Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೊಸೆಯನ್ನು ಅತ್ಯಾಚಾರಗೈದ ಆರೋಪ: ಮಾಜಿ...

ಸೊಸೆಯನ್ನು ಅತ್ಯಾಚಾರಗೈದ ಆರೋಪ: ಮಾಜಿ ಬಿಜೆಪಿ ಶಾಸಕನ ವಿರುದ್ಧ ಎಫ್‍ಐಆರ್

ವಾರ್ತಾಭಾರತಿವಾರ್ತಾಭಾರತಿ10 Aug 2019 1:52 PM IST
share
ಸೊಸೆಯನ್ನು ಅತ್ಯಾಚಾರಗೈದ ಆರೋಪ: ಮಾಜಿ ಬಿಜೆಪಿ ಶಾಸಕನ ವಿರುದ್ಧ ಎಫ್‍ಐಆರ್

ಹೊಸದಿಲ್ಲಿ, ಆ.10:  ತನ್ನ ಸೊಸೆಯನ್ನೇ ಬೆದರಿಸಿ ಅತ್ಯಾಚಾರಗೈದ ಆರೋಪ ಹೊತ್ತಿರುವ ಮಾಜಿ ಬಿಜೆಪಿ ಶಾಸಕ ಮನೋಜ್ ಶೊಕೀನ್ ವಿರುದ್ಧ ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಂಗ್ಲೋಯಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮನೋಜ್ ವಿರುದ್ಧ ಸಂತ್ರಸ್ತೆ ಗುರುವಾರ ಪೊಲೀಸ್ ದೂರು ನೀಡಿದ ನಂತರ ಎಫ್‍ಐಆರ್ ದಾಖಲಾಗಿದೆ.

ಸಂತ್ರಸ್ತೆಯ ದೂರಿನ ಪ್ರಕಾರ ಡಿಸೆಂಬರ್ 31, 2018ರ ರಾತ್ರಿ ಆಕೆ ತನ್ನ ಪತಿ, ಸೋದರ ಹಾಗೂ ಸೋದರ ಸಂಬಂಧಿ ಜತೆ ಮೀರ ಬಾಘ್ ಪ್ರದೇಶದಲ್ಲಿರುವ ಗಂಡನ ಮನೆಗೆ ಹೊರಟಿದ್ದರೂ ಪತಿ ಆಕೆಯನ್ನು ಪಶ್ಚಿಮವಿಹಾರ್ ಪ್ರದೇಶದ ಹೋಟೆಲ್ ಒಂದಕ್ಕೆ ಹೊಸ ವರ್ಷಾಚರಣೆಗೆ ಕರೆದೊಯ್ದಿದ್ದರು. ಅಲ್ಲಿ ಹಲವು ಸಂಬಂಧಿಗಳು ಆಗಲೇ ಬಂದಿದ್ದರು, ಪಾರ್ಟಿ ನಂತರ  ಪತಿ  ಮನೆಗೆ  ತೆರಳಿದ್ದರೂ  ಮಧ್ಯ ರಾತ್ರಿ ಕಳೆದು 12.30ರ ಸುಮಾರಿಗೆ ಪತಿ ಆಕೆಯನ್ನು ಬಿಟ್ಟು ಮತ್ತೆ ತನ್ನ ಸ್ನೇಹಿತರೊಂದಿಗೆ ಹೊರ ಹೋಗಿದ್ದರೆನ್ನಲಾಗಿದೆ.

ಸುಮಾರು 1.30ರ ಹೊತ್ತಿಗೆ  ಸಂತ್ರಸ್ತೆ ಮಲಗಿದ್ದ ಕೋಣೆಯ ಬಾಗಿಲು ಬಡಿದ ಸದ್ದು ಕೇಳಿ ಆಕೆ ಬಾಗಿಲು ತೆರೆದಾಗ ಮಾವ ಬಾಗಿಲಲ್ಲಿ ನಿಂತು ಮಾತನಾಡುವುದಿದೆ ಎಂದು ಹೇಳಿ ಒಳ ಬಂದು ಆಕೆಯ ಜತೆ ಅನುಚಿತವಾಗಿ ವರ್ತಿಸಿ ನಂತರ ಬಂದೂಕು ತೆಗೆದು ಬೆದರಿಸಿ ಬೊಬ್ಬಿಟ್ಟರೆ ಸೋದರನನ್ನು ಕೊಲ್ಲುವುದಾಗಿ ಹೆದರಿಸಿ ಅತ್ಯಾಚಾರಗೈದಿದ್ದರೆಂದು ಸಂತ್ರಸ್ತೆ ದೂರಿದ್ದಾರೆ.

ಸೋದರನನ್ನು ಉಳಿಸುವ ಸಲುವಾಗಿ ಸಲುವಾಗಿ ದೂರು ನೀಡಲಿಲ್ಲ ಎಂದು ಆಕೆ ಹೇಳಿದ್ದಾರೆ.

ಡಿಸೆಂಬರ್ 2018ರಲ್ಲಿ ಮದುವೆಯಾದ ಬೆನ್ನಿಗೆ ಕೌಟುಂಬಿಕ ಹಿಂಸೆ ಪ್ರಕರಣವನ್ನು ತಾನು ದಿಲ್ಲಿ ಪೊಲೀಸರ ಮಹಿಳೆಯರ ವಿರುದ್ಧದ ಅಪರಾಧ ಘಟಕದಲ್ಲಿ ದಾಖಲಿಸಿದ್ದಾಗಿ, ಆದರೆ  ಅಲ್ಲಿ ಜುಲೈ 7ರಂದು ತನ್ನ ಹೆತ್ತವರಿಗೆ ಕಿರುಕುಳವಾದಾಗ ಸಾಕೇತ್ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದೆ. ಅಲ್ಲಿಯ ಅಧಿಕಾರಿ ತನ್ನ ಕುಟುಂಬಕ್ಕೆ ರಕ್ಷಣೆಯೊದಗಿಸುವುದಾಗಿ ಹೇಳಿದಾಗ ಹಿಂದಿನ ಘಟನೆಯನ್ನು ವಿವರಿಸಿದ್ದಾಗಿ ಸಂತ್ರಸ್ತೆ ಹೇಳಿದ್ದಾರೆ.

ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X