ಹರಿಯ ಬಿಟ್ಟ ಪರಿಣಾಮ ಈ ಪ್ರದೇಶದಲ್ಲಿ ನದಿ ನೀರಿನ ಹರಿವು ಏಕಾಏಕಿ ಹೆಚ್ಚಿದೆ.

ಇನೋಳಿಯ ಸುಣ್ಣದ ಕಲ್ಲು ಪ್ರದೇಶ, ಬೋಳಿಯಾರು ಪಂಚಾಯಿತ್ ವ್ಯಾಪ್ತಿಯ ಅಮ್ಮೆಂಬಳ ರಂತಡ್ಕ, ಪಾವೂರು ಗ್ರಾಮದ ಕಿಲ್ಲೂರು ಪ್ರದೇಶಗಳಲ್ಲೂ ಗದ್ದೆ, ತೋಟಗಳು ಜಲಾವೃತಗೊಂಡಿದೆ.

ಉಳಿಯ ದ್ವೀಪದ ಜನರು ಆತಂಕದಲ್ಲಿ:

ನೇತ್ರಾವತಿ ನದಿಯ ನೀರಿನ ಹರಿವು ಹೆಚ್ಚಾಗಿರುವುದರಿಂದ ಇಲ್ಲಿಯ ಉಳಿಯ ದ್ವೀಪದಲ್ಲಿ ವಾಸಿಸುತ್ತಿರುವ ಹಲವು ಕುಟುಂಬದ ಜನರು ಆತಂಕದಲ್ಲಿದ್ದಾರೆ. ಇಲ್ಲಿಯ ಕೆಲವು ಕುಟುಂಬದ ಸದಸ್ಯರು ಶುಕ್ರವಾರ ಸಂಜೆಯೇ ಸಂಬಂಧಿಕರ ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಕುತ್ತಾರು ರಾಣಿಪುರ ಚರ್ಚ್ ಬಳಿಯ ಹೊಸದೋಟ ನಾರಾಯಣ ಕೊಟ್ಟಾರಿ ಅವರ ಮನೆಗೆ ಬೃಹತ್ ಮರಬಿದ್ದು ಭಾಗಶಃ ಹಾನಿಯಾಗಿದೆ. ಗೋಡೆ ಕುಸಿದಿದ್ದು, ಹಂಚು ಪುಡಿಯಾಗಿದೆ. 

ಅಂಬ್ಲಮೊಗರು ಗ್ರಾಮದ ಗಟ್ಟಿಕುದ್ರು, ಎಲಿಯಾರ್ ಪ್ರದೇಶಗಳಲ್ಲಿ ಕೂಡಾ ನೆರೆ ಪರಿಸ್ಥಿತಿ ಉಂಟಾಗಿದೆ.

1974ರಲ್ಲಿ ನೆರೆ ಬಂದಿತ್ತು:

1974ರಲ್ಲಿ ನೇತ್ರಾವತಿ ನದಿಯಲ್ಲಿ ನದಿಯಲ್ಲಿ ನೆರೆ ಬಂದ ಪರಿಣಾಮ ಹರೇಕಳ, ಇನೋಳಿಯ ನದಿ ತಟದ ಪ್ರದೇಶವು ಸಂಪೂರ್ಣವಾಗಿ ಮುಳುಗಡೆಯಾಗಿತ್ತು ಎಂದು ಈ ಭಾಗದ ಹಿರಿಯರು ನೆನಪಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X