Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2024ರ ಚುನಾವಣೆಯಲ್ಲಿ ನನ್ನ ಹೆಸರನ್ನು...

2024ರ ಚುನಾವಣೆಯಲ್ಲಿ ನನ್ನ ಹೆಸರನ್ನು ಅವಲಂಬಿಸಬೇಡಿ: ನೂತನ ಸಂಸದರಿಗೆ ಪ್ರಧಾನಿ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ10 Aug 2019 1:28 PM IST
share
2024ರ ಚುನಾವಣೆಯಲ್ಲಿ ನನ್ನ ಹೆಸರನ್ನು ಅವಲಂಬಿಸಬೇಡಿ: ನೂತನ ಸಂಸದರಿಗೆ ಪ್ರಧಾನಿ ಕಿವಿಮಾತು

ಹೊಸದಿಲ್ಲಿ, ಆ.10: “ಮುಂದಿನ ಲೋಕಸಭಾ ಚುನಾವಣೆ 2024ರಲ್ಲಿ ನಡೆಯುವಾಗ ಅದನ್ನು ಗೆಲ್ಲಲು ನನ್ನ ಹೆಸರು ಅಥವಾ ಸಾಧನೆಗಳನ್ನು ಅವಲಂಬಿಸದೇ ಇರುವಂತಾಗಲು  ಶ್ರಮ ವಹಿಸಿ. ನಿಮ್ಮ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಿ'' ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ನೂತನ ಸಂಸದರಿಗಾಗಿ ನಡೆದ ಕಾರ್ಯಾಗಾರದಲ್ಲಿ  ಕರೆ ನೀಡಿರುವ ಬಗ್ಗೆ ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್  ಹೇಳಿಕೊಂಡಿದ್ದಾರೆ.

ಕಾರ್ಯಾಗಾರದಲ್ಲಿನ ಅನುಭವಗಳ ಕುರಿತಂತೆ ಬರೆದಿರುವ ಗಂಭೀರ್, ಪ್ರಧಾನಿ ಸಭೆಯಲ್ಲಿ ಸಕಾರಾತ್ಮಕತೆಯತ್ತ ಗಮನ ಕೇಂದ್ರೀಕರಿಸುವಂತೆ ಹಾಗೂ ಭಾರತದ ಸಾಂಸ್ಕೃತಿಕ ಹಾಗೂ ಮಾನವ ಸಂಪನ್ಮೂಲಗಳ ಸಮರ್ಪಕ ಬಳಕೆಯೊಂದಿಗೆ ದೇಶವನ್ನು ಮಹಾನ್ ಆಗಿಸಬೇಕೆಂದೂ ಕರೆ ನೀಡದರೆಂದು ವಿವರಿಸಿದ್ದಾರೆ.

ಕಾರ್ಯಾಗಾರದಲ್ಲಿ ಪ್ರಧಾನಿ ವೇದಿಕೆಯಿಂದ ಕೆಳಗಿಳಿದು ಸಂಸದರ ನಡುವೆ ಕುಳಿತುಕೊಂಡು ಎಲ್ಲರನ್ನೂ ಅಚ್ಚರಿಗೊಳಿಸಿದರಲ್ಲದೆ, ಈ ಮೂಲಕ ಸಂಸದರು ತಮ್ಮ ಹಾಗೂ ಜನರ ನಡುವೆ ಯಾವುದೇ ಅಡ್ಡಗೋಡೆಗಳಿರದೇ ಇರುವಂತೆ ನೋಡಿಕೊಳ್ಳಬೇಕೆಂಬ ಸಂದೇಶವನ್ನು ಪರೋಕ್ಷವಾಗಿ ನೀಡಿದ್ದಾರೆಂದು ಬರೆದಿರುವ ಗಂಭೀರ್, `ಕುಶಲ ಸಂಸದ'ರಾಗುವುದು ಹೇಗೆಂಬ ಬಗ್ಗೆಯೂ ಪ್ರಧಾನಿ ಈ ಸಂದರ್ಭ ವಿವರಿಸಿದರು ಎಂದು ತಿಳಿಸಿದ್ದಾರೆ.

ವೈಯಕ್ತಿಕ ಪ್ರತಿಷ್ಠೆಗಾಗಿ ಕಾರ್ಯನಿರ್ವಹಿಸುವ ಬದಲು ಟೀಂ ವರ್ಕ್ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದರಲ್ಲದೆ, ಸಂಸದರು ತಮ್ಮ ಕೆಲಸ ಕಾರ್ಯಗಳ ನಡುವೆ ತಮ್ಮ ಆರೋಗ್ಯ ಹಾಗೂ ತಮ್ಮ ಕುಟುಂಬದ ಕಡೆಗೆ ತಮಗಿರುವ ಜವಾಬ್ದಾರಿಯನ್ನು ನಿರ್ಲಕ್ಷ್ಯಿಸಬಾರದೆಂದೂ ಕಿವಿ ಮಾತು ಹೇಳಿದರೆಂದು ಗಂಭೀರ್ ವಿವರಿಸಿದ್ದಾರೆ.

ಊಟದ ಸಮಯ ಚಪಾತಿಯ ತಟ್ಟೆಯನ್ನು ಕೈಗೆತ್ತಿಕೊಂಡು ಎಲ್ಲರಿಗೂ ಪ್ರಧಾನಿ ತಾವೇ ಬಡಿಸಿದಾಗ ಸಂಸದರೆಲ್ಲರೂ ಮೂಕವಿಸ್ಮಿತರಾದರೆಂದೂ ಗಂಭೀರ್ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X